ಅನರ್ಹ ಫಲಾನುಭವಿಗಳ ತೆರವು; ಆಶ್ರಯ ಮನೆಗೆ ಬೀಗ


Team Udayavani, Oct 4, 2020, 3:59 PM IST

ಅನರ್ಹ ಫಲಾನುಭವಿಗಳ ತೆರವು; ಆಶ್ರಯ ಮನೆಗೆ ಬೀಗ

ಸಿಂಧನೂರು: ಸ್ಥಳೀಯ ನಗರಸಭೆ ವ್ಯಾಪ್ತಿಯ 31ನೇ ವಾರ್ಡ್‌ನ ಏಳುರಾಗಿ ಕ್ಯಾಂಪ್‌ನಲ್ಲಿನ ಆಶ್ರಯ ಮನೆಗಳಲ್ಲಿ ವಾಸವಿದ್ದ ಅನರ್ಹ ಫಲಾನುಭವಿಗಳನ್ನು ನಿವಾಸಿಗಳ ವಿರೋಧದ ಮಧ್ಯೆಯೂ ತೆರವುಗೊಳಿಸಿ 47 ಮನೆಗಳಿಗೆನಗರಸಭೆ ಮತ್ತು ಪೊಲೀಸ್‌ ಅಧಿಕಾರಿಗಳು ಬೀಗ ಜಡಿದ ಪ್ರಸಂಗ ಶನಿವಾರ ನಡೆಯಿತು.

ಲೋಕಾಯುಕ್ತ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿ ಏಳುರಾಗಿ ಕ್ಯಾಂಪ್‌ನಲ್ಲಿನ ಆಶ್ರಯ ಮನೆಗಳಲ್ಲಿ ವಾಸವಿದ್ದ ಅನರ್ಹ ಫಲಾನುಭವಿಗಳನ್ನು ತೆರವುಗೊಳಿಸಿ ಮನೆಗೆ ಬೀಗ ಜಡಿದು ನಗರಸಭೆ ವಶಕ್ಕೆ ತೆಗೆದುಕೊಳ್ಳಲಾಯಿತು.

ಈ ವೇಳೆ ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಮಾತನಾಡಿ ಇಲ್ಲಿನ 180 ಆಶ್ರಯ ಮನೆಗಳಲ್ಲಿ 47 ಮನೆಗಳಲ್ಲಿ ವಾಸವಿರುವ ಅನರ್ಹರಿಗೆ ಯಾವುದೇ ಹಕ್ಕುಪತ್ರ ವಿತರಣೆ ಮಾಡಿಲ್ಲ. ಅವರ ವಿರುದ್ಧ ಯಶವಂತ ಕೋವಿ ಎಂಬವರು ದೂರು ಸಲ್ಲಿಸಿದ್ದಾರೆ. ದೂರಿನ ಮೇರೆಗೆ ಜಿಲ್ಲಾಧಿಕಾರಿ ಆದೇಶದಂತೆ ಕಾರ್ಯಾಚರಣೆ ನಡೆಸಲಾಗಿದೆ.  ಅರ್ಹ ಫಲಾನುಭವಿಗಳಿಗೆ ಮನೆ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಮನೆ ತೆರವುಗೊಳಿಸಿದ ಕುರಿತು ಲೋಕಾಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದರು.

ಸಿಪಿಐ ಜಿ.ಚಂದ್ರಶೇಖರ, ವಿಜಯಕೃಷ್ಣ, ನಗರಸಭೆ ಸಿಬ್ಬಂದಿ ಇದ್ದರು.

ವಿರೋಧ: ಏಕಾಏಕಿ ಅನರ್ಹ ಫಲಾನುಭವಿಗಳನ್ನು ಆಶ್ರಯ ಮನೆಗಳಿಂದ ಹೊರ ಹಾಕುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಹೋರಾಟಗಾರ ಡಿ.ಎಚ್‌. ಪೂಜಾರ ಮಾತನಾಡಿ, ನಗರಸಭೆ ಅಧಿಕಾರಿಗಳು ಮೇಲಾಧಿಕಾರಿಗಳು ಹಾಗೂ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಬಡವರನ್ನು ಮನೆಯಿಂದ ಹೊರ ಹಾಕುತ್ತಿದ್ದಾರೆ. ನಿಜವಾದ ಫಲಾನುಭವಿಗಳೇ ಇಲ್ಲಿ ವಾಸವಿದ್ದು, ಅವರನ್ನು ತೆರವುಗೊಳಿಸುವುದು ಸರಿಯಲ್ಲ ಎಂದರು. ಹನುಮಂತ ಯರದಿಹಾಳ, ಚಿಟ್ಟಿಬಾಬು, ದಲಿತ ಸೈನ್ಯ ಮುಖಂಡ ಚನ್ನಬಸವ, ಬಸಮ್ಮ ಸೇರಿದಂತೆ ಅನೇಕರು ಇದ್ದರು

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.