ಕಿಲ್ಲಾರಹಟ್ಟಿ ಹಲ್ಲೆ ಪ್ರಕರಣ: ಠಾಣೆ ಎದುರು ಪ್ರತಿಭಟನೆ
Team Udayavani, Nov 22, 2021, 2:28 PM IST
ಮುದಗಲ್ಲ: ಕಿಲ್ಲಾರಹಟ್ಟಿ ಗ್ರಾಮದಲ್ಲಿ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹೊಡೆದ ಘಟನೆ ಖಂಡಿಸಿ ಲಿಂಗಸುಗೂರು, ಸಿಂಧನೂರ ಮತ್ತು ಮಸ್ಕಿ ತಾಲೂಕಿನ ದಲಿತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಜಂಟಿಯಾಗಿ ಮುದಗಲ್ಲ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ದಲಿತ ಸಂಘಟನೆಗಳ ನೂರಾರು ಮುಖಂಡರು ಬೈಕ್ರ್ಯಾಲಿ ಮೂಲಕ ಕಿಲ್ಲಾರಹಟ್ಟಿ ಗ್ರಾಮಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸಿದರು. ನಂತರ ಮುದಗಲ್ಲ ಠಾಣೆಗೆ ಆಗಮಿಸಿದ ಪ್ರತಿಭಟನಾಕಾರರು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಠಾಣೆಗೆ ಆಗಮಿಸಿದ ಲಿಂಗಸುಗೂರು ಡಿವೈಎಸ್ಪಿ ಎಸ್.ಎಸ್. ಹೂಲ್ಲೂರ ಪ್ರತಿಭಟನಾಕಾರರ ಬೇಡಿಕೆಗಳನ್ನು ಹಿರಿಯ ಅ ಧಿಕಾರಿಗಳಿಗೆ ಸಲ್ಲಿಸುತ್ತೇನೆ. ಈಗಾಗಲೇ ಮೊದಲ ಪ್ರಕರಣದಲ್ಲಿನ 10 ಜನರನ್ನು ಬಂಧಿಸಲಾಗಿದೆ. ವ್ಯಕ್ತಿ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ಎಂದು ತಿಳಿಹೇಳಿದರು.
ಹನುಮಂತಪ್ಪ ಹಂಚನಾಳ, ಹನುಂತಪ್ಪ ವೆಂಕಟಾಪೂರ, ಮಲ್ಲಯ್ಯ ಬುಳ್ಳಾ, ಸುರೇಶ ಅಂತರಗಂಗಿ, ಬಿ.ಎನ್. ಯರದಿಹಾಳ, ಆರ್.ಎಚ್.ಕಲ್ಮಂಗಿ, ಹುಸೇನಪ್ಪ ದೀನಸಮುಂದ್ರ, ಮುದಗಲ್ಲ ದಲಿತ ಸಂಘಟನೆಗಳು, ಸಾವಿತ್ರಿಬಾಯಿ ಫುಲೆ ಸಂಘಟನೆ ಸೇರಿದಂತೆ ದಸಂಸ, ಭಾದಪ್ಯಾ ಸಂಘಟನೆ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು