ಶಿಕ್ಷಣದಿಂದಲೇ ಬದಲಾವಣೆ
ಸರ್ವ ಕ್ಷೇತ್ರದಲ್ಲೂ ಮಹಿಳೆ ಸಾಧನೆಗೋದುತಾಯಿ ಮೊದಲ ಕವಯಿತ್ರಿ
Team Udayavani, Feb 24, 2020, 4:30 PM IST
ಕಲಬುರಗಿ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿರುವುದಕ್ಕೆ ಶಿಕ್ಷಣವೇ ಕಾರಣವಾಗಿದೆ ಎಂದು ಕೆಪಿಎಸ್ಸಿ ಮಾಜಿ ಸದಸ್ಯ ಡಾ| ನಾಗಾಬಾಯಿ ಬುಳ್ಳಾ ಹೇಳಿದರು.
ಪೂಜ್ಯ ಗೋದುತಾಯಿ ಅವ್ವಾ ಅವರ 49ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮಹಾವಿದ್ಯಾಲಯದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಸಾಹಿತ್ಯಿಕ, ಸಾಂಸ್ಕೃತಿಕ ಭಾಷಣ, ಗಾಯನ ಮತ್ತು ಚಿತ್ರಕಲೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಮಹಿಳೆ ಈಗ ಸಬಲಳಾಗಿದ್ದಾಳೆ. ಪುರುಷರ ಸರಿಸಮಾನವಾಗಿ ಬೆಳೆದಿದ್ದಾಳೆ. ಬಾಹ್ಯಾಕಾಶ, ರಾಜಕಾರಣ, ಕ್ರೀಡೆ, ವಿಜ್ಞಾನ, ವೈದ್ಯ, ಎಂಜಿನಿಯರ್ ಪ್ರತಿಯೊಂದು ಕ್ಷೇತ್ರಗಳಲ್ಲೂ ಛಾಪು ಮೂಡಿಸಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾಳೆ. ಪ್ರತಿವರ್ಷ ಶೈಕ್ಷಣಿಕ ಫಲಿತಾಂಶದಲ್ಲಿ ಮಹಿಳೆಯರೇ ಮೇಲುಗೈ ಸಾಧಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಓದಿದ ಹೆಣ್ಣುಮಕ್ಕಳಿಗೆ ಧೈರ್ಯ, ಸ್ಥೈರ್ಯ, ಆತ್ಮವಿಶ್ವಾಸ ಸಹಜವಾಗಿ ಬರುತ್ತದೆ. ಅವರು ಹೊರ ಪ್ರಪಂಚದಲ್ಲಿ ಯಾವುದೇ ತೊಂದರೆಯಿಲ್ಲದೆ ಜೀವನ ಸಾಗಿಸುತ್ತಾರೆ ಎಂದರು.
ಗೋದುತಾಯಿ ಅವ್ವಾ ಈ ಭಾಗದ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಅವರ ಸರಳ ಜೀವನ, ಕಾಳಜಿಯ ಮನಸ್ಸು ಎಂತಹವರನ್ನು ಸೆಳೆಯುವಂತದ್ದು. ಅಂತಹವರ ಪುಣ್ಯಸ್ಮರಣೋತ್ಸವವನ್ನು ಏಳು ದಿನಗಳವರೆಗೆ ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜನ ಪ್ರಾಚಾರ್ಯೆ ಡಾ|ನೀಲಾಂಬಿಕಾ ಶೇರಿಕಾರ ಮಾತನಾಡಿ, ಪೂಜ್ಯ ಗೋದುತಾಯಿ ಅವ್ವಾ ಸ್ತ್ರೀ ಕುಲದ ಸಂಕೇತವಾಗಿದ್ದಾರೆ. ಅವರು ಕಲ್ಯಾಣ ಕರ್ನಾಟಕ ಭಾಗದ ಆಧುನಿಕ ಮೊದಲ ಮಹಿಳಾ ಕವಿಯಿತ್ರಿಯಾಗಿದ್ದರು ಎನ್ನುವುದಕ್ಕೆ ಉಲ್ಲೇಖಗಳು ಸಿಗುತ್ತವೆ ಎಂದರು.
ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ|ಶಾಂತಲಾ ನಿಷ್ಠಿ, ಮಹಾವಿದ್ಯಾಲಯ ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕ ಪ್ರೊ| ರೇವಯ್ಯ ವಸ್ತ್ರದಮಠ ವೇದಿಕೆಯಲ್ಲಿದ್ದರು. ಡಾ| ಪುಟ್ಟಮಣಿ ದೇವಿದಾಸ ಸ್ವಾಗತಿಸಿದರು, ಡಾ| ಸೀಮಾ ಪಾಟೀಲ ನಿರೂಪಿಸಿದರು, ಪ್ರೊ| ರೇವಯ್ಯ ವಸ್ತ್ರದಮಠ ವಂದಿಸಿದರು. ಡಾ| ಸಿದ್ಧಮ್ಮ ಗುಡೇದ, ಡಾ| ಇಂದಿರಾ ಶೇಟಕಾರ, ಸಾವಿತ್ರಿ ಜಂಬಲದಿನ್ನಿ, ಜಾನಕಿ ಹೊಸೂರ, ಡಾ| ಛಾಯಾ ಭರತನೂರ, ಡಾ| ಎಂ.ಎಸ್. ಪಾಟೀಲ, ಕೃಪಾಸಾಗರ ಗೊಬ್ಬುರ ಹಾಗೂ ವಿವಿಧ ಮಹಾ ವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’
MUST WATCH
ಹೊಸ ಸೇರ್ಪಡೆ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ