ನಿರ್ವಹಣೆ ಕೊರತೆ: ಶೌಚಾಲಯ ಬಳಕೆಗೆ ಹಿಂದೇಟು


Team Udayavani, Dec 31, 2019, 12:17 PM IST

rc-tdy-2

ಮುದಗಲ್ಲ: ಪಟ್ಟಣದ ವಾರ್ಡ್‌ ನಂ. 2, 11, 13 ಹಾಗೂ 14ರಲ್ಲಿ ಸರ್ಕಾರದ ವಿವಿಧ ಅನುದಾನದಲ್ಲಿ ನಿರ್ಮಿಸಿದ ಮಹಿಳೆಯರ ಶೌಚಾಲಯಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಮತ್ತು ನಿರ್ವಹಣೆ ಮಾಡುವಲ್ಲಿ ಪುರಸಭೆ ವಿಫಲವಾಗಿದ್ದರಿಂದ ಮಹಿಳೆಯರು ಬಳಕೆಗೆ ಹಿಂದೇಟು ಹಾಕುವಂತಾಗಿದ್ದು, ಶೌಚಕ್ಕೆ ಬಯಲನ್ನೇ ಆಶ್ರಯಿಸುವಂತಾಗಿದೆ.

ವಾರ್ಡ್‌ ನಂ.11 ಮತ್ತು 13ರಲ್ಲಿ 2004-05ನೇ ಸಾಲಿನಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ಅನುದಾನದಲ್ಲಿ ತಲಾ 4 ಲಕ್ಷ ರೂ. ಹಾಗೂ ವಾರ್ಡ್‌ ನಂ. 2 ಮತ್ತು 14ರಲ್ಲಿ ಎಸ್‌ಎಫ್‌ಸಿ ಅನುದಾನದಲ್ಲಿ ತಲಾ 5 ಲಕ್ಷ ರೂ. ವೆಚ್ಚದಲ್ಲಿ ಮಹಿಳೆಯರ ಶೌಚಾಲಯ ನಿರ್ಮಿಸಿ ಪಟ್ಟಣ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ.

ಈ ಪೈಕಿ ವಾರ್ಡ್‌ ನಂ.11ರ ವ್ಯಾಪ್ತಿಯ ಪುರಸಭೆ ಬಳಿಯ ಶೌಚಾಲಯಕ್ಕೆ ಮಾತ್ರ ನಿರ್ವಹಣೆಗೆ ಟೆಂಡರ್‌ ಪಡೆದಿದ್ದು, ಇದು ಬಳಕೆಯಲ್ಲಿದೆ.  ಇನ್ನು ಉಳಿದಂತೆ ವಾರ್ಡ್‌ 2, 13, 14ರ ಶೌಚಾಲಯ ನಿರ್ವಹಣೆಗೆ ಟೆಂಡರ್‌ ಕರೆದರೂ ಯಾರೂ ಮುಂದೆ ಬಂದಿರಲಿಲ್ಲ. ಹೀಗಾಗಿ ಇವುಗಳನ್ನು ಆರಂಭಿಸಿದ್ದಿಲ್ಲ. ಈ ವಾರ್ಡ್‌ಗಳ ಮಹಿಳೆಯರ ಒತ್ತಾಯದ ಮೇರೆಗೆ ಪುರಸಭೆ ನೀರಿನ ವ್ಯವಸ್ಥೆ ಕಲ್ಪಿಸಿ ಬಳಕೆಗೆ ಮುಕ್ತಗೊಳಿಸಿತ್ತು. ಆದರೆ ಶೌಚಾಲಯದಲ್ಲಿ ಸ್ವಚ್ಛತೆ ಕಾಪಾಡದ್ದರಿಂದ ಇತರೆ ಸೌಕರ್ಯ ಕಲ್ಪಿಸದ್ದರಿಂದ ಈಗ ಜನ ಬಳಕೆಗೆ ಹಿಂದೇಟು ಹಾಕುವಂತಾಗಿದ್ದು, ಬಯಲನ್ನೇ ಆಶ್ರಯಿಸುವಂತಾಗಿದೆ.

ಮನೆಗಳ ಅಕ್ಕಪಕ್ಕದ ಖಾಲಿ ನಿವೇಶನ, ರಸ್ತೆ, ಜಾಲಿಗಡಗಳ ಮರೆಯನ್ನು ಮಹಿಳೆಯರು ಆಶ್ರಯಿಸಬೇಕಾಗಿದೆ. ಲಕ್ಷಾಂತರ ರೂ. ವ್ಯಯಿಸಿ ಶೌಚಾಲಯ ನಿರ್ಮಿಸಿದ್ದರೂ ಪುರಸಭೆ ಅವುಗಳಿಗೆ ಸೌಕರ್ಯ ಕಲ್ಪಿಸುವಲ್ಲಿ, ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ.

ಮಹಿಳೆಯರ ಶೌಚಾಲಯಗಳಿಗೆ ತೆರಳಲು ರಸ್ತೆ, ಶೌಚಾಲಯದಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್‌ ಸೌಲಭ್ಯ ಮತ್ತು ಶೌಚಾಲಯದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಿ ಆರಂಭಿಸಬೇಕಾದ ಪುರಸಭೆ ಅದಾವುದನ್ನು ಮಾಡಿಲ್ಲ. ಈ ಬಗ್ಗೆ ವಾರ್ಡಿನ ಮಹಿಳೆಯರು ಹಲವು ಬಾರಿ ಪುರಸಭೆ ಮುಖ್ಯಾಧಿಕಾರಿ, ಹಿಂದಿನ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಅಲ್ಲದೆ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೂ ಮನವಿ ಸಲ್ಲಿಸಲಾಗಿದ್ದು ಇದುವರೆಗೂ ಸೂಕ್ತ ಕ್ರಮ ಜರುಗಿಸಿಲ್ಲ.

ಯಾರು ಬರುತ್ತಿಲ್ಲ: ಪಟ್ಟಣದಲ್ಲಿ ಮೂರು ಹೈಟೆಕ್‌ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಪುರಸಭೆ ಹತ್ತಿರದ ಮೂತ್ರಾಲಯ ಮತ್ತು ಶೌಚಾಲಯವನ್ನು ಇಲಕಲ್ಲ ಮೂಲದವರು ಟೆಂಡರ್‌ ಪಡೆದು ನಿರ್ವಹಣೆ ಮಾಡುತ್ತಿದ್ದಾರೆ. ಉಳಿದ ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೆ ಈ ಹಿಂದೆಯೇಟೆಂಡರ್‌ ಕರೆಯಲಾಗಿದ್ದು, ಯಾರೊಬ್ಬರು ಮುಂದೆ ಬರುತ್ತಿಲ್ಲ. ಮೇಲಾಗಿ ಶೌಚಾಲಯವನ್ನು ಉಪಯೋಗಿಸುವ ಸಾರ್ವಜನಿಕರು ಪ್ರತಿಯೊಬ್ಬರು 5ರೂ. ಪಾವತಿಸಬೇಕು. ಈ ಹಣ ಶೌಚಾಲಯ ನಿರ್ವಹಣೆ ಮಾಡುವವರೇ ಬಳಸಿಕೊಳ್ಳಬಹುದು. ಆದರೂ ಗುತ್ತಿಗೆ ಪಡೆಯಲು ಯಾರೂ ಬರುತ್ತಿಲ್ಲವೆಂದು ಪುರಸಭೆ ಮೂಲಗಳು ಪತ್ರಿಕೆಗೆ ತಿಳಿಸಿವೆ. ಶೌಚಾಲಯ ನಿರ್ವಹಣೆಗೆ ಖಾಸಗಿ ವ್ಯಕ್ತಿಗಳನ್ನು ನೇಮಿಸಿದ್ದಲ್ಲಿ ಸ್ವಚ್ಛತೆ ಕಾಪಾಡಬಹುದು ಎನ್ನುತ್ತಾರೆ ಪುರಸಭೆ ಮಾಜಿ ಅಧ್ಯಕ್ಷ ರಜ್ಜಬಲಿ ಟಿಂಗ್ರಿ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.