ಅಧಿಕಾರಿಗಳಿಂದ 13 ಜನರ ಮಾಹಿತಿ ಸಂಗ್ರಹ
Team Udayavani, Apr 4, 2020, 5:59 PM IST
ಸಿಂಧನೂರು: ದೆಹಲಿ ಧರ್ಮಸಭೆಗೆ ಹೋಗಿ ಬಂದಂತಹ ತಾಲೂಕಿನ ವಿವಿಧ ಗ್ರಾಮಗಳಲ್ಲಿನ 13 ಜನರನ್ನು ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
ತುರ್ವಿಹಾಳ, ಕಲ್ಮಂಗಿಯಲ್ಲಿ 2 ಜನ, ಗುಂಜಳ್ಳಿ ಹಾಗೂ ಗುಂಜಳ್ಳಿಕ್ಯಾಂಪ್ನಿಂದ 11 ಜನರು ದೆಹಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿರುವುದು ತಿಳಿದು ಬಂದಿದೆ. ಆದರೆ ಇವರೆಲ್ಲರೂ ಕಳೆದ ಒಂದೂವರೆ ತಿಂಗಳ ಹಿಂದೆ ಹೋಗಿ ಬಂದಿರುವುದಾಗಿ ಅಧಿ ಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಇದೇ ತರಹ ಹಂಚಿನಾಳಕ್ಯಾಂಪ್ಗೆ ಗುಜರಾತಿನಿಂದ ವ್ಯಕ್ತಿಯೋರ್ವನು ಬಂದು ಇಲ್ಲಿಯೇ ಎಗ್ರೈಸ್ ವ್ಯಾಪಾರ ಮಾಡುತ್ತಿದ್ದಾನೆ. ಇತನು ಗುಜರಾತಿನಲ್ಲಿ ನಡೆದ ಧರ್ಮಸಭೆಗೆ ಹೋಗಿ ಬಂದಿರುವುದಾಗಿ ಖಚಿತ ಮಾಹಿತಿ ನೀಡಿದ್ದಾನೆ. 13 ಜನರನ್ನು ಸೇರಿಸಿ ಇತನನ್ನು ಅಧಿಕಾರಿಗಳು ತನಿಖೆ ಕೈಗೊಂಡು ಹೋಂಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ವೈದ್ಯಾಧಿಕಾರಿಗಳು ಇವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ತಾಲೂಕಿನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ತಾಲೂಕಿನ ವಿವಿಧ ಗ್ರಾಮಗಳಿಂದ ದೆಹಲಿಯ ನಿಜಾಮುದ್ದೀನ್ ಧರ್ಮಸಭೆಯಲ್ಲಿ 13 ಜನರು ಒಂದೂವರೆ ತಿಂಗಳ ಹಿಂದೆ ಹೋಗಿ ಬಂದಿರುವುದಾಗಿ ತಿಳಿದು ಬಂದಿದೆ. ಇನ್ನೂ ಗುಜರಾತಿನಿಂದ ಹಂಚಿನಾಳಕ್ಯಾಂಪ್ಗೆ ಬಬ್ಬ ವ್ಯಕ್ತಿ ಬಂದು ಇಲ್ಲಿಯೇ ಎಗ್ರೈಸ್ ವ್ಯಾಪಾರ ನಡೆಸುತ್ತಿರುವುದಾಗಿ ತಿಳಿದು ಬಂದಿದ್ದು, ಇವರೆಲ್ಲರನ್ನು ಹೋಂಕ್ವಾರಂಟೈನ್ನಲ್ಲಿ ಇರಿಸಲಾಗಿದೆ. –ಮಂಜುನಾಥ ಭೋಗಾವತಿ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್