ಕೆಆರ್ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್
ಮತ್ತೆ ಲೋಹದ ಹಕ್ಕಿಯಲ್ಲಿ ರೆಡ್ಡಿ ಪ್ರಯಾಣ; ಮೊದಲ ಬಾರಿಗೆ ಪತ್ನಿಯೊಂದಿಗೆ ಸಿಂಧನೂರಿಗೆ ಆಗಮನ
Team Udayavani, Mar 27, 2023, 7:10 AM IST
ಸಿಂಧನೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಳಿಕ ಮೊಟ್ಟ ಮೊದಲ ಬಾರಿಗೆ ಹೆಲಿಕಾಪ್ಟರ್ನಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಕೆಆರ್ಪಿಪಿ ಪಕ್ಷ ಸ್ಥಾಪನೆ ನಂತರ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಬಹುತೇಕ ಬಾರಿ ಬಂದು ಹೋಗಿದ್ದ ಜಿ.ಜನಾರ್ದನರೆಡ್ಡಿ ಇದೀಗ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದ್ದಾರೆ. ರೆಡ್ಡಿ ಹೊಸದಾಗಿ ಖರೀದಿ ಮಾಡಿರುವ ಹೆಲಿಕಾಪ್ಟರ್ನಲ್ಲಿ ಪತ್ನಿ ಅರುಣಾ ಲಕ್ಷ್ಮೀ ಜತೆ ಬೆಂಗಳೂರಿನಿಂದ ಆಗಮಿಸಿದ್ದರು. ಹೊಸ ಅತಿಥಿಯನ್ನು ಮನೆಗೆ ಬರಮಾಡಿಕೊಂಡ ಖುಷಿಯನ್ನು ದಂಪತಿ ಸಮೇತ ಪ್ರಯಾಣಿಸುವ ಮೂಲಕ ಆಚರಿಸಿಕೊಂಡರು. ಬಳಿಕ ಪ್ರಚಾರದಲ್ಲಿ ಉತ್ಸಾಹದಿಂದಲೇ ಪಾಲ್ಗೊಂಡರು. 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗಾರ್ಮೆಂಟ್ ಫ್ಯಾಕ್ಟರಿ ಉದ್ಘಾಟಿಸಿದರು. ಪಕ್ಷದ ನಿಯೋಜಿತ ಅಭ್ಯರ್ಥಿ ಮಲ್ಲಿಕಾರ್ಜುನ ನೆಕ್ಕಂಟಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಇರುವ ಬೇಡಿಕೆಯನ್ನು ಚುನಾವಣೆಗೂ ಮುನ್ನವೇ ಈಡೇರಿಸಲು ಮುನ್ನುಡಿ ಬರೆದರು.
ಏನಿದು ಹೊಸ ಹೆಲಿಕಾಪ್ಟರ್?: ಹೊಸದಾಗಿ 10 ಸಾವಿರ ಜನರಿಗೆ ಉದ್ಯೋಗ ಸೃಜಿಸುವ ಫ್ಯಾಕ್ಟರಿಯನ್ನು ಉದ್ಘಾಟಿಸಲು ಹೊಸ ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಜನಾರ್ದನರೆಡ್ಡಿ ಬಳಿಕ ತಮ್ಮ ಕಾರಿನಲ್ಲಿ ಈಗಾಗಲೇ ವಾಸ್ತವ್ಯ ಹೂಡಿರುವ ಗಂಗಾವತಿಗೆ ಪ್ರಯಾಣ ಬೆಳೆಸಿದರು. ಹೊಸ ಹೆಲಿಕಾಪ್ಟರ್ ಬೆಂಗಳೂರಿಗೆ ವಾಪಸ್ ತೆರಳಿತು. ಕೆಆರ್ಪಿಪಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ 30ರಿಂದ 40 ಕ್ಷೇತ್ರಗಳಲ್ಲಿ ಸುತ್ತಾಟಕ್ಕಾಗಿಯೇ ರೆಡ್ಡಿ ಹೊಸ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆಂದು ಕಾರ್ಯಕರ್ತರು ತಿಳಿಸಿದ್ದಾರೆ.
ಹಳೇ ಹೆಲಿಕಾಪ್ಟರ್ ದುರಸ್ತಿಗೆ: ಈಗಾಗಲೇ ಒಂದು ಹೆಲಿಕಾಪ್ಟರ್ ಹೊಂದಿದ್ದ ಜನಾರ್ದನ ರೆಡ್ಡಿ ಅದನ್ನು ಕೂಡ ಸನ್ನದ್ಧಗೊಳಿಸಲು ಬಿಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಕೆಆರ್ಪಿಪಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಹೊಸ ಬಿಎಸ್7 ಹೆಲಿಕಾಪ್ಟರ್ ಹಾಗೂ ಹಳೆಯ ಹೆಲಿಕಾಪ್ಟರ್ ಬಳಕೆ ಮಾಡಲಿದ್ದಾರೆ. ಅದರ ಆರಂಭಿಕ ಸುಳಿವು ಎನ್ನುವಂತೆ 50 ಕಿಮೀ ಅಂತರದ ಗಂಗಾವತಿಯಲ್ಲೇ ವಾಸ್ತವ್ಯ ಹೂಡಿದ್ದರೂ ಬೆಂಗಳೂರಿನಿಂದ ಸಿಂಧನೂರಿಗೆ ಬರಲು ಮೊದಲ ಬಾರಿಗೆ ಹೊಸ ಹೆಲಿಕಾಪ್ಟರ್ ಬಳಕೆ ಮಾಡಿದ್ದಾರೆ. 12.45ಕ್ಕೆ ಸಿಂಧನೂರಿಗೆ ಆಗಮಿಸಿದ ಅವರು ಮಧ್ಯಾಹ್ನ 2.20ರ ವೇಳೆಗೆ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಿರ್ಗಮಿಸಿದರು.
ಹೊಸ ಹೆಲಿಕಾಪ್ಟರ್ನಲ್ಲಿ ಜಿ.ಜನಾರ್ದನರೆಡ್ಡಿ ಬಂದಿದ್ದರು. ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕೆ ಅನುಕೂಲವಾಗಲು ಮುಂದಿನ ದಿನಗಳಲ್ಲಿ ಹೆಲಿಕಾಪ್ಟರ್ ಬಳಕೆ ಮಾಡಲಿದ್ದಾರೆ.
– ಮಲ್ಲಿಕಾರ್ಜುನ ನೆಕ್ಕಂಟಿ, ಕೆಪಿಆರ್ಪಿಪಿ ನಿಯೋಜಿತ ಅಭ್ಯರ್ಥಿ, ಸಿಂಧನೂರು ಕ್ಷೇತ್ರ
-ಯಮನಪ್ಪ ಪವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ