ಬಾಡಿಗೆ ಕಟ್ಟಡಗಳಲ್ಲಿ ಸೌಲಭ್ಯ ಕೊರತೆ


Team Udayavani, Oct 7, 2019, 2:06 PM IST

rc-tdy-1

ದೇವದುರ್ಗ: ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಟ್ಟಣ ಸೇರಿ ತಾಲೂಕಿನಾದ್ಯಂತ ಸ್ವಂತ ಮತ್ತು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 17 ವಸತಿ ನಿಲಯಗಳಲ್ಲಿ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ 17 ವಸತಿ ನಿಲಯಗಳು ನಡೆಯುತ್ತಿವೆ. ಇದರಲ್ಲಿ 8 ಸ್ವಂತ ಕಟ್ಟಡ ಹೊಂದಿದ್ದರೆ, 9 ವಸತಿ ನಿಲಯಗಳನ್ನು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಇದಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಬಾಡಿಗೆ ವ್ಯಯಿಸಲಾಗುತ್ತಿದೆ. ಬಾಡಿಗೆ ಕಟ್ಟಡಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಮೂಲ ಸೌಲಭ್ಯಗಳಿಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಬಾಡಿಗೆ ಎಷ್ಟು: ಹಲವಾರು ವರ್ಷದಿಂದ ಬಾಡಿಗೆ ಕಟ್ಟಡದಲ್ಲೇ ವಸತಿ ನಿಲಯ ನಡೆಸಲಾಗುತ್ತಿದೆ. ಪಟ್ಟಣದ ಜಾಲಹಳ್ಳಿ ರಸ್ತೆಯಲ್ಲಿರುವ ಬಾಡಿಗೆ ಕಟ್ಟಡದಲ್ಲಿ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯವಿದ್ದು, ಪ್ರತಿ ತಿಂಗಳು 1.81 ಲಕ್ಷ ಬಾಡಿಗೆ ಪಾವತಿಸಲಾಗುತ್ತಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರದ ಮೆಟ್ರಿಕ್‌ ನಂತರ ಬಾಲಕಿಯರ ವಸತಿ ನಿಲಯಕ್ಕೆ 47,967 ರೂ. ಅರಕೇರಾದಲ್ಲಿನ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯಕ್ಕೆ 14,500 ರೂ., ಗಬ್ಬೂರಿನ ಮೆಟ್ರಕ್‌ ಪೂರ್ವ ಬಾಲಕರ ವಸತಿ ನಿಲಯಕ್ಕೆ 30,400 ರೂ., ಗಬ್ಬೂರು ಬಾಲಕರ ವಸತಿ ನಿಲಯಕ್ಕೆ 14,350 ರೂ., ಹಿರೇರಾಯಕುಂಪಿ ವಸತಿ ನಿಲಯಕ್ಕೆ 4 ಸಾವಿರ ರೂ. ನಾಗಡದಿನ್ನಿ ಗ್ರಾಮದ ವಸತಿ ನಿಲಯಕ್ಕೆ 9,200 ರೂ. ಪ್ರತಿ ತಿಂಗಳು ಬಾಡಿಗೆ ಪಾವತಿಸಲಾಗುತ್ತಿದೆ. ಸೌಲಭ್ಯಕ್ಕಿಂತ ಸಮಸ್ಯೆ ಜಾಸ್ತಿ: ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಸೌಲಭ್ಯಕ್ಕಿಂತ ಸಮಸ್ಯೆಯೇ ಜಾಸ್ತಿ ಎನ್ನುವಂತಾಗಿದೆ.

ಕುಡಿಯುವ ನೀರು, ಶೌಚಾಲಯ, ವಿದ್ಯುತ್‌ ದೀಪ, ಸ್ನಾನಗೃಹ, ಗುಣಮಟ್ಟದ ಅಡುಗೆ ಇತರೆ ಸೌಲಭ್ಯಗಳು ಸಿಗದೇ ವಿದ್ಯಾರ್ಥಿಗಳು ಪದೇ ಪದೇ ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿದೆ. ಇಲಾಖೆ ಅಧಿಕಾರಿ ಆರೇಳು ತಿಂಗಳಿಗೊಮ್ಮೆ ಬದಲಾಗುತ್ತಿರುವುದರಿಂದ ವಸತಿ ನಿಲಯಗಳಲ್ಲಿನ ಸಮಸ್ಯೆಗೆ ಮುಕ್ತಿ ಇಲ್ಲದಂತಾಗಿದೆ ಎಂಬುದು ವಿದ್ಯಾರ್ಥಿಗಳ ದೂರು.

ಅಧಿಕಾರಿ ಹುದ್ದೆ ಖಾಲಿ: ದೇವದುರ್ಗ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆ.31ರಂದು ನಿವೃತ್ತರಾಗಿದ್ದಾರೆ. ಒಂದು ತಿಂಗಳಾದರೂ ಈ ಹುದ್ದೆಗೆ ಅಧಿಕಾರಿ ನಿಯೋಜನೆ ಮಾಡಿಲ್ಲ. ಇದ್ದವರಿಗೆ ಹಣಕಾಸು ಚಾರ್ಜ್‌ ನೀಡಿಲ್ಲ. ಕಡತಗಳ ವಿಲೇವಾರಿ ಆಗುತ್ತಿಲ್ಲ. ಹೀಗಾಗಿ ವಸತಿ ನಿಲಯ ಮೇಲ್ವಿಚಾರಕರು ತೊಂದರೆ ಎದುರಿಸುವಂತಾಗಿದೆ. ತಾತ್ಕಾಲಿಕ ಮ್ಯಾನೇಜರ್‌ಗೆ ಕಚೇರಿ ವಸತಿ ನಿಲಯಗಳ ಹೊಣೆ ವಹಿಸಲಾಗಿದೆ. ವಸತಿ ನಿಲಯದಲ್ಲಿನ ಸಮಸ್ಯೆ ಹೇಳಿಕೊಳ್ಳಲು ವಿದ್ಯಾರ್ಥಿಗಳು ಕಚೇರಿಗೆ ಬಂದರೆ ಅಧಿಕಾರಿಗಳಿಲ್ಲ ಎಂದು ವಾಪಸ್‌ ಕಳಿಸಲಾಗುತ್ತಿದೆ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಾಲೂಕು ಕಚೇರಿಗೆ ಅಧಿಕಾರಿ ನೇಮಿಸುವ ಜೊತೆಗೆ ವಸತಿ ನಿಲಯಗಳಲ್ಲಿನ ಸಮಸ್ಯೆ ಪರಿಹರಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.