ಕೋರಂ ಕೊರತೆ; ಜಿಪಂ ಸಭೆ ಮತ್ತೆ ಮುಂದಕ್ಕೆ


Team Udayavani, Feb 8, 2019, 9:53 AM IST

vij-4.jpg

ರಾಯಚೂರು: ಕೋರಂ ಕೊರತೆಯಿಂದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಮತ್ತೂಮ್ಮೆ ಮುಂದೂಡಿದ್ದು ಸದಸ್ಯರ ವ್ಯಾಪಕ್ಕೆ ಅಸಮಾಧಾನಕ್ಕೆ ಕಾರಣವಾದರೆ; ಮತ್ತೂಂದೆಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿಗಳು ಜಿಪಂ ಆಡಳಿತ ವೈಫಲ್ಯ ಕುರಿತು ಸಮಗ್ರ ವರದಿ ನೀಡುವಂತೆ ಸಿಇಒಗೆ ಆದೇಶ ಮಾಡಿದ್ದಾರೆ.

ಈ ಮುಂಚೆ ಸತತ ಮೂರು ಸಭೆಗಳು ಕೋರಂ ಕೊರತೆಯಿಂದ ರದ್ದಾಗಿದ್ದವು. ಆದರೆ, ಕಳೆದ ಸಭೆ ನಡೆಸಲಾಗಿತ್ತು. ಗುರುವಾರ ಹಮ್ಮಿಕೊಂಡ ಸಭೆಯೂ ಕೋರಂ ಕೊರತೆಗೆ ಬಲಿಯಾಯಿತು. 2019ನೇ ಸಾಲಿನ ಮೊದಲ ಸಭೆಯಾದರೂ ನಡೆಯಬಹುದಾ ಎಂಬ ನಿರೀಕ್ಷೆ ಹುಸಿಯಾಯಿತು. ಇದರಿಂದ ಈ ಆಡಳಿತದ ಮೂರು ವರ್ಷದ ಅವಧಿಯಲ್ಲಿ ಎಂಟು ಬಾರಿ ಸಭೆ ಕರೆದಿದ್ದು, ಅದರಲ್ಲಿ ನಾಲ್ಕು ಬಾರಿ ಮುಂದೂಡಿದಂತಾಗಿದೆ.

ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಶುರುವಾಗಬೇಕಿದ್ದ ಸಭೆ 12 ಗಂಟೆಯಾದರೂ ಆರಂಭವಾಗಲಿಲ್ಲ. ಅಧ್ಯಕ್ಷೆ ಸೇರಿದಂತೆ ಯಾವೊಬ್ಬ ಸದಸ್ಯರು ಬರಲಿಲ್ಲ. ಇದರಿಂದ ಸಿಇಒ ನಲೀನ್‌ ಅತುಲ್‌ ಕಾದು ಕುಳಿತಿದ್ದರು. 12 ಗಂಟೆ ಬಳಿಕ ಒಬ್ಬರಾದ ಬಳಿಕ ಒಬ್ಬರಂತೆ ಸದಸ್ಯರು ಆಗಮಿಸಿದರು. ಅಧ್ಯಕ್ಷರು ಪಾಲ್ಗೊಂಡ ಸದಸ್ಯರ ಹಾಜರಾತಿ ಪಡೆಯುವಂತೆ ಸೂಚಿಸಿದರು. ಇಂದಿನ ಸಭೆಗೆ ಕೇವಲ 24 ಸದಸ್ಯರು ಮಾತ್ರ ಹಾಜರಾಗಿದ್ದಾರೆ. ಜಿಪಂ ಸಾಮಾನ್ಯ ಸಭೆ ನಡೆಸಲು ಕನಿಷ್ಠ 28 ಸದಸ್ಯರ ಬೆಂಬಲ ಬೇಕಿದ್ದು, ಕೊರಂ ಕೊರತೆ ಎದುರಾಯಿತು. ಹೀಗಾಗಿ ವಿಧಿ ಇಲ್ಲದೇ ಅಧ್ಯಕ್ಷೆ ಆದಿಮನಿ ವೀರಲಕ್ಷಿ ್ಮೕ ಅವರು ಸಭೆ ಮುಂದೂಡಲಾಗಿದೆ ಎಂದು ಘೋಷಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಡಿಸಿದ ಗಬ್ಬೂರು ಜಿಪಂ ಕ್ಷೇತ್ರದ ಕಾಂಗ್ರೆಸ್‌ ಸದಸ್ಯ ಶರಬಣ್ಣ ಸಾಹುಕಾರ, ವಿಧಾನಸಭೆ ಅಧಿವೇಶನದ ವೇಳೆ ಸಭೆ ಕರೆಯಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಅಧ್ಯಕ್ಷೆ, ಸಿಇಒರನ್ನು ಪ್ರಶ್ನಿಸಿದರು. ಆದರೆ, ಅದಕ್ಕೆ ನಿರುತ್ತರರಾದ ಅಧ್ಯಕ್ಷರು ಅಲ್ಲಿಂದ ನಿರ್ಗಮಿಸಿದರು.

ಜಿಪಂ ಆಡಳಿತ ಅಸ್ತಿತ್ವಕ್ಕೆ ಬಂದ ನಂತರ ಕಳೆದ ಮೂರು ವರ್ಷದ ಅಧಿಕಾರ ಅವಧಿಯಲ್ಲಿ ಎಂಟು ಬಾರಿ ಸಭೆ ಕರೆದಿದ್ದು, ಅದರಲ್ಲಿ 4 ಬಾರಿ ಕೋರಂ ಕೊರತೆಯಿಂದಲೇ ಮುಂದೂಡಿದಂತಾಯಿತು. ಅಧ್ಯಕ್ಷರು ಸದಸ್ಯರೊಂದಿಗೆ ಉತ್ತಮ ಸಮನ್ವಯತೆ ಕಾಯ್ದುಕೊಳ್ಳುತ್ತಿಲ್ಲ ಎನ್ನುವುದು ಮತ್ತೂಮ್ಮೆ ಸಾಬೀತಾದಂತಾಯಿತು. ಅಚ್ಚರಿ ಎಂದರೆ ಕಾಂಗ್ರೆಸ್‌ನ ಒಬ್ಬ ಸದಸ್ಯರು ಮಾತ್ರ ಸಭೆಗೆ ಬಂದಿದ್ದರು.

ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ಮಹ್ಮದ್‌ ಯೂಸೂಫ್‌, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಅಷ್ಟರೊಳಗೆ ಬಾಕಿ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.