ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ
Team Udayavani, Sep 17, 2022, 5:45 PM IST
ಲಿಂಗಸುಗೂರು: ಪಟ್ಟಣದ ಬಸ್ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಕಲ್ಯಾಣ ಸಾರಿಗೆ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ವೆಂಕಟೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಸಿಸಿ ಕಾಮಗಾರಿ ಪರಿಶೀಲನೆ ನಡೆಸಿ ಬಸ್ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ ಎಂದರು.
ಈಗಾಗಲೇ ಹೊಸ ಬಸ್ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಸ್ ನಿಲ್ದಾಣದ ಒಳಾಂಗಣದಲ್ಲಿ ಸಿಸಿ, ಪ್ರಯಾಣಿಕರಿಗೆ ಶುದ್ಧ ಕುಡಿವ ನೀರು, ಹೈಟೆಕ್ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಈ ವೇಳೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪ್ರಯಾಣಿಕರು ಒತ್ತಾಯಿಸಿದರು.
ಕಾರ್ಯನಿರ್ವಾಹಕ ಅಭಿಯಂತರ ಅಣ್ಣಪ್ಪ, ರಾಜಶೇಖರ್, ಆದಪ್ಪ ಕುಂಬಾರ, ಬಸಲಿಂಗಪ್ಪ, ಅಮರಯ್ಯ, ಹುಲಗಯ್ಯ, ಹಂಪನಗೌಡ, ಶರಣಬಸವ, ಸಂಜಯಕುಮಾರ, ಬೇಗಂ ಇದ್ದರು.