ಕಮಲನಗರ ಆರೋಗ್ಯ ಕೇಂದ್ರಕ್ಕೆ ಸಚಿವ ಚವ್ಹಾಣ ಭೇಟಿ
Team Udayavani, Apr 23, 2020, 12:33 PM IST
ಕಮಲನಗರ: ಸಮುದಾಯ ಆರೋಗ್ಯ ಕೇಂದ್ರದ ಐಸೋಲೇಷನ್ ವಾರ್ಡ್ಗೆ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು.
ಕಮಲನಗರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬುಧವಾರ ಪಶು ಸಂಗೋಪನಾ ಖಾತೆ ಸಚಿವ ಪ್ರಭು ಚವ್ಹಾಣ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ಐಸೋಲೇಷನ್ ವಾರ್ಡ್ಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಆಸ್ಪತ್ರೆಯಲ್ಲಿನ ವ್ಯವಸ್ಥೆ ಸಮರ್ಪಕವಾಗಿದೆ. ಆಸ್ಪತ್ರೆಯಲ್ಲಿ ಸುಚಿತ್ವ ಕಾಪಾಡಬೇಕು. ವೈದ್ಯರು, ಸಿಬ್ಬಂದಿ ರೋಗಿಗಳನ್ನು ತಪಾಸಣೆ ಮಾಡುವಾಗ ಕಡ್ಡಾಯವಾಗಿ ಹ್ಯಾಂಡ್ಗ್ಲೌಸ್, ಮಾಸ್ಕ್ ಬಳಸಬೇಕು ಎಂದು ಸೂಚಿಸಿದರು.
ಪಟ್ಟಣದಲ್ಲಿ ನೀರಿನ ಸಮಸ್ಯೆ ದಿನೇ-ದಿನೇ ಹೆಚ್ಚಾಗುತ್ತಿದೆ. ಕೆಲವು ವಾರ್ಡ್ ಗಳಲ್ಲಿನ ಮನೆಯಲ್ಲಿರುವ ನಳಗಳಿಗೆ 5 ದಿನಕ್ಕೊಮ್ಮೆ, ಕೆಲವೆಡೆ 10-15 ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದಾರೆ. ಪಂಚಾಯತ ಅಧಿಕಾರಿ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಜನರು ಸಚಿವರ ಎದುರು ಗೋಳು ತೋಡಿಕೊಂಡರು. ನಂತರ ಸಚಿವರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಪಿಡಿಒ ವಿನೋದ ಕುಲಕರ್ಣಿ ಅವರನ್ನು ಕರೆಯಿಸಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು. ತಾಲೂಕಿನಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಿಸಿ ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿ ಸುಮಾರು 3 ತಿಂಗಳು ಕಳೆದರೂ ಅವರ ಖಾತೆಗೆ ಹಣ ಜಮೆಯಾಗಿಲ್ಲ. ಅಲ್ಲದೇ ಕೆಲವು ತೊಗರಿ ಬೆಳೆಗಾರರಿಗೆ ಖಾತೆಗೆ ಹಣ
ಜಮೆ ಮಾಡಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಪ್ರವೀಣ ಕುಲಕರ್ಣಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ದಾಬಕಾ(ಸಿ), ಡೋಣಗಾಂವ(ಎಂ), ಹೋಳಸಮುದ್ರ, ತೋರಣಾ, ಮುಧೋಳ ಹಾಗೂ ತಾಲೂಕಿನ ವಿವಿಧ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕು ವೈದ್ಯಾಧಿಕಾರಿ ಶರಣಯ್ಯಸ್ವಾಮಿ, ಔರಾದ ತಹಶೀಲ್ದಾರ್ ಎಂ. ಚಂದ್ರಶೇಖರ, ಕಮಲನಗರ ತಹಶೀಲ್ದಾರ್ ರಮೇಶ ಪೇದ್ದೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಪಿಡಿಒ ವಿನೋದ ಕುಲಕರ್ಣಿ, ಡಾ| ಮಮತಾ ಶಿಂಧೆ, ಡಾ| ರಮೇಶ ಕಾಂಬಳೆ, ಡಾ| ಅನೀಲಕುಮಾರ ರಾಯಪಳ್ಳೆ, ಡಾ| ಮಹೇಶ ಬಿರಾದಾರ, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ