ಬಿಜೆಪಿ ಭಿನ್ನಮತಕ್ಕೆ ಕಟೀಲ್‌ ಲಗಾಮು


Team Udayavani, Dec 16, 2020, 6:25 PM IST

ಬಿಜೆಪಿ ಭಿನ್ನಮತಕ್ಕೆ ಕಟೀಲ್‌ ಲಗಾಮು

ಸಿಂಧನೂರು: ಕಳೆದ ಹಲವು ತಿಂಗಳಿಂದ ಪ್ರತ್ಯೇಕ ಎರಡು ಬಣಗಳಾಗಿ ಮಾರ್ಪಟ್ಟ ಹಿನ್ನೆಲೆಯಲ್ಲಿ ಉಂಟಾಗಿದ್ದ ಬಿಜೆಪಿ ಭಿನ್ನಮತಕ್ಕೆ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಮೂಲಕವೇ ಲಗಾಮು ಬಿದ್ದಿದೆ. ಲಿಂಗಸುಗೂರಿನಲ್ಲಿ ಇಬ್ಬಣಗಳ ಮುಖಂಡರು ಹಾಗೂ ಇತರ ಚುನಾಯಿತ ಜನಪ್ರತಿನಿಧಿಗಳನ್ನು ಒಳಗೊಂಡು ಈಚೆಗೆ ನಡೆಸಿದ ಬೈಠಕ್‌ ಫಲ ನೀಡಿದೆ.

ಸರಣಿ ಪ್ರಕಾರ ಸಚಿವರು ಸಿಂಧನೂರಿಗೆ ಬಂದು ಹೋದಾಗಲೂ ಇತ್ಯರ್ಥವಾಗದ ಅಸಮಾಧಾನಗಳಿಗೆ ರಾಜ್ಯಾಧ್ಯಕ್ಷರ ಮೂಲಕವೇ ತೆರೆ ಬಿದ್ದಿದೆ. ಎಲ್ಲರನ್ನೂ ಒಗ್ಗೂಡಿಸಿ ಅವರಿಗೆ ಪಕ್ಷದ ಶಿಸ್ತಿನ ಪಾಠ ಹೇಳಿರುವ ರಾಜ್ಯಾಧ್ಯಕ್ಷರು, ಎಲ್ಲರೂ ಒಂದೇ ದೋಣಿಯಲ್ಲಿ ಸಾಗುವಂತೆ ತಿಳಿಸಿದ ಬೆನ್ನಲ್ಲೇ “ಹಸ್ತಲಾಘವ’ ಮಾಡಿಸಲಾಗಿದೆ. ಜತೆಗೆ, ಸಾಮೂಹಿಕ ಜವಾಬ್ದಾರಿಯ ಮಂತ್ರ ಪಠಿಸಿ ಗ್ರಾಪಂ ಚುನಾವಣೆಯ ಟಾಸ್ಕ್ ವಹಿಸಲಾಗಿದೆ.

ಗೊಂದಲ ಹಲವು?: ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮರೇಗೌಡ ವಿರುಪಾಪುರ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೊಲ್ಲಾ ಶೇಷಗಿರಿರಾವ್‌ ನಡುವಿನ ಭಿನ್ನಮತ ಪಕ್ಷದ ಮುಖಂಡರು ಬಂದಾಗಲೆಲ್ಲ ಬಹಿರಂಗವಾಗುತ್ತಿತ್ತು. ಅವರ ಮನೆಗೆ ಭೇಟಿ ನೀಡಿದವರು, ಇವರ ಮನೆಗೆ ಬರುತ್ತಿರಲಿಲ್ಲ. ಇತ್ತ ಬಂದವರು ಅತ್ತ ಹೋಗುತ್ತಿರಲಿಲ್ಲ. ಮಂತ್ರಿಗಳ ಪ್ರವಾಸ ಮತ್ತು ಭೇಟಿ ಕಾರ್ಯಕ್ರಮಗಳು ಏಕಮುಖವಾಗಿ ಸಾಗಿ, ಸಾರ್ವಜನಿಕವಾಗಿ ಗೊಂದಲ ಏರ್ಪಟ್ಟಿತ್ತು.

ಇದನ್ನೂ ಓದಿ:ಮೊದಲ ಹಂತದ ಗ್ರಾಪಂ ಫೈಟ್‌ಗೆ ಅಖಾಡ ಸಿದ್ಧ

ರಾಜ್ಯ ಪದಾಧಿ ಕಾರಿಗಳ ಸಭೆಯ ಬಳಿಕ ಸಿಂಧನೂರಿನಲ್ಲಿ ಪಕ್ಷ ಬಲಪಡಿಸಲು ಹೇಳಿದಾಗಲೂ ಗ್ರಾಪಂ ಚುನಾವಣೆಯಲ್ಲಿ ಯಾವ ಗುಂಪಿನ ಬೆಂಬಲಿತರಾಗಿ ಕಣಕ್ಕಿಳಿಯಬೇಕೆನ್ನುವ ಗೊಂದಲ ಇತ್ಯರ್ಥವಾಗಿರಲಿಲ್ಲ. ಇದೀಗ ಎಲ್ಲದಕ್ಕೂ ಪಕ್ಷದ ತಾಲೂಕು ಘಟಕದ ಒಂದಾಗಿ ಕಾರ್ಯಚಟುವಟಿಕೆ ನಡೆಸಲು ಹೇಳಲಾಗಿದ್ದು, ಸಂಸದ ಸಂಗಣ್ಣ ಕರಡಿ ಕೂಡ ಇಬ್ಬರನ್ನು ಜೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊಸ ಟಾಸ್ಕ್: ಗ್ರಾಮ ಸ್ವರಾಜ್‌ ಕಾರ್ಯಕ್ರಮದ ಮೂಲಕ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಬೇಕು ಎಂಬ ನಿರ್ಧಾರ ಈಗಾಗಲೇ ಬಿಜೆಪಿ ಪ್ರಕಟಿಸಿದೆ. ಅದಕ್ಕೆ ಪೂರಕವಾಗಿ ಶ್ರಮಿಸುವಂತೆ ಸಿಂಧನೂರಿನಲ್ಲೂ ಜವಾಬ್ದಾರಿ ಹಂಚಲಾಗಿದೆ. ತಾಲೂಕಿನ 30 ಗ್ರಾಪಂ ವ್ಯಾಪ್ತಿಯ 626 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಬೇಕೆಂದು ಸ್ಥಳೀಯ ಮುಖಂಡರಿಗೆ ಟಾಸ್ಕ್ ನೀಡಲಾಗಿದೆ.

ಎರಡು ಗುಂಪಿನವರಿಗೆ 5 ರಿಂದ 10 ನಿಮಿಷದ ಕಾಲ ಅವರ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡಿದ ರಾಜ್ಯಾಧ್ಯಕ್ಷರು, ಬಳಿಕ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಸಾಗಬೇಕಿರುವ ಮಾರ್ಗ ಸೂಚಿಸಿದ್ದಾರೆ. ಅದಕ್ಕೆ ತಾಲೂಕಿನ ಎಲ್ಲ ಮುಖಂಡರು ಅಸ್ತು ಎಂದ ಹಿನ್ನೆಲೆಯಲ್ಲಿ ಅಪಸ್ವರಗಳಿಗೆ ತೆರೆಬಿದ್ದಿದೆ. ಮಂಡಲ ಅಧ್ಯಕ್ಷರ ನೇಮಕ, ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನ ಸೇರಿದಂತೆ ಎಲ್ಲ ಹಂತದಲ್ಲಿ ಎರಡು ಗುಂಪಿನ ಪೈಪೋಟಿಯೇ ಕಂಡುಬಂದರೂ ಪರಿಸ್ಥಿತಿ ಸುಧಾರಿಸಿಲಿಲ್ಲ.

ಗ್ರಾಪಂ ಚುನಾವಣೆ ಮತ್ತು ಇತ್ತೀಚೆಗೆ ರಾಜ್ಯ ಪದಾಧಿ ಕಾರಿಗಳ ಸಭೆ ತಾಲೂಕಿನ ಬಿಜೆಪಿಗೆ ಮದ್ದು ಅರಿದಂತಾಗಿದ್ದು, ಪಕ್ಷದ ವಲಯದಲ್ಲೂ ಇದೀಗ ಹೊಸ ಉತ್ಸಾಹ ಕಾಣಿಸಿದೆ.  ಪಕ್ಷದ ಕಚೇರಿಯೇ ಮುಖ ಬಿಜೆಪಿ ತಾಲೂಕು ಕಚೇರಿಯ ಖರ್ಚು-ವೆಚ್ಚ ಒಂದೇ ಕಡೆಯವರು ನೋಡಿಕೊಳ್ಳುತ್ತಾರೆಂಬ ಹಿನ್ನೆಲೆಯಲ್ಲಿ ಹೇಳಿದಾಗ ಅದನ್ನು ಎಲ್ಲರೂ ಹಂಚಿಕೊಳ್ಳುವಂತೆಯೂ ತಿಳಿಸಲಾಗಿದೆ. ಪಕ್ಷದ ಕಚೇರಿಗೆ ಎಲ್ಲ ಮುಖಂಡರು ಭೇಟಿ ನೀಡಬೇಕು. ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಬೇಕು. ಪಕ್ಷದ ಕೆಲಸಗಳಿಗೆ ತಾಲೂಕು ಅಧ್ಯಕ್ಷರ ಲೆಟರ್‌ ಪ್ಯಾಡ್‌ಗಳನ್ನು ಅ ಧಿಕೃತವಾಗಿ ಬಳಸಬೇಕು. ಆ ಮೂಲಕವೇ ಸಂದೇಶಗಳು ರವಾನೆಯಾಗಬೇಕೆಂದು ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆಂದು ಗೊತ್ತಾಗಿದೆ. ರಾಜ್ಯಾಧ್ಯಕ್ಷರೊಂದಿಗೆ ಮಾತುಕತೆ ನಂತರ ಎಲ್ಲರೂ ಒಗ್ಗಟ್ಟಾಗಿ ತಾಲೂಕು ಕಚೇರಿಯಲ್ಲಿ ಕಾಣಿಸಿಕೊಂಡಿದ್ದು, ಅಲ್ಲಿಂದಲೇ ಮುಂದಿನ ಚುನಾವಣೆ ಚಟುವಟಿಕೆಗಳಿಗೂ ಚಾಲನೆ ನೀಡಿದ್ದಾರೆ.

ಯಮನಪ್ಪ ಪವಾರ

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.