ಅಶೋಕನ ನೆಲದಲ್ಲಿ ಮೊಳಗಲಿದೆ ಕನ್ನಡ ಕಹಳೆ

ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆ', "ಮಹಿಳೆಯರು ಮತ್ತು ಸಾಧನೆಗಳು, ಸವಾಲುಗಳು' ಕುರಿತು ಚರ್ಚೆ ನಡೆಯಲಿದೆ.

Team Udayavani, Feb 13, 2021, 4:23 PM IST

ಅಶೋಕನ ನೆಲದಲ್ಲಿ ಮೊಳಗಲಿದೆ ಕನ್ನಡ ಕಹಳೆ

ಮಸ್ಕಿ: ದೇವನಾಂಪ್ರೀಯ ಖ್ಯಾತಿಯ ಅಶೋಕನ ನಾಡು ಮಸ್ಕಿಯಲ್ಲೀಗ ನುಡಿ ಜಾತ್ರೆಯ ಸಂಭ್ರಮ ಮನೆ ಮಾಡಿದ್ದು, ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದದ್ದರಿಂದ ಸಾಹಿತ್ಯಾಸಕ್ತರೆಲ್ಲರೂ ನುಡಿ ತೇರು ಎಳೆಯಲು ಉತ್ಸುಕರಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌ ಮತ್ತು ತಾಲೂಕು ಆಡಳಿತದ ನೇತೃತ್ವದಲ್ಲಿ ಮಸ್ಕಿ ಪಟ್ಟಣದಲ್ಲಿ ತಾಲೂಕು ಮಟ್ಟದ ಮೊಲದ ಕನ್ನಡ ಸಾಹಿತ್ಯ ಸಮ್ಮೇಳನ ಫೆ.14ರಂದು ಆಯೋಜಿಸಿದೆ.

ಭ್ರಮರಾಂಭ ದೇವಿ ಕಲ್ಯಾಣ ಮಂಟಪದಲ್ಲಿ ಒಂದು ದಿನದ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ಪೂರ್ವ ತಯಾರಿಗಳು ನಡೆದಿವೆ. ಬಳಗಾನೂರಿನ ಸಾಹಿತಿ ವೇ.ಮೂ. ಶರಭಯ್ಯಸ್ವಾಮಿ ಗಣಾಚಾರಿ ಕಂಬಾಳಿಮಠ ಅವರನ್ನು ಮೊದಲ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಕಳೆದೊಂದು ವಾರದಿಂದ ಸಾಹಿತ್ಯ ಸಮ್ಮೇಳನದ ಲಾಂಛನ, ಆಹ್ವಾನ ಪತ್ರಿಕೆ ಬಿಡುಗಡೆ, ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ ನೀಡುವುದು ಸೇರಿ ಎಲ್ಲ ಕಾರ್ಯಗಳು ನಡೆದಿವೆ.

ವೈವಿಧ್ಯಮಯ: ಮೊದಲ ತಾಲೂಕು ಸಾಹಿತ್ಯ ಸಮ್ಮೇಳನದ ವೇದಿಕೆಗೆ ಇಲ್ಲಿನ ಭಾವೈಕ್ಯತೆಯ ನೆಲವೀಡು ಸಂತೆಕಲ್ಲೂರಿನ “ಘನಮಠೇಶ್ವರ ಶಿವಯೋಗಿಗಳ’ ಹೆಸರಿಡಲಾಗಿದೆ. ಮಂಟಪಕ್ಕೆ “ಸಾನಬಾಳ ರಾಮಣ್ಣ’, ಮಹಾದ್ವಾರವನ್ನು “ಷ.ಬ್ರ. ಷಡಕ್ಷರಾನಂದ ಶಿವಾಚಾರ್ಯರ’ ಹೆಸರಿಡಲಾಗಿದೆ. ಇವುಗಳ ಸ್ಥಾಪನೆ ಕಾರ್ಯವೂ ಭರದಿಂದ ಸಾಗಿದೆ. ಇನ್ನು ಮೊದಲ ಸಾಹಿತ್ಯ ಸಮ್ಮೇಳನ ರಾಯಚೂರು ವಿವಿ ಕುಲಪತಿ ಡಾ| ಹರೀಶ ರಾಮಸ್ವಾಮಿಯವರನ್ನು ಉದ್ಘಾಟನೆಗೆ
ಆಯ್ಕೆ ಮಾಡಲಾಗಿದ್ದು, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನೆ ಕಾರ್ಯಕ್ರಮದ ಬಳಿಕ ಸಾಹಿತ್ಯ, ಸಾಂಸ್ಕೃತಿಕ ಲೋಕ ಅನಾವರಣಕ್ಕೆ ವೈವಿಧ್ಯಮಯ ಕಾರ್ಯಕ್ರಮ ಸಮ್ಮೇಳನದಲ್ಲಿ ಆಯೋಜಿಸಲಾಗಿದೆ.

ಎರಡು ಗೋಷ್ಠಿ: ಒಂದು ದಿನದ ಸಮ್ಮೇಳನವಾಗಿದ್ದರಿಂದ ಎರಡು ಗೋಷ್ಠಿಗಳು ಹಾಗೂ ಒಂದು ಕವಿಗೋಷ್ಠಿ ಆಯೋಜಿಸಲಾಗಿದೆ. ಮತ್ತೂಂದು ವಿಶೇಷ ಉಪನ್ಯಾಸ, ಬಹಿರಂಗ ಅಧಿವೇಶನ ಬಳಿಕ ಕಾರ್ಯಕ್ರಮ ಸಮಾರೋಪವಾಗಲಿದೆ. ಜಿಲ್ಲೆಯ ಸಾಹಿತಿಗಳು, ಸಂಶೋಧಕರು ಹಾಗೂ ಅಧಿಕಾರಿ ವರ್ಗ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೊದಲ ಗೋಷ್ಠಿಯಲ್ಲಿ “ಮಸ್ಕಿ-ಐತಿಹಾಸಿಕ ಹಿನ್ನೆಲೆ’, “ಮಸ್ಕಿ ನೂತನ ತಾಲೂಕು ಹೊಸ ದೃಷ್ಟಿ’, “ಸಂತೆ ಮತ್ತು ಜಾತ್ರೆಗಳು’ ವಿಷಯ ಕುರಿತು ಉಪನ್ಯಾಸ, ವಿಷಯ ಮಂಡನೆ ನಡೆಯಲಿದ್ದರೆ, ಎರಡನೇ ಗೋಷ್ಠಿಯಲ್ಲಿ “ಮಾಧ್ಯಮ ಬೆಳವಣಿಗೆ’, “ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆ’, “ಮಹಿಳೆಯರು ಮತ್ತು ಸಾಧನೆಗಳು, ಸವಾಲುಗಳು’ ಕುರಿತು ಚರ್ಚೆ ನಡೆಯಲಿದೆ.

ಕವಿಗೋಷ್ಠಿ: ಮಧ್ಯಾಹ್ನ ಊಟದ ವಿರಾಮದ ಬಳಿಕ ಕವಿಗೋಷ್ಠಿ ನಡೆಯಲಿದ್ದು ಸಾಹಿತಿ ಗುಂಡುರಾವ್‌ ದೇಸಾಯಿ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಶರೀಫ್‌ ಹಸ್ಮಕಲ್‌ ಆಶಯ ನುಡಿ ವ್ಯಕ್ತಪಡಿಸಲಿದ್ದಾರೆ. ಸುಮಾರು 18ಕ್ಕೂ ಹೆಚ್ಚು ಕವಿಗಳು ಸಮ್ಮೇಳನದಲ್ಲಿ ತಮ್ಮ ಕಾವ್ಯ ಪ್ರಸ್ತುತ ಪಡಿಸಲಿದ್ದಾರೆ. ಸಮ್ಮೇಳನದಲ್ಲಿ ವಿಶೇಷ ಉಪನ್ಯಾಸವನ್ನೂ ಆಯೋಜಿಸಲಾಗಿದ್ದು, ಸಿಂಧನೂರಿನ ವೈದ್ಯ, ಮಕ್ಕಳ ತಜ್ಞ ಡಾ| ಕೆ.ಶಿವರಾಜ “ವಚನಗಳಲ್ಲಿ ಆರೋಗ್ಯ’ ವಿಷಯ ಕುರಿತು ಮಾತನಾಡಲಿದ್ದಾರೆ. ಬಹಿರಂಗ ಅಧಿವೇಶನ, ಸನ್ಮಾನ ಸಮಾರಂಭ ಬಳಿಕ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಲಿದೆ.

ಮಸ್ಕಿಯಲ್ಲಿ ಮೊದಲ ಬಾರಿಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳ ನಡೆಯುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ. ಸಮ್ಮೇಳನದಲ್ಲಿ ಹಲವು ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡಾಸಕ್ತರೆಲ್ಲರೂ ಭಾಗವಹಿಸಿ ಯಶಗೊಳಿಸಬೇಕು.
ಘನಮಠದಯ್ಯ
ತಾಲೂಕು ಕಸಾಪ ಅಧ್ಯಕ್ಷ ಮಸ್ಕಿ

ಮಸ್ಕಿ ನೂತನ ತಾಲೂಕು ಘೋಷಣೆ ಬಳಿಕ ಇಲ್ಲಿ ಸಮ್ಮೇಳನ ನಡೆಸುತ್ತಿರುವುದರಿಂದ ಇಲ್ಲಿನ ಕವಿಗಳು, ಬರಹಗಾರರನ್ನು ಪ್ರೋತ್ಸಾಹಿಸಿದಂತಾಗುತ್ತದೆ. ನಾಡು-ನುಡಿ ಬಗ್ಗೆ ಎಲ್ಲರಲ್ಲೂ ಅಭಿಮಾನ ಬೆಳೆಸಲು ಸಮ್ಮೇಳನಗಳು ಸಹಕಾರಿ.
ಡಾ| ಶರೀಫ್‌ ಹಸ್ಮಕಲ್‌,
ಯುವ ಸಾಹಿತಿ

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.