40 ಹಳ್ಳಿಗಳಿಗೆ ಒಬ್ಬರೇ ಅರೆ ವೈದ್ಯರು!

|ವೈದ್ಯರ ಹುದ್ದೆಗಳು ಖಾಲಿ-ಖಾಲಿ |ತುಕ್ಕು ಹಿಡಿದ ಎಕ್ಸರೇ ಯಂತ್ರ |ಶೌಚಾಲಯ ಅವ್ಯವಸ್ಥೆ

Team Udayavani, Dec 28, 2020, 4:33 PM IST

40 ಹಳ್ಳಿಗಳಿಗೆ ಒಬ್ಬರೇ ಅರೆ ವೈದ್ಯರು!

ದೇವದುರ್ಗ: ತಾಲೂಕಿನ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆಗಳು ಖಾಲಿ ಇದ್ದು, ಮಹಾಮಾರಿ ಕೋವಿಡ್ ರೋಗದ ಆತಂಕ ನಡುವೆ 40 ಹಳ್ಳಿಗಳಿಗೆ ಒಬ್ಬರೇ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಡರೋಗಿಗಳಿಗೆ ಸಂಜೀವಿನಿ ಆಗಬೇಕಾದ ಆಸ್ಪತ್ರೆ ಶಾಪ ಗ್ರಸ್ತವಾಗಿದೆ.

ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿ 40ಕ್ಕೂ ಹೆಚ್ಚು ಹಳ್ಳಿಗಳು ಬರುತ್ತವೆ. ಈ ಗ್ರಾಮಗಳ ಜನರಿಗೆ ಒಬ್ಬರೇ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. 5 ಜನ ವೈದ್ಯರ ಹುದ್ದೆಯಲ್ಲಿ ಅರೆ ಸರಕಾರಿ ಗುತ್ತಿಗೆಯಓರ್ವ ವೈದ್ಯರಿದ್ದಾರೆ. ಉಳಿದ ಹುದ್ದೆ ಭರ್ತಿಗೆ ಸರಕಾರ ಮೀನಾಮೇಷ ಎಣಿಸುತ್ತಿದ್ದು, ಬಡರೋಗಿಗಳು ಆತಂಕಪಡುವಂತಾಗಿದೆ. ಹೇರುಂಡಿ, ಬಾಗೂರು, ಬೊಮ್ಮನಹಳ್ಳಿ, ಚಿಂಚೋಡಿ, ಜಾಲಹಳ್ಳಿ, ಕರಡಿಗುಡ್ಡ, ಅಮರಾಪುರು, ಲಿಂಗದಹಳ್ಳಿ, ಕಕ್ಕಲದೊಡ್ಡಿ, ಜಂಬಲದಿನ್ನಿ, ಮುಂಡರಗಿ, ಪರಾಪೂರು, ಕಮ್ಮಲದಿನ್ನಿ, ಮೇಕಲದೊಡ್ಡಿ, ಗಾಣಾಧಾಳ, ಬಿಆರ್‌.ಗುಂಡ, ಎಸ್‌.ಸಿದ್ದಪುರು, ಮುಕ್ಕನಾಳು, ಬುಂಕಲದೊಡ್ಡಿ, ಬಸಾಪುರು, ಯರಗುಡ್ಡ ಸೇರಿ 40ಕ್ಕೂ ಹಳ್ಳಿಗಳ ಬಡ ರೋಗಿಗಳು ಚಿಕಿತ್ಸೆಗೆ ಈ ಸಮುದಾಯ ಆರೋಗ್ಯ ಕೇಂದ್ರವನ್ನೇ ಅವಲಂಬಿತರಾಗಿದ್ದಾರೆ.

ಅವಧಿ ಮುಗಿದ ಎಕ್ಸರೇ ಯಂತ್ರ: ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ಎಕ್ಸರೇ ಯಂತ್ರ ಕೆಟ್ಟು ಹೋಗಿದೆ. ಎಕ್ಸರೇ ಸೌಲಭ್ಯಕ್ಕಾಗಿ ರೋಗಿಗಳು ಪಟ್ಟಣಕ್ಕೆ ಬರಬೇಕಾಗಿದೆ. ಯಂತ್ರದ ಅವಧಿ 10 ವರ್ಷಕ್ಕೆ ಮುಗಿದಿದ್ದು, ಎರಡೂ¾ರು ವರ್ಷಗಳಿಂದ ಕೆಟ್ಟ ಯಂತ್ರಕ್ಕೆ ಲಕ್ಷಾಂತರ ರೂ. ವೆಚ್ಚ ಭರಿಸಲಾಗುತ್ತಿದೆ. 40ಕ್ಕೂ ಹೆಚ್ಚು ಹಳ್ಳಿಗಳ ಬಡರೋಗಿಗಳು ಎಕ್ಸರೇ ಸೌಲಭ್ಯ ಪಡೆಯಲು 18 ಕಿ.ಮೀ. ದೂರದ ದೇವದುರ್ಗ ಪಟ್ಟಣಕ್ಕೆ ಬರಬೇಕಾಗಿದೆ.

ಹುದ್ದೆಗಳು ಖಾಲಿ-ಖಾಲಿ: ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಐದು ವೈದ್ಯರ ಹುದ್ದೆಗಳುಬಹುತೇಕ ಖಾಲಿ ಇದ್ದು, ಅರೆ ಸರಕಾರಿ ಗುತ್ತಿಗೆ ಒಬ್ಬವೈದ್ಯರೇ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. 12 ಡಿ ಗ್ರೂಪ್‌ ಹುದ್ದೆಯಲ್ಲಿ 7 ಜನರಿದ್ದು, 5 ಹುದ್ದೆಗಳು ಖಾಲಿ ಇವೆ. ಹೆರಿಗೆ ವೈದ್ಯರು ಇಲ್ಲದೇ ಇರುವ ಹಿನ್ನೆಲೆ ಸ್ಟಾರ್ಪ್‌ ನರ್ಸ್‌ಗಳೇ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿದ್ದು, ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಅವ್ಯವಸ್ಥೆ ಶೌಚಾಲಯ: ಆರೋಗ್ಯ ಕುರಿತುಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲೇ ಶೌಚಾಲಯ ಅವ್ಯವಸ್ಥೆಗೊಂಡಿದೆ. ಪುರುಷ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ಮಹಿಳೆಯರ ಶೌಚಾಲಯವೇ ಸಾಮೂಹಿಕವಾಗಿ ಬಳಕೆ ನಡೆದಿದೆ. 30 ಹಾಸಿಗೆ ಆಸ್ಪತ್ರೆ ಹಲವು ಸಮಸ್ಯೆ ಮಧ್ಯೆ ಘನಘೋರ ನರಕ ಎನಿಸಿದೆ. ಇನ್ನಾದರೂ ಇಲ್ಲಿನ ಸಮಸ್ಯೆ ಕುರಿತು ಸ್ಥಳೀಯ ಜನಪತ್ರಿನಿಧಿಗಳು ಗಮನ ಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೆಲ ವೈದ್ಯರ ಹುದ್ದೆಗಳ ಖಾಲಿ ಇದ್ದು, ನಿಯೋಜನೆಗೊಂಡ ವೈದ್ಯರು ಸೇವೆ ನೀಡಲಾಗುತ್ತಿದೆ. ಎಕ್ಸರೇ ಕೆಟ್ಟು ಹೋಗಿದ್ದು, ದುರಸ್ತಿಗೆ ಕ್ರಮವಹಿಸಲಾಗುತ್ತದೆ.  –ಡಾ| ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.