ಮಿತಿ ಮೀರಿದ ಅಕ್ರಮ ಮರಳು ದಂಧೆ

ನಾಮಕಾವಾಸ್ತೆ ಚೆಕ್‌ಪೋಸ್ಟ್‌ ಸ್ಥಾಪನೆ „ ಮರಳಿನ ಕೃತಕ ಅಭಾವ ಸೃಷ್ಟಿ „ ದರ ಹೆಚ್ಚಳದ ಭಯಕ್ಕೆ ಮನೆ ನಿರ್ಮಾಣ ಸ್ಥಗಿತ

Team Udayavani, Mar 22, 2020, 1:11 PM IST

22-March-7

ಜಾಲಹಳ್ಳಿ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣಿಕೆ ದಂಧೆ ಎಗ್ಗಿಲ್ಲದೇ ನಡೆದಿದ್ದರೂ ಕಡಿವಾಣ ಹಾಕಬೇಕಾದ ಅಧಿ ಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ತಾಲೂಕಿನಲ್ಲಿ ಎಲ್ಲೆಲ್ಲಿ ಮರಳು ಸಿಗುತ್ತದೆಯೋ ಅಲ್ಲೆಲ್ಲಾ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹ, ಸಾಗಾಣಿಕೆ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲಿ ಜಾಲಹಳ್ಳಿ ಹೋಬಳಿಯಲ್ಲಂತೂ ಇದು ಮಿತಿಮೀರಿದೆ.

ಕೃಷ್ಣ ನದಿಯಿಂದ ಹಗಲಿರುಳು ಎನ್ನದೇ ರಾಜಾರೋಷವಾಗಿ ಅಕ್ರಮ ಮರಳು ಸಾಗಿಸಲಾಗುತ್ತಿದೆ. ಅ ಧಿಕಾರಿಗಳು ಇದನ್ನು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತ್ತಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ತಡೆಗೆ ಸರಕಾರ ಏನೇ ಆದೇಶ ಹೊರಡಿಸಿದ್ದರೂ ಅಧಿಕಾರಿಗಳು ಹಾಗೂ ಮರಳು ಮಾಫಿಯಾಗಳ
ಅನೈತಿಕ ಹೊಂದಾಣಿಕೆಯಿಂದ ಅಕ್ರಮ ಮರಳು ಸಾಗಾಣಿಕೆ ರಾಜಾರೋಷವಾಗಿ ನಡೆಯುತ್ತಿದೆ.

ಸರಕಾರದ ಆದೇಶಗಳು ಕಸದ ಬುಟ್ಟಿ ಸೇರಿವೆ. ಕೃಷ್ಣ ನದಿಯಿಂದ ಹೇರುಂಡಿ, ಬಾಗೂರು, ಲಿಂಗದಳ್ಳಿ, ಚಿಂಚೋಡಿ, ಮುದುಗೋಟ, ವೀರಗೋಟ, ಬುಂಕಲದೊಡ್ಡಿ, ನೀಲವಂಜಿ ಗ್ರಾಮಗಳ ಮೂಲಕ ದಿನಾಲು ನೂರಾರು ಟಿಪ್ಪರ್‌, ಟ್ರ್ಯಾಕ್ಟರ್‌ಗಳು ಸರಕಾರಕ್ಕೆ ರಾಜಧನ ಕಟ್ಟದೆ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಬರಬೇಕಾದ ಲಕ್ಷಾಂತರ ರಾಜಧನ ನಷ್ಟವಾಗುತ್ತಿದೆ. ಆದರೂ ಅಧಿ ಕಾರಿಗಳು ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲಾ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕೃತಕ ಅಭಾವ ಸೃಷ್ಟಿ: ಹಗಲಿನಲ್ಲಿ ಟ್ರ್ಯಾಕ್ಟರ್‌ಗಳ ಮೂಲಕ ಮರಳು ಸಂಗ್ರಹಿಸಿ ರಾತ್ರಿ ಟಿಪ್ಪರ್‌ಗಳಲ್ಲಿ ಹಟ್ಟಿ, ಗುಲ್ಬರ್ಗ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಇತರೆಡೆ ಸಾಗಿಸಲಾಗುತ್ತಿದೆ. ಇದರ ಮಾಹಿತಿ ಇದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದರ ಹಿಂದೆ ಬಲವಾದ ಕೈಗಳು ಕೆಲಸ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ. ಮರಳನ್ನು ಸಂಗ್ರಹಿಸಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಸಾಗಿಸುವ ಉದ್ದೇಶದಿಂದ ಏಜೆಂಟರು ಮರಳಿನ ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಇದರಿಂದಾಗಿ ಸ್ಥಳೀಯ ಜನರಿಗೂ ಮರಳು ಸಿಗದಂತಾಗಿದೆ. ಒಂದು ಟ್ರ್ಯಾಕ್ಟರ್‌
ಮರಳಿಗೆ ಎರಡು-ಮೂರು ಸಾವಿರ ರೂ. ಹೆಚ್ಚು ಹಣ ತೆತ್ತಬೇಕಾಗಿದೆ. ಇನ್ನು ಕೆಲವರು ಮರಳಿನ ದರಕ್ಕೆ ಅಂಜಿ ಮನೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸುವಂತಾಗಿದೆ.

ಅಪಘಾತ ಹೆಚ್ಚಳ: ಅಕ್ರಮವಾಗಿ ಮರಳು ಸಾಗಿಸುವ ಆತುರದಲ್ಲಿ ಚಾಲಕರು ಅತಿ ವೇಗವಾಗಿ ವಾಹನಗಳನ್ನು ಚಲಾಯಿಸುತ್ತಿದ್ದು. ಇದರಿಂದ ಹಲವು ಅಪಘಾತಗಳು ಸಂಭವಿಸಿ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮರಳು ಗಾಡಿಗಳ ಭಯದಿಂದ ಮಕ್ಕಳು, ವೃದ್ಧರು, ಮಹಿಳೆಯರು ಜೀವಭಯದಲ್ಲೇ ರಸ್ತೆ ದಾಟುವ ಪರಸ್ಥಿತಿ ನಿರ್ಮಾಣವಾಗಿದೆ. ಇಡೀ ರಾತ್ರಿ ಓಡಾಡುವ ವಾಹನಗಳ ಶಬ್ದಕ್ಕೆ ಲಿಂಗದಳ್ಳಿ, ಹೇರುಂಡಿ, ಬಾಗೂರು, ನಿಲವಂಜಿ ಗ್ರಾಮಗಳ ಜನರಿಗೆ ನಿದ್ದೆ ಇಲ್ಲದಂತಾಗಿದೆ. ವಾಹನಗಳ ಓಡಾಟದಿಂದ ಬರುವ ದೂಳಿನಿಂದ ರಸ್ತೆ ಪಕ್ಕದ ಹೊಲಗಳಲ್ಲಿಯ ಬೆಳೆಗಳು ಹಾಳಾಗಿ ರೈತರು ತೀವ್ರ ನಷ್ಟಕ್ಕೊಳಗಾಗುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಗಡಿ ಭಾಗದಲ್ಲಿರುವ ಅಕ್ರಮ ಮರಳು ಸಾಗಾಣಿಕೆ ತಡೆಗೆ ಸ್ಥಾಪಿಸಿದ ಚೆಕ್‌ಪೋಸ್ಟ್ ಗಳು ಹೆಸರಿಗೆ ಮಾತ್ರ ಎಂಬಂತಾಗಿವೆ. ಇವು ಅಕ್ರಮ ಮರಳು ಸಾಗಿಸುವುದನ್ನು ಪತ್ತೆ ಹಚ್ಚುವ ಬದಲು ಅವರಿಂದ ಮಾಮೂಲಿ ವಸೂಲಿ ಮಾಡುವ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಇತ್ತೀಚೆಗೆ ಕೆಲ ಮರಿ ನಾಯಕರು ಹತ್ತಾರು ಟ್ಯಾಕ್ಟರ್‌ಗಳನ್ನು ಬಾಡಿಗೆ ಪಡೆದು ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು.
ಭೀಮಣ್ಣ ಗುಮೇದಾರ,
ಕಾಂಗ್ರೆಸ್‌ ಮುಖಂಡರು ಜಾಲಹಳ್ಳಿ

ಅಕ್ರಮ ಮರಳು ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಐದು ಟ್ಯಾಕ್ಟರ್‌ ಒಂದು ಟಿಪ್ಪರ್‌ ವಶಪಡಿಸಿಕೊಂಡು ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ರಮ ಮರಳು ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ.
ವಿರೂಪಾಕ್ಷಪ್ಪ,
ಪಿಎಸ್‌ಐ ಜಾಲಹಳ್ಳಿ ಪೊಲೀಸ್‌ ಠಾಣೆ

ಚಂದ್ರಶೇಖರ ನಾಡಗೌಡ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.