ಜಲದುರ್ಗ ಸಂಗಮೇಶ್ವರ ದೇವರ ಗದ್ದುಗೆಗೆ ಹಾನಿ


Team Udayavani, Jun 12, 2022, 2:39 PM IST

12temple

ಲಿಂಗಸುಗೂರು: ನಿಧಿ ತೆಗೆಯುವ ಹುನ್ನಾರ ದೃಷ್ಟಿಯಲ್ಲಿಟ್ಟುಕೊಂಡು ಹರಿಕೆ ತೀರಿಸುವ ನೆಪವೊಡ್ಡಿ ತಾಲೂಕಿನ ಜಲದುರ್ಗ ಐತಿಹಾಸಿಕ ಕೋಟೆಯೊಳಗಿನ ಸಂಗಮೇಶ್ವರ ದೇವಸ್ಥಾನದ ಗದ್ದುಗೆಗೆ ಹಾನಿ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯಾವುದೇ ಕೋಟೆ ಕೊತ್ತಲಗಳು ನಿಷೇಧಿತ ವಲಯವಾಗಿದ್ದರಿಂದ ಇಲ್ಲಿ ಯಾವುದೇ ಕೋಟೆಗಳಿಗೆ ಧಕ್ಕೆ ತರುವ ಕೆಲಸ ನಿಷೇಧವಾಗಿದೆ.

ಜಲದುರ್ಗ ಕೋಟೆಯೊಳಗಿನ ಸಂಗಮೇಶ್ವರ ದೇವಸ್ಥಾನದ ಗದ್ದುಗೆಯನ್ನು ಖಾಸಗಿ ವ್ಯಕ್ತಿಗಳು ಜೀರ್ಣೋದ್ಧಾರದ ನೆಪವೊಡ್ಡಿ ಗದ್ದುಗೆ ಹಾಗೂ ಸುತ್ತಲೂ ಗೋಡೆಗಳನ್ನು ಅಗೆಯಲಾಗಿದೆ. ಇದುಲ್ಲದೆ ಗದ್ದುಗೆ ಬಲ ಭಾಗದಲ್ಲಿ ಮೂರು ಅಡಿ ಅಗಲ ಗೋಡೆ ಹೊಡೆದಿದ್ದಾರೆ. ಗದ್ದುಗೆ ಮುಂದಿನ ಭಾಗದಲ್ಲಿ ಕಲ್ಲಿನ ಗೋಡೆ ತೆರವುಗೊಳಿಸಲಾಗಿದೆ. ಗದ್ದುಗೆ ಮೇಲ್ಭಾಗದಲ್ಲಿ ಅಗೆಯಲಾಗಿದೆ.

ಗದ್ದುಗೆಯಲ್ಲಿ ನಿಧಿ ಇದೆ ಎಂಬ ದುರಾಸೆಯಿಂದ ಸಂಗಮೇಶ್ವರನಿಗೆ ಹರಕೆ ತೀರಿಸಲು ಗದ್ದೆಗೆ ಹಾಗೂ ಸುತ್ತಲೂ ಗೋಡೆಗಳಿಗೆ ಪ್ಲಾಸ್ಟರ್‌ ಹಾಗೂ ಟೈಲ್ಸ್‌ ಹಾಕುವುದಾಗಿ ದೇವಸ್ಥಾನದ ಅರ್ಚಕ ಕೃಷ್ಣಪ್ಪ ಯಾದವ್‌ ಅವರಿಂದ ಅನುಮತಿ ಪಡೆದು ಕೆಲಸ ಶುರು ಮಾಡಿದ್ದಾರೆ. ಆದರೆ, ಪ್ರಾಚ್ಯ ವಸ್ತು ಇಲಾಖೆ ಅಧೀನದಲ್ಲಿರುವ ಕೋಟೆ ಸುತ್ತಲೂ ನಿಷೇಧಿತ ವಲಯವಾಗಿದ್ದರಿಂದ ಇಲ್ಲಿ ಭೂಮಿ ಅಗೆಯುವುದು ಅಥವಾ ಇರುವ ಆಸ್ತಿಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡಬಾರದು. ಆದರೂ ಗದ್ದುಗೆ ಅಗೆದಿರುವುದು ಕೆಲ ಅನುಮಾನಗಳಿಗೆ ಎಡೆ ಮಾಡಿದೆ.

ಕೋಟೆ ಬಂದೋಬಸ್ತ್ಗಾಗಿ ಇರುವ ಹೋಮ್‌ ಗಾರ್ಡ್‌ಗಳು ಕಮಾಂಡರ್‌ ಗಳ ಮೂಲಕ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಪ್ರಾಚ್ಯವಸ್ತು ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಇತಿಹಾಸ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ತಹಶೀಲ್ದಾರ್‌, ಸಿಪಿಐ ಭೇಟಿ: ಘಟನೆ ಸುದ್ದಿ ತಿಳಿದು ಶನಿವಾರ ಜಲದುರ್ಗಕ್ಕೆ ದೌಡಾಯಿಸಿದ ತಹಶೀಲ್ದಾರ್‌ ಬಲರಾಮ ಕಟ್ಟಿಮನಿ, ಸಿಪಿಐ ಮಹಾಂತೇಶ ಸಜ್ಜನ್‌ ಗದ್ದುಗೆ ಪರಿಶೀಲನೆ ನಡೆಸಿ ಅರ್ಚಕ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕಿದೆ ಎಂದು ಸಿಪಿಐ ಮಹಾಂತೇಶ ಸಜ್ಜನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.