ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಚೆಕ್ ವಿತರಣೆ
Team Udayavani, Dec 26, 2021, 1:25 PM IST
ಸುರಪುರ: ಇತ್ತೀಚೆಗೆ ಕೊರೊನಾ ರೋಗದಿಂದ ಮೃತಪಟ್ಟವರ ಕುಟುಂಬಗಳಿಗೆ ಶಾಸಕ ರಾಜುಗೌಡ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಚೆಕ್ ವಿತರಿಸಿದರು.
ನಂತರ ಮಾತನಾಡಿದ ಅವರು, ಮೊದಲ ಹಂತದಲ್ಲಿ 10 ಕುಟುಂಬಗಳಿಗೆ ಚೆಕ್ ನೀಡಲಾಗಿತ್ತು. ಈಗ ಎರಡನೇ ಹಂತದಲ್ಲಿ ಕೆಂಭಾವಿ 2 ಸೇರಿ ಒಟ್ಟು 12 ಕುಟುಂಬಗಳಿಗೆ ಮಂಜೂರಿಯಾಗಿ ಅನುದಾನ ಬಿಡುಗಡೆಯಾಗಿದ್ದು ಚೆಕ್ ವಿತರಿಸಲಾಗುತ್ತಿದೆ ಎಂದರು.
ಕೊರೊನಾಕ್ಕೆ ತುತ್ತಾಗಿ ಕ್ಷೇತ್ರದಲ್ಲಿ ಒಟ್ಟು 67 ಜನ ಮೃತ ಪಟ್ಟಿದ್ದಾರೆ. ಈ ಪೈಕಿ 33 ಕುಟುಂಬಗಳಿಗೆ ಹಣ ಮಂಜೂರಿಯಾಗಿದೆ. ಈ ಕ್ಷೇತ್ರದವರು ಬೇರೆ ಕಡೆ ರೋಗಕ್ಕೆ ತುತ್ತಾಗಿ ಮೃತಪಟ್ಟ ಕುಟುಂಬದವರಿಂದ 34 ವೈಯಕ್ತಿಕ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಅನುದಾನ ಮಂಜೂರಿಯಾಗಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವ ಡಾ| ಕೆ. ಸುಧಾಕರ ಅವರೊಂದಿಗೆ ಮಾತನಾಡಿದ್ದು, ಮಂಜೂರಿ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, 33 ಕುಟುಂಬಗಳ ಪೈಕಿ 24 ಬಿಪಿಎಲ್, 9 ಎಪಿಎಲ್ ಕುಟುಂಬಗಳಿವೆ. ಎಪಿಎಲ್ ಕುಟುಂಬಸ್ಥರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 2 ಬಿಪಿಎಲ್ ಕುಟುಂಬಗಳಿಗೆ ಅನುದಾನ ಬಂದಿಲ್ಲ. ಅವರಿಗೂ ಶೀಘ್ರ ಅನುದಾನ ಬಿಡುಗಡೆಯಾಗಲಿದೆ ಎಂದರು.
ಈ ವೇಳೆ ಶಿರಸ್ತೇದಾರ್ ಸೋಮಶೇಖರ ನಾಯಕ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಗ್ರಾಲೆ ಪ್ರದೀಪ, ಮಲ್ಲಮ್ಮ, ಶಂಕರ, ಭೀಮು ಯಾದವ, ವೆಂಕಟೇಶ ನಾಯಕ, ಧರ್ಮರಾಜ ಬಡಿಗೇರ, ಕೃಷ್ಣಾ ಬಾದ್ಯಾಪುರ ಹೊನ್ನಪ್ಪ ತಳವಾರ, ಅರವಿಂದ ಬಿಲ್ಲವ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ