ಶಾಲಾ ಕೊಠಡಿಯಲ್ಲಿ ಅನೈತಿಕ ಚಟುವಟಿಕೆ

ಯರದೊಡ್ಡಿ ಗ್ರಾಮದ ಗುಡ್ಡದ ಬಳಿ ನಿರ್ಮಿಸಿದ ಹೊಸ ಕೊಠಡಿ „ ಹಳೆ ಕಟ್ಟಡ ಒಂದು ದಿಕ್ಕು-ಹೊಸ ಕಟ್ಟಡ ಇನ್ನೊಂದು ದಿಕ್ಕಿಗೆ

Team Udayavani, Mar 18, 2020, 4:21 PM IST

18-March-20

ಜಾಲಹಳ್ಳಿ: ಸಮೀಪದ ಯರಗುಡ್ಡ ಗ್ರಾಮದ ಹೊರವಲಯದ ಗುಡ್ಡದ ಬಳಿ 2017-18ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ 8 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕೊಠಡಿಯನ್ನು ಶೈಕ್ಷಣಿಕ ಚಟುವಟಿಕೆಗೆ ಬಳಸದೇ ಇರುವುದರಿಂದ ಪುಂಡ ಪೋಕರಿಗಳ ಮೋಜು, ಮಸ್ತಿ ಕೇಂದ್ರವಾಗಿ ಮಾರ್ಪಟ್ಟಿದೆ.

ಯರಗುಡ್ಡ ಗ್ರಾಮದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆ ಕಟ್ಟಡವಿದ್ದು, ಅಲ್ಲಿ 1ರಿಂದ 7ನೇ ತರಗತಿವರೆಗೆ 112 ವಿದ್ಯಾರ್ಥಿಗಳಿದ್ದಾರೆ. ಮೂರು ಕೊಠಡಿಗಳಿದ್ದು, ನಾಲ್ವರು ಶಿಕ್ಷಕರಿದ್ದಾರೆ. ಇಲ್ಲಿ ಮಕ್ಕಳಿಗೆ ಆಟದ ಮೈದಾನ ವಿಲ್ಲ. ನೀರಿನ ಸೌಲಭ್ಯವಿದೆ. ಮಕ್ಕಳು ಹೆದ್ದಾರಿ ದಾಟಿ ಶಾಲೆಗೆ ಬರಬೇಕಿರುವುದರಿಂದ ಪಾಲಕರು, ಮಕ್ಕಳು ಭಯದಲ್ಲೇ ಶಾಲೆಗೆ ಬರಬೇಕಿದೆ.

ಇನ್ನು ಶಾಲೆಯಲ್ಲಿ ಕೊಠಡಿ ಕೊರತೆ ಇರುವುದರಿಂದ 2017-18ನೇ ಸಾಲಿನಲ್ಲಿ ಕೆಕೆಆರ್‌ಡಿಬಿಯಿಂದ ಶಾಲೆಗೆ ಕೊಠಡಿ ಮಂಜೂರಾಗಿತ್ತು. ಆದರೆ ಹಳೆ ಶಾಲಾ ಕಟ್ಟಡದಲ್ಲಿ ಜಾಗೆ ಇಲ್ಲದ್ದರಿಂದ ಸುಮಾರು 200 ಮೀಟರ್‌ ಅಂತರದಲ್ಲಿರುವ ಗುಡ್ಡದಲ್ಲಿರುವ ಗಾಂವಠಾಣಾ ಜಾಗೆಯಲ್ಲಿ ಶಾಲಾ ಕೊಠಡಿ ನಿರ್ಮಿಸಿ ಕೈತೊಳೆದುಕೊಳ್ಳಲಾಗಿದೆ. ಶಾಲೆ ಹಳೆ ಕಟ್ಟಡ ಒಂದು ದಿಕ್ಕು ಮತ್ತು ಹೊಸದಾಗಿ ನಿರ್ಮಿಸಿದ ಕೊಠಡಿ ಇನ್ನೊಂದು ದಿಕ್ಕಿಗಿದೆ. ಹೀಗಾಗಿ ಹೊಸ ಕೊಠಡಿ ಶೈಕ್ಷಣಿಕ ಚಟುವಟಿಕೆಗೆ ಬಳಕೆ ಆಗುತ್ತಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ, ಶಾಲೆ ಶಿಕ್ಷಕರೂ ನಿರ್ಲಕ್ಷ್ಯ ವಹಿಸಿದ್ದಾರೆ.

ಅನೈತಿಕ ಚಟುವಟಿಕೆ: ಗುಡ್ಡದ ಗಾಂವಠಾಣೆ ಜಾಗೆಯಲ್ಲಿ ನಿರ್ಮಿಸಿದ ಹೊಸ ಕೊಠಡಿಗೆ ಬಾಗಿಲಿಗೆ ಬೀಗ ಹಾಕಿಲ್ಲ. ಹೀಗಾಗಿ ಪುಂಡ ಪೋಕರಿಗಳಿಗೆ ಮೋಜು ಮಸ್ತಿ ಕೇಂದ್ರವಾಗಿದೆ. ಶಾಲಾ ಕೊಠಡಿಯನ್ನೇ ಬಾರ್‌ ರೀತಿ ಬಳಸಿಕೊಳ್ಳುತ್ತಿದ್ದಾರೆ. ಹಗಲಿನಲ್ಲಿ ಈ ಕೊಠಡಿಯಲ್ಲಿ ಇಸ್ಪೀಟ್‌ ಜೂಜಾಟದಲ್ಲಿ ನಿರತರಾಗಿರುತ್ತಾರೆ. ಶಾಲಾ ಕೊಠಡಿಯಲ್ಲೇ ಮದ್ಯ ಸೇವಿಸುತ್ತಾರೆ. ಕೊಠಡಿ ಒಳಗೆ ಮತ್ತು ಸುತ್ತಮುತ್ತ ಮದ್ಯದ ಬಾಟಲಿ, ಪೌಚ್‌ಗಳು ಬಿದ್ದಿವೆ. ಇನ್ನು ರಾತ್ರಿ ವೇಳೆ ಕೊಠಡಿಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಆಗ್ರಹ: ಯರಗುಡ್ಡ ಗ್ರಾಮದಲ್ಲಿ ಸದ್ಯ ಕಿರಿಯ ಪ್ರಾಥಮಿಕ ಶಾಲೆ ರಾಜ್ಯ ಹೆದ್ದಾರಿ ಪಕ್ಕವೇ ಇದೆ. ಮಕ್ಕಳು ಹೆದ್ದಾರಿ ದಾಟಿ ಶಾಲೆಗೆ ಹೋಗಬೇಕಿದೆ. ಹೆದ್ದಾರಿಯಲ್ಲಿ ವೇಗವಾಗಿ ವಾಹನಗಳು ಸಂಚರಿಸುತ್ತವೆ. ಹೀಗಾಗಿ ಇಲ್ಲಿನ ಶಾಲೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಈಗ ಗುಡ್ಡದ ಬಳಿಯ ಗಾಂವಠಾಣಾ ಜಾಗೆಯಲ್ಲಿ ನಿರ್ಮಿಸಿದ ಹೊಸ ಕೊಠಡಿ ಪಕ್ಕವೇ ಜಾಗೆ ಸಮತಟ್ಟು ಮಾಡಿ ಶಾಲೆಗೆ ಅಗತ್ಯವಾದ ಕೊಠಡಿಗಳನ್ನು ನಿರ್ಮಿಸಿ ಶಾಲೆ ಸ್ಥಳಾಂತರಿಸಬೇಕು. ಹೊಸ ಮಕ್ಕಳಿಗೆ ಕ್ರೀಡಾ ಮೈದಾನ, ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು ಎಂದು ಗ್ರಾಮಸ್ಥರು, ಪಾಲಕರು ಆಗ್ರಹಿಸಿದ್ದಾರೆ.

ಹೊಸದಾಗಿ ನಿರ್ಮಿಸಿದ ಕೊಠಡಿಯಲ್ಲಿ ಕುಡಿವ ನೀರು, ಶೌಚಗೃಹವಿಲ್ಲ. ಸಮತಟ್ಟಾದ ಮೈದಾನ, ರಕ್ಷಣಾ ಗೋಡೆ ಕೊರತೆ ಇದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿ ಕಾರಿಗಳಿಗೆ ಪತ್ರ ಬರೆಯಲಾಗಿದೆ. ಕೋಣೆಯನ್ನು ಉಪಯೋಗ ಮಾಡಿಕೊಳ್ಳುತ್ತೇವೆ.
ದುರಗಪ್ಪ ಚಿಂಚೋಡಿ,
ಮುಖ್ಯಗುರು, ಸ.ಕಿ.ಪ್ರಾ. ಶಾಲೆ ಯರಗುಡ್ಡ

ಹಳೆ ಶಾಲೆ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದ್ದರಿಂದ ಮಕ್ಕಳನ್ನು ಆತಂಕದ ನಡುವೆ ಶಾಲೆಗೆ ಕಳಿಸಬೇಕು. ಇಲ್ಲಿ ಆಟದ ಮೈದಾನವಿಲ್ಲ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ. ಆದಷ್ಟು ಬೇಗನೆ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಬೇಕು.
ಆನಂದ,
ಗ್ರಾಮಸ್ಥರು ಯರಗುಡ

ಇದು ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದ್ದು ಶಾಲೆಗೆ ಭೇಟಿ ನೀಡಿದ್ದೇನೆ. ಶಾಲೆಗೆ ಹೋಗಲು ರಸ್ತೆ ಸಮಸ್ಯೆ ಇದೆ. ರಸ್ತೆ ಮತ್ತು ಮೈದಾನ ಸಮತಟ್ಟು ಮಾಡಲು ಗ್ರಾಪಂ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇನ್ನೊಂದೆರಡು ಕೋಣೆ ಅವಶ್ಯಕತೆ ಇದೆ. ಬರುವ ಜೂನ್‌ ತಿಂಗಳ ಆರಂಭದಿಂದ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು.
ಇಂದಿರಾ,
ಕ್ಷೇತ್ರ ಶಿಕ್ಷಣಾಧಿಕಾರಿ, ದೇವದುರ್ಗ

ಚಂದ್ರಶೇಖರ ನಾಡಗೌಡ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.