ರಾಯಚೂರು ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 28, 2020, 12:58 PM IST
ರಾಯಚೂರು: ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ ರ್ಯಾಲಿಗೆ ಬಂದ್ ಸೀಮಿತಗೊಳಿಸಿದ್ದಾರೆ. ಜನಜೀವನ ಎಂದಿನಂತಿದ್ದು ಕೆಲವೆಡೆ ಮಾತ್ರ ವರ್ತಕರು ಸ್ವಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಬಿಟ್ಟರೆ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದೆ.
ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು.
ಕಾಂಗ್ರೆಸ್ ಕಾರ್ಯಕರ್ತರು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು. ಜೆಡಿಎಸ್ ಕಾರ್ಯಕರ್ತರು ಹೋರಾಟ ಬೆಂಬಲಿಸಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ಕರ್ನಾಟಕ ಬಂದ್: ರಾಮನಗರದಲ್ಲಿ ಬಂದ್ ಬಹುತೇಕ ಯಶಸ್ವಿ
ನಗರದ ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದರು. ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ನಡೆಯುತ್ತಿರುವ ಕಾರಣ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಇರಲಿಲ್ಲ. ಆದರೆ, ಉಳಿದ ವಾಹನಗಳ ಸಂಚಾರ ಎಂದಿನಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!