
ಕೋಲಾರದಲ್ಲಿ ಸಿದ್ದರಾಮಯ್ಯ ಮೊದಲು ಸ್ಪರ್ಧಿಸಲಿ, ಆಮೇಲೆ ಸೋಲು ಗೆಲುವು: ಈಶ್ವರಪ್ಪ ಟೀಕೆ
Team Udayavani, Jan 12, 2023, 1:09 PM IST

ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಲ್ಲಿ ಮೊದಲು ಸ್ಪರ್ಧಿಸಲಿ. ಆಮೇಲೆ ಸೋಲು ಗೆಲವು ಎಲ್ಲಾ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ ಮಾಡಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಿಜವಾದ ನಾಯಕ ತಾವು ಪ್ರತಿನಿಧಿಸಿದ ಕ್ಷೇತ್ರ ಅಭಿವೃದ್ಧಿ ಮಾಡಿ ಚುನಾವಣೆಗೆ ಹೋಗಬೇಕು. ಈ ರೀತಿ ಕ್ಷೇತ್ರಗಳನ್ನು ಬದಲಿಸುವುದು ನಾಯಕನ ಲಕ್ಷಣವಲ್ಲ. ಚಾಮುಂಡೇಶ್ವರಿಯಲ್ಲಿ ಸೋತರು. ಈಗ ಬದಾಮಿಯಲ್ಲಿ ಸೋಲುವ ಭೀತಿ ಎದುರಾಗಿದೆ. ಹೀಗಾಗಿ ಕೋಲಾರಕ್ಕೆ ಹೋಗುತ್ತಿದ್ದಾರೆ. ಆದರೆ, ಅವರು ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಕಾಂಗ್ರೆಸ್ ನಲ್ಲಿ ಖರ್ಗೆ, ಮುನಿಯಪ್ಪ, ಸಿದ್ದರಾಮಯ್ಯ, ಡಿಕೆಶಿ ನಡುವೆಯೇ ಜಗಳಗಳಿವೆ. ಹೀಗಾದರೆ ಅವರು ಅಧಿಕಾರಕ್ಕೆ ಬರುವುದಿರಲಿ ವಿರೋಧ ಪಕ್ಷದಲ್ಲೂ ಇರುವುದಿಲ್ಲ ಎಂದು ಟೀಕಿಸಿದರು.
ಮೋದಿಯವರನ್ನು ಟೀಕಿಸುವ ಯೋಗ್ಯತೆ ಸಿದ್ದರಾಮಯ್ಯರಿಗಿಲ್ಲ. ಸೂರ್ಯನಿಗೆ ಉಗಿದರೆ ತಾವು ದೊಡ್ಡ ನಾಯಕ ಎನಿಸಿಕೊಳ್ಳುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ತಮ್ಮ ಮೇಲೆಯೇ ಉಗುಳು ಬೀಳುತ್ತದೆ ಎನ್ನುವ ಪರಿಜ್ಞಾನ ಇಲ್ಲ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಭಾರತ- ಲಂಕಾ ಕದನ: ನಿರ್ಣಾಯಕ ಟಾಸ್ ಗೆದ್ದ ಶನಕ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ
ಸಿದ್ದರಾಮಯ್ಯ, ಎಚ್.ವಿಶ್ವನಾಥರಿಗೆ ಪಕ್ಷ ನಿಷ್ಠೆ ಇಲ್ಲ. ಅಧಿಕಾರದಲ್ಲಿರುವ ಪಕ್ಷಗಳೇ ಬೇಕು. ನಮಗೆ ನಮ್ಮ ಪಕ್ಷ ತಾಯಿ ಇದ್ದಂತೆ, ತಾಯಿಗೆ ಜೀವನದಲ್ಲಿ ದ್ರೋಹ ಮಾಡಿಲ್ಲ. ಆದರೆ, ಅವರು ಅಧಿಕಾರ ಇರುವಲ್ಲಿ ಹೋಗಬೇಕು ಎನ್ನುತ್ತಾರೆ ಎಂದರು.
ಸ್ಯಾಂಟ್ರೊ ರವಿ ಪ್ರಕರಣದ ತನಿಖೆ ಆಗಲಿ. ಕಳ್ಳ ಸಾಕ್ಷಿ ಸಮೇತ ಸಿಕ್ಕ ಮೇಲೆಯೇ ಯಾರು ತಪ್ಪಿತಸ್ಥರು ಎಂಬುದು ಗೊತ್ತಾಗುತ್ತದೆ. ತನಿಖೆ ಆದಾಗಲೇ ಸತ್ಯಾಂಶ ಬಯಲಿಗೆ ಬರಲಿದೆ ಎಂದರು.
ದೇಶದಲ್ಲಿ ವಿರೋಧ ಪಕ್ಷಗಳೇ ಇಲ್ಲದ ಸ್ಥಿತಿ ಬರುತ್ತಿದೆ. ಕಾಂಗ್ರೆಸ್ ಕನಿಷ್ಠಪಕ್ಷ ವಿಪಕ್ಷದಲ್ಲಿರಲು ಇಂಥ ಯಾತ್ರೆಗಳನ್ನು ಮಾಡಬೇಕಿದೆ. ಕಾಂಗ್ರೆಸ್ ಕೂಡ ಪ್ರಾದೇಶಿಕ ಪಕ್ಷದಂತಾಗಿದೆ. ಜನಾರ್ದನ ರೆಡ್ಡಿ ಪಕ್ಷದಿಂದ ಬಿಜೆಪಿಗೇನು ಧಕ್ಕೆ ಇಲ್ಲ. ಆ ಪಕ್ಷಕ್ಕೆ ಯಾರು ಬೇಕಾದರೂ ಹೋಗಬಹುದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಜಿಯೋ ಸಿನಿಮಾ ಪ್ರಭಾವ: ಕ್ರಿಕೆಟ್ ಅಭಿಮಾನಿಗಳಿಗೆ ಗಿಫ್ಟ್ ಕೊಟ್ಟ ಹಾಟ್ ಸ್ಟಾರ್

ವರ್ಗಾವಣೆಗೊಂಡ ಫಾರ್ಮಸಿ ಅಧಿಕಾರಿ ಹಾಗೂ ಆಂಬುಲೆನ್ಸ್ ಚಾಲಕ ಸೋಮನಗೌಡ.ಸಿ.ಎಂ ಅವರಿಗೆ ಸನ್ಮಾನ

Panaji: ಜೂನ್ 12, 13ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sharad Pawar : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ರಾವತ್ ಸಹೋದರರಿಗೆ ಜೀವ ಬೆದರಿಕೆ

Mangaluru: ಎಂಡಿಎಂಎ ಮಾದಕ ವಸ್ತು ಹೊಂದಿದ ಇಬ್ಬರು ಆರೋಪಿಗಳ ಸೆರೆ