ಸಿರಿಧಾನ್ಯಕ್ಕೆ ಕಲ್ಯಾಣ ಕರ್ನಾಟಕವೇ ಬ್ರ್ಯಾಂಡ್ ಆಗಲಿ: ಸಚಿವೆ ನಿರ್ಮಲಾ


Team Udayavani, Aug 28, 2022, 6:30 AM IST

ಸಿರಿಧಾನ್ಯಕ್ಕೆ ಕಲ್ಯಾಣ ಕರ್ನಾಟಕವೇ ಬ್ರ್ಯಾಂಡ್ ಆಗಲಿ: ಸಚಿವೆ ನಿರ್ಮಲಾ

ರಾಯಚೂರು: ಕಾಫಿಗೆ ಕೊಡಗು, ಚಿಕ್ಕಮಗಳೂರು ಹೇಗೆ ಹೆಸರುವಾಸಿಯೋ ಹಾಗೆ ಸಿರಿಧಾನ್ಯಗಳಿಗೆ ಕಲ್ಯಾಣ ಕರ್ನಾಟಕ ಭಾಗವೇ ಬ್ರ್ಯಾಂಡ್ ಆಗಬೇಕು. ಅದಕ್ಕಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ನಬಾರ್ಡ್‌ನ ಗ್ರಾಮೀಣಾಭಿವೃದ್ಧಿ ನಿಧಿಯಡಿ 25 ಕೋಟಿ ರೂ. ನೀಡುತ್ತಿದ್ದು, ಸಿರಿಧಾನ್ಯಗಳ ಉತ್ತೇಜನಕ್ಕೆ ಶ್ರಮಿಸಲಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ನಗರದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ನಬಾರ್ಡ್‌) ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಸಿರಿಧಾನ್ಯ ಸಮಾವೇಶ-2022′ ಉದ್ಘಾಟಿಸಿ ಅವರು ಮಾತನಾಡಿದರು.

ಸಿರಿಧಾನ್ಯ ಬೆಳೆಯುವುದು, ಸಂಸ್ಕರಿಸುವುದು, ಮಾರುಕಟ್ಟೆ ಮಾಡುವ ಮೂಲಕ ಇಲ್ಲಿನ ಬ್ರ್ಯಾಂಡ್ ರೂಪದಲ್ಲಿ ಹೊರಹೊಮ್ಮಲಿ. ವಿಶ್ವವಿದ್ಯಾನಿಲಯಕ್ಕೆ ನೀಡುವ ಅನುದಾನದಲ್ಲಿ ಸಿರಿಧಾನ್ಯಗಳಿಗೆ ಸಂಬಂಧಿ ಸಿದ ಸಂಶೋಧನೆ, ಉತ್ಪಾದನೆ, ಮಾರುಕಟ್ಟೆ ಸಹಿತ ಇನ್ನಿತರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಿ ಎಂದರು.

ಭಾರತವು 2018ರಲ್ಲಿ “ಸಿರಿಧಾನ್ಯ ವರ್ಷ’ ಆಚರಿಸಿತ್ತು. ಪ್ರಧಾನಿ ವಿಶ್ವಸಂಸ್ಥೆಗೆ ಇದೇ ಪ್ರಸ್ತಾವನೆ ಸಲ್ಲಿಸಿದ್ದರು. ಕರ್ನಾಟಕ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುತ್ತಿದ್ದು, ಸಿರಿಧಾನ್ಯ ರಫ್ತಿನಲ್ಲಿ ಭಾರತವೇ ಮುಂಚೂಣಿಯಲ್ಲಿದೆ. ದೇಶದಲ್ಲಿ ಪೌಷ್ಟಿಕ ಸುರಕ್ಷೆ ಸಾಧಿಸಬೇಕಿದ್ದು, ಸಿರಿಧಾನ್ಯ ಬಹಳ ಮಹತ್ವದ ಪಾತ್ರ ವಹಿಸಲಿದೆ ಎಂದರು.

ನೀತಿ ಆಯೋಗದಿಂದ ಬಹುಮಾನ
ಪ್ರಧಾನಿ ನರೇಂದ್ರ ಮೋದಿಯವರು ಹಿಂದೆ ಯೋಗ ದಿನಾಚರಣೆ ಪ್ರಸ್ತಾವನೆ ಮುಂದಿಟ್ಟಾಗ ವಿಶ್ವಸಂಸ್ಥೆ ಸಮ್ಮತಿ ಸೂಚಿಸಿತ್ತು. ಅದರಂತೆ ಈಗ ಸಿರಿಧಾನ್ಯಗಳ ವರ್ಷಾಚರಣೆಗೆ ಯುಎನ್‌ಒಗೆ ಪ್ರಧಾನಿ ಪತ್ರ ಬರೆದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ 2023 ಅನ್ನು ಸಿರಿಧಾನ್ಯಗಳ ವರ್ಷವಾಗಿ ಘೋಷಿಸಿದೆ. ಈ ನಿಟ್ಟಿನಲ್ಲಿ ನೀತಿ ಆಯೋಗ ವಿಶೇಷ ಸ್ಟಾರ್ಟ್‌ಅಪ್‌ ಚಾಲೆಂಜ್‌ ಆಯೋಜಿಸಿದ್ದು, ಸಿರಿಧಾನ್ಯಗಳ ವಿಚಾರದಲ್ಲಿ ಅತ್ಯುತ್ತಮ ವಿಚಾರ ಪ್ರಸ್ತುತಪಡಿಸುವ ಮೂವರಿಗೆ 1 ಕೋಟಿ ರೂ. , ದ್ವಿತೀಯ ಸ್ಥಾನ ಪಡೆದ 15 ವ್ಯಕ್ತಿಗಳಿಗೆ 20 ಲಕ್ಷ ರೂ., ತೃತೀಯ ಸ್ಥಾನ ಪಡೆದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು.ಡಿಸೆಂಬರ್‌ ಅಂತ್ಯದೊಳಗೆ ತಮ್ಮ ವಿಚಾರಗಳನ್ನು ತಿಳಿಸಬೇಕು ಎಂದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.