ಕೆರೆಗಳ ಸ್ಥಿತಿಗತಿ ಅಧ್ಯಯನ ನಡೆಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Apr 5, 2022, 5:35 PM IST
ರಾಯಚೂರು: ಜಿಲ್ಲೆಯಲ್ಲಿನ ಜಲ ಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸುವುದು ಕೆರೆಗಳ ಸಂರಕ್ಷಣೆ ಸಮಿತಿಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಅಂತರ್ಜಲ ಮಟ್ಟದ ಬಗ್ಗೆ ಅಧ್ಯಯನ ಕೈಗೊಂಡು ಅಲ್ಲಿನ ಸ್ಥಿತಿ-ಗತಿಗಳ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ| ಅವಿನಾಶ್ ರಾಜೇಂದ್ರ ಮೆನನ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಕೆರೆಗಳ ಸಂರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾನಾ ಕಾರಣಗಳಿಂದ ನಶಿಸುತ್ತಿರುವ ಕೆರೆಗಳ ಸಂರಕ್ಷಣೆ ಮಾಡಿ ಅವುಗಳ ಮರು ನಿರ್ಮಾಣ, ಪರಿಸರ ಸಮತೋಲನ ಕಾಯ್ದುಕೊಳ್ಳುವುದು ಮತ್ತು ಮುಂದಿನ ಪೀಳಿಗೆಗೂ ಜಲ ಕಾಯಗಳನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನೀರು ಜೀವರಕ್ಷಣೆಯ ಒಂದು ಭಾಗವಾಗಿದ್ದು, ಅದರ ಸಂರಕ್ಷಣೆ ಮಾಡುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸಮಿತಿ ಮಾಡಲಾಗಿದೆ. ಒತ್ತುವರಿಯಾದ ಕೆರೆಗಳು, ಒತ್ತುವರಿ ತೆರವುಗೊಳಿಸಿದ ಕೆರೆಗಳು ಹಾಗೂ ಒತ್ತುವರಿ ತೆರೆವುಗೊಳಿಸಲು ಸಾಧ್ಯವಾಗದ ಕೆರೆಗಳ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಿದರು.
ನಗರೀಕರಣ, ಕೈಗಾರಿಕೀಕರಣ ಮತ್ತು ಜನಸಂಖ್ಯಾ ಸ್ಫೋಟದಿಂದ ಕೆರೆ ಒಡ್ಡುಗಳನ್ನು ಒಡೆದು ಮತ್ತು ನೀರನ್ನು ಹೊರಗೆ ಹರಿಬಿಟ್ಟು ನಗರ ಮತ್ತು ಕೈಗಾರಿಕಾ ಪ್ರದೇಶವಾಗಿ ಭೂ ಬಳಕೆಗಾಗಿ ಪರಿವರ್ತಿಸಲಾಗುತ್ತಿದೆ. ಇಂತಹ ಕೆರೆಗಳು ಕೃಷಿ, ಕುಡಿವ ನೀರು ಮತ್ತು ಗ್ರಾಮೀಣ ಕೈಗಾರಿಕೆಗಳ ಮುಖ್ಯ ಮೂಲವಾಗಿವೆ. ಜಲ ಮೂಲಗಳನ್ನು ನಾಶಪಡಿಸುತ್ತಿರುವುದರಿಂದ ತೀವ್ರ ನೀರಿನ ಕೊರತೆ ಮತ್ತು ಅಂತರ್ಜಲ ಕಡಿಮೆಯಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ ಆರ್.ಎ, ಎಡಿಸಿ ಕೆ.ಆರ್. ದುರುಗೇಶ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು