ಪ್ರವಾಸಿ ತಾಣವಾಗುವುದೇ ಜಲದುರ್ಗ ಕೋಟೆ?


Team Udayavani, Oct 6, 2018, 12:58 PM IST

ray-1.jpg

ಲಿಂಗಸುಗೂರು: ತಾಲೂಕಿನ ಐತಿಹಾಸಿಕ ಜಲದುರ್ಗ ಕೋಟೆಗೆ ಪ್ರವಾಸೋದ್ಯಮ ಇಲಾಖೆ 1 ಕೋಟಿ ರೂ. ಮಂಜೂರು ಮಾಡಿದ್ದು, ಅವಸಾನದಂಚಿನಲ್ಲಿರುವ ಕೋಟೆ ಅಭಿವೃದ್ಧಿಗೊಂಡು ಪ್ರವಾಸಿಗರನ್ನು ಸೆಳೆಯುವ ನಿರೀಕ್ಷೆ ಗರಿಗೆದರಿವೆ. 

ತಾಲೂಕು ಕೇಂದ್ರ ಸ್ಥಾನದಿಂದ 18 ಕಿ.ಮೀ. ಅಂತರದಲ್ಲಿರುವ ಕೃಷ್ಣಾ ನದಿ ದಡದಲ್ಲಿರುವ ಜಲದುರ್ಗ ಕೋಟೆ ಪರಿಸರ ಪ್ರಿಯರನ್ನು ಸೆಳೆಯುತ್ತಿದೆ. ಆದರೆ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ಸೌಕರ್ಯ ಮತ್ತು ಕೋಟೆ ಅಭಿವೃದ್ಧಿಗೆ ಆಸಕ್ತಿ ತೋರದ್ದರಿಂದ ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿಲ್ಲ. ಕೋಟೆಯ ಶಿಥಿಲ ಕಟ್ಟಡಗಳಿಗೆ ಕಾಯಕಲ್ಪ ನೀಡಿ, ಕೋಟೆ ಆವರಣದಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ, ಉದ್ಯಾನ ಇತರೆ ಸೌಲಭ್ಯ ಒದಗಿಸಿದಲ್ಲಿ ಇದೊಂದು ಸುಂದರ ಪ್ರವಾಸಿ ತಾಣವಾಗುವುದರಲ್ಲಿ ಸಂಶಯವಿಲ್ಲ.

ಜಲದುರ್ಗ ಕೋಟೆಯನ್ನು ದೇವಗಿರಿಯ ಯಾದವರು 12ನೇ ಶತಮಾನದಲ್ಲಿ ಕಟ್ಟಿಸಿರಬಹುದೆಂದು ಹೇಳಲಾಗುತ್ತಿದೆ. ಆದಿಲ್‌ಶಾಹಿಗಳ ವಾಸ್ತುಶಿಲ್ಪ ಎದ್ದು ಕಾಣುತ್ತಿದೆ. ಸುಮಾರು 400 ಅಡಿ ಎತ್ತರದ ಕೋಟೆಯ ಬುರುಜು ಕಟ್ಟಲಾಗಿದೆ. ಹಿಂದೆ ಅಪರಾಧಿಗಳನ್ನು ಕೋಟೆ ಬುರುಜು ಮೇಲಿಂದ ಕೃಷ್ಣಾ ನದಿಗೆ ನೂಕಿ ಶಿಕ್ಷೆ ಕೊಡುತ್ತಿದ್ದರೆಂದು ಹೇಳಲಾಗುತ್ತಿದೆ. ಈ ಕೋಟೆಯ ಸುತ್ತಲೂ ಕೃಷ್ಣಾ ನದಿ ಕವಲೊಡೆದು ಹರಿಯುತ್ತಿದ್ದರಿಂದ ಜಲದುರ್ಗ ಕೋಟೆ ಅತ್ಯಂತ ರಕ್ಷಣಾ ಕೋಟೆಯಾಗಿತ್ತು.

ಆಕ್ರಮಣ: ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳ ಸಂರಕ್ಷಣಾ ಕಾಯ್ದೆ ಪ್ರಕಾರ ಯಾವುದೇ ಐತಿಹಾಸಿಕ ತಾಣಗಳ 100 ಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ. ಹಾಗೂ ಖಾಸಗಿ ವ್ಯಕ್ತಿಗಳು ವಾಸಿಸುವಂತಿಲ್ಲ. ಅಲ್ಲದೆ ಸ್ಮಾರಕದ 200 ಮೀಟರ್‌ ವ್ಯಾಪ್ತಿ ನಿರ್ಬಂಧಿ ತ ಪ್ರದೇಶ ಉಲ್ಲಂಘಿಸಿದರೆ ಶಿಕ್ಷಾರ್ಹ ಅಪರಾಧ ಎಂಬ ಕಾನೂನುಗಳಿದ್ದರೂ ಅದು ಕೇವಲ ಕಾಗದದಲ್ಲಿ ಮಾತ್ರ ಎನ್ನುವಂತಾಗಿದೆ. ಈ ಕೋಟೆಗಳಲ್ಲಿ ಜನ ಕಟ್ಟಡಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದಾರೆ. ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಂಡ ಸ್ಮಾರಕಗಳ ಜಾಗಗಳನ್ನು ವಶಕ್ಕೆ ಪಡೆಯಲು ಪುರಾತತ್ವ ಸರ್ವೇಕ್ಷಣಾ ಇಲಾಖೆ ಜಲದುರ್ಗ ಕೋಟೆಯತ್ತ ಇದುವರೆಗೂ ಗಮನಹರಿಸಿಲ್ಲ.

ನಾಮಫಲಕವೇ ಇಲ್ಲ: ತಾಲೂಕು ಕೇಂದ್ರ ಸ್ಥಾನದಿಂದ ಜಲದುರ್ಗ ಕೋಟೆವರೆಗೂ ಮಾರ್ಗಸೂಚಿ ನಾಮಫಲಕವೇ ಇಲ್ಲ. ಪ್ರವಾಸೋದ್ಯಮ ಇಲಾಖೆ ರಾಜ್ಯದ ನಾನಾ ಸ್ಥಳಗಳಲ್ಲಿ ನಾಮಫಲಕ ಹಾಕಿದೆ. ಆದರೆ ಐತಿಹಾಸಿಕ ಜಲದುರ್ಗ ಕೋಟೆಗೆ ಮಾರ್ಗ ತೋರುವ ಫಲಕಗಳು ಇಲ್ಲದಾಗಿದೆ. ಹೀಗಾಗಿ ಈ ಕೋಟೆ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ಕೊರತೆ ಕಾಡುತ್ತಿದೆ. ಕೋಟೆಯ ಕೆಲವೆಡೆ ಗೋಡೆಗಳು ಕುಸಿದಿವೆ. ಅದನ್ನು ಪುನರುಜ್ಜೀವನಗೊಳಿಸಲು ಪುರಾತತ್ವ ಮತ್ತು ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯವಹಿಸಿದೆ. ಸರ್ಕಾರ ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿರುವ ಕೋಟೆಗಳನ್ನು ಅಭಿವೃದ್ಧಿಪಡಿಸಲು ತೋರಿದ ಆಸಕ್ತಿಯನ್ನು ಜಲದುರ್ಗ ಕೋಟೆಗೆ ತೋರುತ್ತಿಲ್ಲ ಎಂಬುದು ಇಲ್ಲಿನ ಜನರ ಆರೋಪವಾಗಿದೆ.

ರಸ್ತೆ ಅಭಿವೃದ್ಧಿ: 2012-13ನೇ ಸಾಲಿನಲ್ಲಿ ಆಗಿನ ಶಾಸಕ ಮಾನಪ್ಪ ವಜ್ಜಲ್‌ ಅವರು 3.60 ಕೋಟಿ ರೂ. ಅನುದಾನ ತಂದು ರಸ್ತೆ ಅಭಿವೃದ್ಧಿ, ನದಿಗೆ ತಡೆಗೋಡೆ, ಸಿಸಿ ರಸ್ತೆ ನಿರ್ಮಿಸಿದ್ದಾರೆ. ಈಗಿನ ಶಾಸಕ ಡಿ.ಎಸ್‌.ಹೂಲಗೇರಿ ಅವರು ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಇದನ್ನು ಅಗತ್ಯ ಕೆಲಸಗಳಿಗೆ ಬಳಕೆ ಮಾಡಬೇಕಾದ ಅಗತ್ಯವಿದೆ

ಐತಿಹಾಸಿಕ ತಾಣದಲ್ಲಿ ಆಗಬೇಕಿರುವುದೇನು..? ಕೋಟೆಗೆ ಬರುವ ಅನೇಕ ಪ್ರವಾಸಿಗರಿಗೆ ಮೂಲ ಸೌಕರ್ಯಗಳೇ ಇಲ್ಲದಂತಾಗಿದೆ. ಕೋಟೆ ಪಕ್ಕವೇ ನದಿ ಹರಿಯುತ್ತಿದ್ದರೂ ಕೋಟೆಗೆ ಆಗಮಿಸುವ ಪ್ರವಾಸಿಗರಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲ. ಹೀಗಾಗಿ ಪ್ರವಾಸಿಗರು ನೀರಿನ ಬಾಟಲಿ ಹಿಡಿದುಕೊಂಡೇ ಕೋಟೆ ನೋಡಲು ಬರಬೇಕಾದ ಅನಿವಾರ್ಯತೆ ಇದೆ. ಕೋಟೆಯ ಮೇಲೆ ಅಪಾಯ ಮಟ್ಟ ಇರುವುದರಿಂದ ಕೆಲವೆಡೆ ತಡೆಗೋಡೆ ನಿರ್ಮಿಸಬೇಕಾಗಿದೆ.

ಕೋಟೆ ಕಾವಲು ಗೋಪುರದಲ್ಲಿ ಸುತ್ತಲಿನ ಪ್ರಕೃತಿ ಸೌಂದರ್ಯ ವೀಕ್ಷಿಸಲು ವೀಕ್ಷಣಾ ಗೋಪುರ ನಿರ್ಮಿಸಬೇಕಿದೆ. ಕೋಟೆಯ ಹೊರಭಾಗದಲ್ಲಿರುವ ಜಾಗೆಯಲ್ಲಿ ಜಾಲಿಗಿಡಿಗಳ ಹೇರಳವಾಗಿ ಬೆಳೆದಿದ್ದು, ಕೋಟೆ ಸೌಂದರ್ಯ ಮರೆಮಾಚಿದೆ. ಹೀಗಾಗಿ ಪ್ರವಾಸಿಗರನ್ನು ಸೆಳೆಯಲು ಸುಂದರ ಉದ್ಯಾನ ನಿರ್ಮಿಸಬೇಕಿದೆ. ಇದಲ್ಲದೆ ಪ್ರವಾಸಿಗರ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಬೇಕಿದೆ. ಕೋಟೆಗೆ ಆಗಮಿಸುವ ಪ್ರವಾಸಿಗರಿಗೆ ತಾಲೂಕು ಕೇಂದ್ರದಿಂದ ಸಾರಿಗೆ ಸೌಲಭ್ಯ ಕಲ್ಪಿಸಬೇಕಿದೆ. ಇದಲ್ಲದೆ ಕೋಟೆ ಒಳಗೆ ಹಾಗೂ ಹೊರಗೆ ವಿದ್ಯುತ್‌ ದೀಪಗಳನ್ನು ಅಳವಡಿಸಿ ಕೋಟೆ ಸೌಂದರಿಕರಣಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಬೇಕು ಎನ್ನುತ್ತಾರೆ ಸಾರ್ವಜನಿಕರು.

ಐತಿಹಾಸಿಕ ಕೋಟೆ ನೋಡಲು ನಿತ್ಯವೂ ಪ್ರವಾಸಿಗರು ಬರುತ್ತಾರೆ. ಆದರೆ ಸೌಲಭ್ಯ ಇಲ್ಲದೆ ಪರದಾಡುತ್ತಾರೆ. ಸರ್ಕಾರ ಇಲ್ಲಿ ಅಗತ್ಯ ಸೌಲಭ್ಯ ಒದಗಿಸಿದರೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುಬಹುದು.  ತಿರುಪತಿ ಉಪ್ಪಾರ, ಸ್ಥಳೀಯ ನಿವಾಸಿ ಜಲದುರ್ಗ ಕೋಟೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಸಚಿವರಿಗೆ ಮನವಿ ಮಾಡಿದ್ದೆ. ಸಚಿವರು ಒಂದು ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಈ ಅನುದಾನದಲ್ಲಿ ಜಲದುರ್ಗದಲ್ಲಿ ಏನು ಕೆಲಸ ಅಗತ್ಯವಿದೆಯೋ ಅದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.
  ಡಿ.ಎಸ್‌.ಹೂಲಗೇರಿ, ಶಾಸಕರು ಲಿಂಗಸುಗೂರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.