ಈ ಬಾರಿಯೂ ತುಂಗಾ ಸ್ನಾನವಿಲ್ಲದೆ ರಾಯರ ಆರಾಧನೆ?


Team Udayavani, Aug 5, 2018, 6:00 AM IST

mantralayam.jpg

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಹಿಂದಿನ ಆರಾಧನೆಗೆ ತುಂಗಭದ್ರಾ ನದಿಯಲ್ಲಿ ನೀರಿಲ್ಲದೇ ಭಕ್ತರು ಪೇಚಾಡಿದ್ದರು. ಆದರೆ, ಈ ಬಾರಿ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದರೂ ನದಿಗೆ ನೀರು ಹರಿಯುವುದೇ ಎಂಬ ಆತಂಕ ಭಕ್ತರನ್ನು ಕಾಡುತ್ತಿದೆ.

ಈ ಬಾರಿ ಉತ್ತಮ ಮಳೆಯಾಗಿ ಟಿಬಿ ಜಲಾಶಯ ತುಂಬಿ 100 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಹೀಗಾಗಿ ಕೆಲ ದಿನಗಳ ಮಟ್ಟಿಗೆ ತುಂಗಭದ್ರಾ ಜಲಾಶಯ ಮಂಡಳಿ ನದಿಗೆ ನೀರು ಹರಿಸಿತ್ತು. ಆದರೆ, ಈಗ ಕೃಷಿ ಮತ್ತು ಕುಡಿಯಲು ನೀರು ಹರಿಸುತ್ತಿರುವ ಕಾರಣ ನದಿಗೆ ಹರಿಸುತ್ತಿದ್ದ ನೀರನ್ನು ಪುನಃ ಸ್ಥಗಿತಗೊಳಿಸಿದೆ. ಇದರಿಂದ ನದಿಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಆರಾಧನೆ ಹೊತ್ತಿಗೆ ನದಿಯಲ್ಲಿ ಮತ್ತೆ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ಆಷಾಢದ ವೇಳೆ ನದಿಯಲ್ಲಿ ಭಾಗೀರಥಿ ನೆಲೆಸಿರುತ್ತಾಳೆ. ತುಂಗೆಯಲ್ಲಿ ಮಿಂದರೆ ಪುಣ್ಯ, ಜತೆಗೆ ರಾಯರ ದರ್ಶನವೂ ಆಗಲಿದೆ ಎಂಬ ಕಾರಣಕ್ಕೆ ಭಕ್ತರು ಮಂತ್ರಾಲಯಕ್ಕೆ ಬರುತ್ತಿದ್ದಾರೆ ಎನ್ನುತ್ತಾರೆ ಮಠದ ವ್ಯವಸ್ಥಾಪಕರು. ಆದರೆ, ಕಳೆದ 3 ದಿನಗಳಿಂದ ನದಿಯಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದೆ. ಆರಾಧನೆಗೆ ಇನ್ನೂ 20 ದಿನ ಬಾಕಿಯಿದೆ.  ಜಲಾಶಯದಲ್ಲಿ ನೀರಿಗೆ ಬೇಡಿಕೆ ಹೆಚ್ಚಿದ್ದು, ಬಲದಂಡೆಯ ಎರಡು ಕಾಲುವೆ ಹಾಗೂ ಎಡದಂಡೆ ಒಂದು ಕಾಲುವೆ ಮೂಲಕ ಈಗಾಗಲೇ ನಿತ್ಯ 10 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಅಷ್ಟಾದರೂ ಮಾನ್ವಿ ಭಾಗದ 95ರಿಂದ 104 ಮೈಲಿವರೆಗೆ ನೀರು ತಲುಪುತ್ತಿಲ್ಲ. ಹೀಗಾಗಿ ಬೆಳೆಗೆ ನೀರು ಹರಿಸುವ ಒತ್ತಡ ಟಿಬಿ ಬೋರ್ಡ್‌ ಮೇಲೆ ಹೆಚ್ಚುತ್ತಿದೆ.

ಶ್ರೀಮಠದಿಂದ ಮನವಿ ಸಾಧ್ಯತೆ
ಕಳೆದ ಬಾರಿ ಜಲಾಶಯದಲ್ಲಿ ನೀರು ಕಡಿಮೆಯಿದ್ದ ಕಾರಣ ಆರಾಧನೆಗೆ ನೀರು ಹರಿಸುವಂತೆ ಶ್ರೀಮಠದಿಂದ ಮಾಡಿದ್ದ ಮನವಿಗೆ ಬೋರ್ಡ್‌ ಸ್ಪಂದಿಸಿರಲಿಲ್ಲ. ಆದರೆ, ಈ ಬಾರಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನೀರು ಹರಿಸುವ ವಿಶ್ವಾಸವಿದೆ. ಆ.25ರಿಂದ ರಾಯರ ಆರಾಧನೆ ಜರುಗಲಿದೆ. ಸಪ್ತರಾತ್ರೋತ್ಸವದಲ್ಲಿ ಬರುವ ಭಕ್ತರ ಸಂಖ್ಯೆ ಹೆಚ್ಚು. ಇದನ್ನರಿತ ಶ್ರೀಮಠ ಈ ಬಾರಿಯೂ ಟಿಬಿ ಬೋರ್ಡ್‌ಗೆ ಪತ್ರ ಬರೆಯಲು ನಿರ್ಧರಿಸಿದೆ.

ಆರಾಧನೆಗೆ ಬರುವ ಭಕ್ತರು ನದಿ ಸ್ನಾನಕ್ಕೆ ಹಾತೊರೆಯುವುದು ಸಹಜ. ಈಗಾಗಲೇ ನದಿಯಲ್ಲಿ ನೀರು ಹರಿಯುತ್ತಿದೆ. ಆರಾಧನೆಗೆ ಹೆಚ್ಚುವರಿ ನೀರು ಹರಿಸುವಂತೆ ಟಿಬಿ ಬೋರ್ಡ್‌ಗೆ ಮನವಿ ಮಾಡಲು ನಿರ್ಧರಿಸಲಾಗಿದೆ. ಒಂದು ವೇಳೆ ನೀರು ಬರದಿದ್ದರೆ ಸ್ನಾನಘಟ್ಟದಲ್ಲಿ ಹೆಚ್ಚುವರಿ ನಳಗಳ ವ್ಯವಸ್ಥೆ ಮಾಡಲಾಗುವುದು.
– ಶ್ರೀನಿವಾಸರಾವ್‌, ಮಂತ್ರಾಲಯ ಮಠದ ವ್ಯವಸ್ಥಾಪಕ

ಈಗ ಜಲಾಶಯ ಭರ್ತಿಯಾಗಿದ್ದು 100 ಟಿಎಂಸಿ ಅಡಿ ನೀರು ಲಭ್ಯವಿದೆ. ಆದರೆ, ನಿತ್ಯ 10 ಸಾವಿರ ಕ್ಯುಸೆಕ್‌ ಹೊರ ಹರಿವಿದೆ. ಒಳ ಹರಿವು ಗಣನೀಯವಾಗಿ ಕುಗ್ಗಿದೆ. ಆರಾಧನೆ ವೇಳೆ ನೀರು ಹರಿಸುವ ಬಗ್ಗೆ ಈಗಲೇ ಹೇಳಲಾಗದು. ನೀರಿಗೆ ತುಂಬಾ ಬೇಡಿಕೆಯಿದ್ದು, ರೈತರಿಂದ ಒತ್ತಡ ಹೆಚ್ಚುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಲ್ಲಿ ಮಾತ್ರ ನದಿಗೆ ನೀರು ಹರಿಸಲು ಸಾಧ್ಯ.
– ಶಂಕರೇಗೌಡ, ಮುಖ್ಯ ಅಭಿಯಂತರ, ಮುನಿರಾಬಾದ್‌ ನೀರಾವರಿ ನಿಗಮ

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.