“ಕಲ್ಯಾಣ’ಗಳಿಗೆ ಮತ್ತೆ ಕಂಟಕವಾದ ಕೋವಿಡ್

ಇನ್ನು ಅನೇಕರು ಮದುವೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಣಕ್ಕೆ ನೀಡಿದ್ದಾರೆ.

Team Udayavani, Apr 20, 2021, 6:35 PM IST

Cov-19

ರಾಯಚೂರು: ಕೋವಿಡ್ ಸೋಂಕು ಮೊದಲ ಬಾರಿಯೂ ಮದುವೆ ಸೀಜನ್‌ ವೇಳೆಯೇ ಒಕ್ಕರಿಸಿ ಬಹುತೇಕ ಮದುವೆಗಳನ್ನು ರದ್ದುಗೊಳಿಸಿತ್ತು. ಈಗ ಎರಡನೇ ಅಲೆಯೂ ಹೇಳಿ ಕಳುಹಿಸಿದಂತೆ ಮದುವೆ ಸೀಜನ್‌ನಲ್ಲೇ ವ್ಯಾಪಕವಾಗಿ ಉಲ್ಬಣಿಸುವ ಮೂಲಕ ಜನರನ್ನು ಕಂಗೆಡುವಂತೆ ಮಾಡಿದೆ.

ಸೋಂಕಿನ ಪ್ರಮಾಣ ಎಲ್ಲೆಡೆ ಕಡಿಮೆ ಆಗಿದ್ದು, ಸಭೆ, ಸಮಾರಂಭಗಳು, ಸಮಾವೇಶಗಳು, ಜಾತ್ರೆಗಳು ಜೋರಾಗಿಯೇ ನಡೆದವು. ಹೀಗಾಗಿ ಸಾಕಷ್ಟು ಜನ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಲು ದೊಡ್ಡದೊಡ್ಡ ಕಲ್ಯಾಣ ಮಂಟಪಗಳನ್ನು ಬುಕ್‌ ಮಾಡಿಟ್ಟಿದ್ದಾರೆ. ಇನ್ನೇನು ಮದುವೆ ದಿನಗಳು ಶುರುವಾಗಲಿದೆ. ಆದರೆ, ಸರ್ಕಾರ ಮತ್ತೆ ಮದುವೆಗಳಿಗೆ ನಿರ್ಬಂಧ ಹೇರುವ ಮೂಲಕ ಜನರ ನಿರೀಕ್ಷೆಗಳಿಗೆ ತಣ್ಣೀರೆರೆಚಿದೆ.

ಕಳೆದ ವರ್ಷ ಕೂಡ ಲಾಕ್‌ಡೌನ್‌ ಕಾರಣಕ್ಕೆ ಸಾಕಷ್ಟು ಮದುವೆಗಳು ರದ್ದಾಗಿದ್ದವು. ಕಲ್ಯಾಣ ಮಂಟಪಗಳಿಗೆ ಮುಂಗಡ ಹಣ ನೀಡಿದ್ದರು. ಆದರೆ ಕಲ್ಯಾಣ ಮಂಟಪಗಳು ಸೀಮಿತ ಜನರಿಗೆ ಮಾತ್ರ ಅವಕಾಶ ನೀಡಿದ್ದವು. ಯಾವುದೇ ಕಾರಣಕ್ಕೂ ಹಣ ಹಿಂದಿರುಗಿಸಲ್ಲ ಎಂದು ತಿಳಿಸಿದ್ದವು. ಹೀಗಾಗಿ ಜನ ಸಾಕಷ್ಟು ಹಣ ಖರ್ಚು ಮಾಡಿದರೂ ಸರಳವಾಗಿ ಮದುವೆ ಮಾಡಿಕೊಳ್ಳುವಂತಾಗಿತ್ತು. ಈ ಬಾರಿಯೂ ಮತ್ತದೇ ಸನ್ನಿವೇಶ ಏರ್ಪಟ್ಟಿದೆ.

ಇನ್ನೇನು ಮದುವೆ ಕಾಲ ಶುರುವಾಗಿದೆ. ಈ ಕಾರಣಕ್ಕೆ ಬಹುತೇಕ ಎಲ್ಲ ಕಲ್ಯಾಣ ಮಂಟಪಗಳು ಮುಂಗಡ ಕಾಯ್ದಿರಿಸಲಾಗಿದೆ. ಅದರ ಜತೆಗೆ ಬಂಧು ಬಳಗದವರಿಗೆ ಆಮಂತ್ರಣ ಕೂಡ ಹಂಚಲಾಗಿದೆ. ಆದರೆ ಇಂಥ ವೇಳೆ ಸರ್ಕಾರ ಕೇವಲ 200 ಜನರಿಗೆ ಮಾತ್ರ ಅವಕಾಶ ನಿಗದಿ ಮಾಡಿದೆ. ಅಲ್ಲದೇ ಎಲ್ಲರಿಗೂ ಪಾಸ್‌ ಕಡ್ಡಾಯಗೊಳಿಸಿದ್ದರಿಂದ ಗೊಂದಲ ಏರ್ಪಟ್ಟಿದೆ. ಇದರಿಂದ ಜನ ಕಲ್ಯಾಣ ಮಂಟಪಗಳಿಗೆ ನೀಡಿದ ಮುಂಗಡ ಹಣ ವಾಪಸ್‌ ಕೇಳುತ್ತಿದ್ದಾರೆ.

ಸರಳ ವಿವಾಹಗಳಿಗೆ ಅನುಕೂಲ: ಕೋವಿಡ್ ನಿರ್ಬಂಧಗಳು ಮಧ್ಯಮ, ಬಡ ವರ್ಗದ ಜನರಿಗೆ ಅನುಕೂಲ ಎಂದರೆ ತಪ್ಪಾಗಲಿಕ್ಕಿಲ್ಲ. ತಮ್ಮ ಮನೆಗಳ ಮುಂದೆ, ಗ್ರಾಮದ ದೇವಸ್ಥಾನಗಳ ಆವರಣದಲ್ಲಿಯೋ ಸರಳವಾಗಿ ಮದುವೆ ಮಾಡಿಕೊಳ್ಳಲು ಒಳ್ಳೆಯ ಅವಕಾಶ. ಸಾಕಷ್ಟು ಜನ ಇದೇ ಒಳ್ಳೆಯದು. ದುಬಾರಿ ವೆಚ್ಚ ಮಾಡುವುದಕ್ಕಿಂತ ಸರಳವಾಗಿ ಮದುವೆಯಾಗುವುದರಿಂದ ಆರ್ಥಿಕ ಹೊರೆ ಕೂಡ ತಪ್ಪಲಿದೆ ಎನ್ನುತ್ತಿದ್ದು, ಅದೇ ರೀತಿ ಮದುವೆಗಳನ್ನು ಮಾಡಿ ಮುಗಿಸಿದ್ದರು. ಈ ಬಾರಿ ಕೂಡ ಅನೇಕರು ಅದೇ ದಾರಿ ಕಂಡುಕೊಳ್ಳುವ ಸಾಧ್ಯತೆಗಳಿವೆ. ಆದರೆ, ಮಕ್ಕಳ ಮದುವೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸುವವರಿಗೆ ಮಾತ್ರ ಇದು ನುಂಗಲಾಗದ ತುತ್ತಾಗಿ ಪರಿಣಮಿಸಿದೆ. ಇನ್ನು ಕಲ್ಯಾಣ ಮಂಟಪಗಳಿಗೂ ಇದು ಕಷ್ಟಕಾಲ ಎಂದೇ ಹೇಳಬೇಕು. ಆಗೊಮ್ಮೆ ಈಗೊಮ್ಮೆ ಸಣ್ಣ ಪುಣ್ಣ ಕಾರ್ಯಕ್ರಮ ಬಿಟ್ಟರೆ ಕಲ್ಯಾಣ ಮಂಟಪಗಳಿಗೆ ಮದುವೆಗಳಿಂದಲೇ ಪ್ರಮುಖ ಆದಾಯ. ಈಗ ಮದುವೆಗಳೇ ರದ್ದಾದರೆ ನಿರ್ವಹಣೆಗೂ ಕಷ್ಟಪಡಬೇಕಾಗುತ್ತದೆ ಎನ್ನುವುದು ಮಾಲೀಕರ ಅಳಲು.

ಆಮಂತ್ರಣ ಮುದ್ರಣಕ್ಕೆ ಬ್ರೇಕ್‌
ಇನ್ನು ಅನೇಕರು ಮದುವೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಣಕ್ಕೆ ನೀಡಿದ್ದಾರೆ. ಆದರೆ, ಸರ್ಕಾರ ನಿರ್ಬಂಧ ಹೇರುತ್ತಿದ್ದಂತೆ ಪ್ರಿಂಟರ್ಗಳಿಗೆ ಕರೆ ಮಾಡಿ ಕಡಿಮೆ ಕಾರ್ಡ್‌ ಮುದ್ರಿಸುವಂತೆ ಹೇಳುತ್ತಿದ್ದಾರೆ. ಬೇಕಾದರೆ ನಿಮ್ಮ ಸೇವಾ ಶುಲ್ಕ ನೀಡುತ್ತೇವೆ. ಹೆಚ್ಚು ಕಾರ್ಡ್‌ ಮುದ್ರಣ ಮಾಡಬೇಡಿ ಎನ್ನುತ್ತಿದ್ದಾರೆ. ಇನ್ನೂ ಕೆಲವರು ಕಾರ್ಡ್‌ಗಳ ಮುದ್ರಣವನ್ನೇ ರದ್ದುಗೊಳಿಸುತ್ತಿದ್ದಾರೆ. ಮನೆಯವರೇ ನೂರಾರು ಜನರಿದ್ದೇವೆ. ಬೇರೆಯವರಿಗೆ ಕಾರ್ಡ್‌ ಕೊಡುವುದೇ ಬೇಡ ಎನ್ನುವ ನಿರ್ಧಾರಕ್ಕೆ ಬರುತ್ತಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಕೇವಲ 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಪಾಸ್‌ ಇದ್ದವರಿಗೆ ಮಾತ್ರ ಪ್ರವೇಶ ಎಂದು ಹೇಳಲಾಗಿದೆ. ಅಲ್ಲದೇ ಕೋವಿಡ್‌ ನಿಯಮ ಉಲ್ಲಂಘನೆ ಮೀರಿದಲ್ಲಿ ಆಯೋಜಕರ ವಿರುದ್ಧ ಎಫ್‌ಐಆರ್‌ ದಾಖಲಿಸುವುದಾಗಿ ತಿಳಿಸಿದ್ದಾರೆ. ಈ ತಿಂಗಳು 3, ಮುಂದಿನ ತಿಂಗಳು 8 ಮದುವೆಗಳು ಬುಕ್‌ ಆಗಿದ್ದು, ಎಲ್ಲರಿಗೂ ಕರೆ ಮಾಡಿ ನಿಯಮಗಳನ್ನು ತಿಳಿಸುತ್ತಿದ್ದೇವೆ. ನಿಯಮ ಪಾಲಿಸಲು ಒಪ್ಪದಿದ್ದಲ್ಲಿ ಮದುವೆ ರದ್ದು ಮಾಡಿಕೊಳ್ಳುವಂತೆ ಹೇಳಿದ್ದೇವೆ.
*ನಾಗರಾಜ್‌, ಕಾರ್ಯದರ್ಶಿ,
ನಿಮಿಷಾಂಬಾ ಕಲ್ಯಾಣ ಮಂಟಪ, ರಾಯಚೂರು.

ಕಳೆದ ವರ್ಷದಂತೆ ಈ ವರ್ಷವೂ ನಮ್ಮ ವ್ಯಾಪಾರಕ್ಕೆ ಕೊಕ್ಕೆ ಬಿದ್ದಾಯ್ತು. ಸೀಜನ್‌ ಶುರುವಾಗಿದ್ದು, ಸಾಕಷ್ಟು ಜನ ಆಮಂತ್ರಣ ಮುದ್ರಣಕ್ಕೆ ನೀಡಿದ್ದು, ಈಗ ಕರೆ ಮಾಡಿ ಬೇಡ ಎನ್ನುತ್ತಿದ್ದಾರೆ. ಇಲ್ಲವಾದರೆ 200, 300, 500 ಕಾರ್ಡ್‌ ಮಾಡಿ ಸಾಕು ಎನ್ನುತ್ತಿದ್ದಾರೆ. ಹೀಗಾಗಿ ನಾವೇ ಕರೆ ಮಾಡಿ ಮುದ್ರಣ ಮಾಡಬೇಕೋ?, ಬೇಡವೋ? ಎಂದು ಕೇಳುತ್ತಿದ್ದು, ಬಹುತೇಕರು ಬೇಡ ಎಂದೇ ಹೇಳುತ್ತಿದ್ದಾರೆ. ಇದರಿಂದ ವ್ಯಾಪಾರ ಮತ್ತೆ ನಷ್ಟದಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.
*ಸೂಗೂರೆಡ್ಡಿ ಪಾಟೀಲ್‌,
ಜಯಶ್ರೀ ಪ್ರಿಂಟರ್, ರಾಯಚೂರು

*ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.