ವಿದ್ಯುತ್‌ ಕಣ್ಣಾ ಮುಚ್ಚಾಲೆ; ರೈತರು ಕಂಗಾಲು

ನೀರು ಹರಿಸಲಾಗದೇ ಒಣಗುತ್ತಿರುವ ಭತ್ತ ಬೆಳೆ

Team Udayavani, Sep 15, 2020, 3:33 PM IST

ವಿದ್ಯುತ್‌ ಕಣ್ಣಾ ಮುಚ್ಚಾಲೆ; ರೈತರು ಕಂಗಾಲು

ರಾಯಚೂರು: ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಣ್ಣಾ ಮುಚ್ಚಾಲೆ ಆಟ ಮುಂದುವರಿದಿದ್ದು, ಜಮೀನುಗಳಿಗೆ ನೀರು ಕಟ್ಟಲಾಗದೆ ರೈತರು ಕಂಗಾಲಾಗಿದ್ದಾರೆ. ಹಗಲಲ್ಲಿ 7 ಗಂಟೆ ತ್ರಿಪೇಸ್‌ ವಿದ್ಯುತ್‌ ನೀಡುವುದಾಗಿ ತಿಳಿಸಿದರೂ ಮನಸೋಇಚ್ಛೆ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ.ಇದರಿಂದ ರೈತರಿಗೆ ಹೊತ್ತು ಗೊತ್ತಿಲ್ಲದೇ ಜಮೀನಿಗೆ ಹೋಗಿ ನೀರು ಕಟ್ಟುವ ಪರಿಸ್ಥಿತಿ ಎದುರಾಗಿದೆ.

ಮಳೆ, ಗಾಳಿ ಇಲ್ಲದಿದ್ದರೂ ನಾಲ್ಕೈದು ಗಂಟೆ ವಿದ್ಯುತ್‌ ಕಡಿತಗೊಳಿಸಲಾಗುತ್ತಿದೆ. ರಾಯಚೂರು ತಾಲೂಕಿನ ಕಲಮಲ ಹೋಬಳಿಯಲ್ಲಿ ಕಳೆದ ಕೆಲ ದಿನಗಳಿಂದ ಈ ರೀತಿ ವಿದ್ಯುತ್‌ ಸರಬರಾಜಾಗುತ್ತಿದೆ. ಈ ಬಗ್ಗೆ ರೈತರು ಜೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಕೆಲಸ ನಡೆದಿದೆ ಅರ್ಧ ಗಂಟೆಯೊಳಗೆ ಬರುತ್ತದೆ ಎಂದು ಹೇಳುತ್ತಾರೆ. ಮತ್ತೂಮ್ಮೆ ಕರೆಮಾಡಿದರೆ ಸ್ವೀಕರಿಸುವುದಿಲ್ಲ ಎನ್ನುವುದು ರೈತರ ಅಳಲು.

ಈಗ ಭತ್ತ ನಾಟಿ ಮಾಡಿದ್ದು, ಕಾಲಕಾಲಕ್ಕೆ ನೀರು ಕಟ್ಟಬೇಕಿದೆ. ಕಳೆದ ಕೆಲ ದಿನಗಳಿಂದ ಸಕಾಲಕ್ಕೆ ನೀರು ಹರಿಸಲು ಆಗುತ್ತಿಲ್ಲ. ವಿದ್ಯುತ್‌ ಇದ್ದರೂ ತ್ರಿಪೇಸ್‌ ನೀಡುತ್ತಿಲ್ಲ.ಇದರಿಂದ ಬೋರ್‌ನಿಂದ ಹೆಚ್ಚು ನೀರುಹರಿಸಲಾಗುತ್ತಿಲ್ಲ. ಭತ್ತ ಒಣಗುತ್ತಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ ತಾಲೂಕಿನ ಜೇಗರಕಲ್‌ ಭಾಗದ ರೈತರು.

ಹಗಲಲ್ಲಿ 4 ಗಂಟೆ ಮಾತ್ರ: ಹಗಲಲ್ಲಿ ನಿರಂತರ 7 ಗಂಟೆಗಳ ಕಾಲ ತ್ರಿಪೇಸ್‌ ವಿದ್ಯುತ್‌ ನೀಡಬೇಕು ಎಂಬ ಆದೇಶವಿದೆ. ಆದರೆ, ರೈತರು ದೂರುವ ಪ್ರಕಾರ ನಾಲ್ಕು ಗಂಟೆ ಕೊಟ್ಟರೆ ಹೆಚ್ಚು ಎನ್ನುತ್ತಾರೆ. ಕೆಲವೊಮ್ಮೆ ಸಂಜೆ ಹೊತ್ತು ಕೊಡುತ್ತಾರೆ. ಬಿಟ್ಟು ಬಿಟ್ಟು ವಿದ್ಯುತ್‌ಸರಬರಾಜು ಮಾಡುವುದರಿಂದ ವಿದ್ಯುತ್‌ ಗಾಗಿ ಕಾದು ಕೂಡುವುದೇ ಕಾಯಕವಾಗಿದೆ ಎಂದು ದೂರುತ್ತಾರೆ.

ನಿರಂತರ ಜ್ಯೋತಿ ಇಲ್ಲ: ಇನ್ನು ಸರ್ಕಾರ ಬಡವರಿಗಾಗಿ ಹಳ್ಳಿಗಳಲ್ಲಿ ನಿರಂತರ ಜ್ಯೋತಿ ಯೋಜನೆ ಜಾರಿ ಮಾಡಿದೆ. ಆದರೆ, ಅನಿಯಮಿತ ವಿದ್ಯುತ್‌ ಸರಬರಾಜು ಹೆಚ್ಚಾಗುತ್ತಿದೆ. ಮಳೆ ಗಾಳಿ ಇಲ್ಲದಿದ್ದಾಗಲೂ ವಿದ್ಯುತ್‌ ಕಡಿತಗೊಳ್ಳುತ್ತದೆ. ಈಚೆಗೆ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಸುರಿದಪರಿಣಾಮ ಸೊಳ್ಳೆ ಕಾಟ ಹೆಚ್ಚಾಗಿದೆ. ರಾತ್ರಿ ವಿದ್ಯುತ್‌ ಕಡಿತಗೊಳಿಸುವುದರಿಂದ ನಿದ್ರೆ ಮಾಡುವುದು ಕಷ್ಟವಾಗುತ್ತಿದೆ ಎಂದು ದೂರುತ್ತಾರೆ ಹಳ್ಳಿ ಜನ.

ವಿದ್ಯುತ್‌ ವಿಚಾರದಲ್ಲಿ ರೈತರು ಬೇಸತ್ತು ಹೋಗಿದ್ದಾರೆ. ಬೆಳೆಗೆ ನೀರು ಕಟ್ಟುವ ವೇಳೆಯೇ ವಿದ್ಯುತ್‌ ಇರುವುದಿಲ್ಲ. ಯಾವಾಗ ಬರುತ್ತದೋ ಯಾವಾಗ ಹೋಗುತ್ತದೋ ತಿಳಿಯದಾಗಿದೆ. ಕರೆ ಮಾಡಿ ಕೇಳಿದಾಗ ತಕ್ಷಣಕ್ಕೆ ವಿದ್ಯುತ್‌ ಸರಬರಾಜು ಮಾಡುತ್ತಾರೆ. ಮತ್ತೆ ವಿನಾಕಾರಣ ಕಡಿತಗೊಳಿಸುತ್ತಾರೆ. ಭತ್ತಕ್ಕೆ ನೀರು ಕಟ್ಟಲಾಗದೆ ಒಣಗಿ ಹೋಗುತ್ತಿದೆ. ಇನ್ನು  ತರಕಾರಿಗೆ ವಾರಕ್ಕೆ ಮೂರು ಬಾರಿ ನೀರು ಕಟ್ಟಲೇಬೇಕು. ಇಲ್ಲವಾದರೆ ಬೆಳೆ ಹಾಳಾಗುತ್ತದೆ. ಈ ಬಗ್ಗೆ ಮೇಲ ಧಿಕಾರಿಗಳ ಗಮನಕ್ಕೆ ತಂದಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು. – ಲಕ್ಷ್ಮಣಗೌಡ ಕಡಗಂದೊಡ್ಡಿ, ರೈತ ಮುಖಂಡ

ರಾಯಚೂರು ತಾಲೂಕಿನ ಯಾಪಲದಿನ್ನಿ ಭಾಗದಲ್ಲಿ ತಾಂತ್ರಿಕ ಸಮಸ್ಯೆ ಇತ್ತು. ಹೀಗಾಗಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಈಗ ಸರಿ ಮಾಡಲಾಗಿದೆ. ನಿತ್ಯ 7 ಗಂಟೆ ತ್ರಿ ಪೇಸ್‌ ವಿದ್ಯುತ್‌ ನೀಡುವುದರಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ.ಮಧ್ಯಂತರದಲ್ಲಿ ಎಷ್ಟು ಹೊತ್ತು ಕಡಿತ ಮಾಡಲಾಗುತ್ತದೆಯೋ ಅಷ್ಟು ಹೊತ್ತು ಬಳಿಕ ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆ ಇದ್ದಲ್ಲಿ ಮಾತ್ರ ವಿದ್ಯುತ್‌ ವ್ಯತ್ಯಯವಾಗುತ್ತಿದೆ.ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಗಮನಕ್ಕೆ ತಂದಲ್ಲಿ ತಕ್ಷಣಕ್ಕೆ ಕ್ರಮ ಕೈಗೊಳ್ಳಲಾಗುವುದು. – ಹನುಮೇಶ, ಜೆಸ್ಕಾಂ ಎಇಇ, ರಾಯಚೂರು ಗ್ರಾಮೀಣ ವಿಭಾಗ

Ad

ಟಾಪ್ ನ್ಯೂಸ್

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-raichur

Raichur: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ 3 ಯುವಕರು ಶವವಾಗಿ ಪತ್ತೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸುಭದ್ರ, ಬಿಜೆಪಿ ತಂತ್ರ ಸಕ್ಸಸ್ ಆಗಲ್ಲ: ಸಚಿವ ರಹೀಂ ಖಾನ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಸುಭದ್ರ, ಬಿಜೆಪಿ ತಂತ್ರ ಸಕ್ಸಸ್ ಆಗಲ್ಲ: ಸಚಿವ ರಹೀಂ ಖಾನ್

Raichur: ಡಿ.ರಾಂಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Raichur: ಡಿ.ರಾಂಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

15

Raichur: ‘ಶ್ವಾನ ಪಡೆ’ ದಾಳಿಗೆ ರಾಯಚೂರು ಜಿಲ್ಲಾಡಳಿತ ತತ್ತರ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.