ಸಿಬ್ಬಂದಿ ಕೊರತೆ; ಸೊರಗುತ್ತಿವೆ ಗ್ರಂಥಾಲಯಗಳು


Team Udayavani, Jan 16, 2018, 3:53 PM IST

ray-5.jpg

ರಾಯಚೂರು: ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಗ್ರಂಥಾಲಯಗಳ ಸಬಲೀಕರಣಕ್ಕೆ ಹೆಚ್ಚು ಒತ್ತು
ನೀಡುತ್ತಿದ್ದರೆ, ಜಿಲ್ಲೆಯಲ್ಲಿ ಮಾತ್ರ ಗ್ರಂಥಾಲಯಗಳಿಗೆ ಸಿಬ್ಬಂದಿ ಕೊರತೆ ಬಾಧಿಸುತ್ತಿದೆ.

ಜಿಲ್ಲೆಯಲ್ಲಿ ಒಟ್ಟು 60 ಕಾಯಂ ಹುದ್ದೆಗಳಿದ್ದು, ಅದರಲ್ಲಿ 40 ಹುದ್ದೆಗಳು ಖಾಲಿ ಇವೆ. ಇರುವ 20 ಸಿಬ್ಬಂದಿಯಲ್ಲೂ ಮೂವರು ಸಿಬ್ಬಂದಿ ಬೇರೆಡೆಗೆ ತಾತ್ಕಾಲಿಕ ವರ್ಗಾವಣೆ ಪಡೆದಿದ್ದಾರೆ. ಇದರಿಂದ ಇರುವ ಸಿಬ್ಬಂದಿಯಿಂದಲೇ ಗ್ರಂಥಾಲಯಗಳ ನಿರ್ವಹಣೆ ಮಾಡುವ ಅನಿವಾರ್ಯತೆ ಎದುರಾಗಿದೆ.

ಜಿಲ್ಲೆಯಲ್ಲಿ 164 ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಾಲಯಗಳಿವೆ. 2016-17, 17-18ನೇ ಸಾಲಿನಲ್ಲಿ 16 ಗ್ರಂಥಾಲಯಗಳು ಮಂಜೂರಾಗಿವೆ. ನಗರ ಕೇಂದ್ರ ಗ್ರಂಥಾಲಯ ಸೇರಿ ಜಿಲ್ಲೆಯಲ್ಲಿ ಐದು ಶಾಖಾ ಗ್ರಂಥಾಲಯಗಳಿವೆ. ಸದ್ಯಕ್ಕೆ 87 ಗ್ರಂಥಾಲಯಗಳಿಗೆ ಸ್ವಂತ ಕಟ್ಟಡವಿದ್ದು, ಉಳಿದವುಗಳನ್ನು ಬಾಡಿಗೆ ಕಟ್ಟಡ, ಸಮುದಾಯ ಭವನಗಳಲ್ಲಿ ನಡೆಸಲಾಗುತ್ತಿದೆ. ಲಿಂಗಸುಗೂರಿನಲ್ಲಿ ಶಾಸಕರ ಅನುದಾನದಲ್ಲಿ ಎರಡು, ಪೋತ್ನಾಳದಲ್ಲಿ ಒಂದು ಕಟ್ಟಡ ಮಂಜೂರಾಗಿದೆ. 19 ಕಾಮಗಾರಿಗಳು ಈಗಾಗಲೇ ಚಾಲ್ತಿಯಲ್ಲಿವೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಂಥಪಾಲಕರನ್ನು ನೇಮಿಸಿದ್ದು, ಅವರಿಂದಲೇ ಗ್ರಂಥಾಲಯಗಳನ್ನು ನಿಭಾಯಿಸಲಾಗುತ್ತಿದೆ. ಆದರೆ, ನಗರ ಮತ್ತು ಶಾಖಾ ಗ್ರಂಥಾಲಯಗಳಲ್ಲೇ ಕಾಯಂ ಸಿಬ್ಬಂದಿ ಸಿಗದೆ ಗುತ್ತಿಗೆ ಆಧಾರದಡಿ ಕಾರ್ಯ ನಿರ್ವಹಿಸುವಂಥ ಅನಿವಾರ್ಯತೆ ಎದುರಾಗಿದೆ.

ಸಂಗ್ರಹವಾಗದ ಕರ: ಇನ್ನು ಗ್ರಾಮ ಪಂಚಾಯತಿಗಳಿಂದ ಶೇ.6ರಷ್ಟು ಗ್ರಂಥಾಲಯ ಕರ ಸಂಗ್ರಹಿಸಬೇಕು. ಸಂಗ್ರಹವಾದ ಒಟ್ಟು ಕರದಲ್ಲಿ ಶೇ.10ರಷ್ಟು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಬಳಸಿ, ಉಳಿದ ಹಣವನ್ನು ಗ್ರಂಥಾಲಯಕ್ಕೆ ಪಾವತಿಸಬೇಕು. ಜಿಲ್ಲೆಯಲ್ಲಿ 180ಕ್ಕೂ ಅಧಿಕ ಗ್ರಾಮ ಪಂಚಾಯತಿಗಳಿದ್ದು, 164ಗ್ರಾಪಂಗಳಲ್ಲಿ ಗ್ರಂಥಾಲಯಗಳಿವೆ. ಗ್ರಾಮ ಪಂಚಾಯತಿಗಳಲ್ಲಿ ಗ್ರಂಥಪಾಲಕರಿಗೆ ಸರ್ಕಾರವೇ ವೇತನ ಪಾವತಿಸುತ್ತಿದೆ. ಆದರೆ, ಪ್ರತಿಕೆಗಳು, ಪುಸ್ತಕಗಳನ್ನು ಪೂರೈಸಲು ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹವಾದ ಕರದ ಹಣವನ್ನೇ ಬಳಸಬೇಕು. ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಿಂದ ಒಟ್ಟಾರೆ ವರ್ಷಕ್ಕೆ ಒಂದು ಕೋಟಿಗೂ ಅಧಿಕ ಕರ ಸಂಗ್ರಹಿಸಬೇಕು. ಆದರೆ, ಕಳೆದ ವರ್ಷ ಕೇವಲ 30 ಲಕ್ಷ ರೂ. ಮಾತ್ರ ಸಂಗ್ರಹವಾಗಿದೆ. ಇದರಿಂದ ಗ್ರಂಥಾಲಯಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿ ಮಾರ್ಪಟ್ಟಿದೆ.

ಓದುಗರ ಸಂಖ್ಯೆ ಹೆಚ್ಚಳ: ಹೈದರಾಬಾದ್‌ ಕರ್ನಾಟಕ ಭಾಗಕ್ಕೆ 371 ಜೆ ತಿದ್ದುಪಡಿ ಮಾಡುವ ಮೂಲಕ ವಿಶೇಷ ಸ್ಥಾನಮಾನ ಕಲ್ಪಿಸಿದ ನಂತರ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಇದರಿಂದ ಯುವಕರು ಹೆಚ್ಚಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಾಕಷ್ಟು ಸಿದ್ಧತೆ ಮಾಡುತ್ತಿದ್ದಾರೆ. ಪರಿಣಾಮ ಗ್ರಂಥಾಲಯಗಳಿಗೆ ಬರುವ ಓದುಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಒಟ್ಟಾರೆ ಈ ಭಾಗದ ಗ್ರಂಥಾಲಯಗಳ ಪ್ರಗತಿಗೆ ಹೈದರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಾಕಷ್ಟು ಒತ್ತು ನೀಡುತ್ತಿದೆ. ಆದರೆ, ಸರ್ಕಾರ ಅಗತ್ಯಕ್ಕೆ ತಕ್ಕ ಸಿಬ್ಬಂದಿಯನ್ನು ನಿಯೋಜಿಸದೆ ಗ್ರಂಥಾಲಯಗಳನ್ನು ಸೊರಗುವಂತೆ ಮಾಡಿರುವುದು ವಿಪರ್ಯಾಸ. ಸಾಕಷ್ಟು ಉದ್ಯೋಗಾಕಾಂಕ್ಷಿಗಳು ಕೆಲಸಕ್ಕಾಗಿ ಹಾತೊರೆಯುತ್ತಿದ್ದು, ಸರ್ಕಾರ ಶೀಘ್ರದಲ್ಲೇ ಖಾಲಿ ಹುದ್ದೆಗಳ ಭರ್ತಿ ಮಾಡಲಿ ಎಂಬ ಒತ್ತಾಯ ಕೇಳಿ ಬರುತ್ತಿದೆ

ರಾಯಚೂರು ನಗರದ ಕೇಂದ್ರ ಗ್ರಂಥಾಲಯ ಸೇರಿ ಐದು ಶಾಖಾ ಗ್ರಂಥಾಲಯಗಳಿವೆ. ಆದರೆ, ಸಾಕಷ್ಟು ಸಿಬ್ಬಂದಿ ಕೊರತೆ ಇದೆ. ಇದರಿಂದ ಗ್ರಂಥಾಲಯಗಳ ನಿರ್ವಹಣೆ ಸಮಸ್ಯೆ ಹೆಚ್ಚಾಗುತ್ತಿದೆ. ಸ್ಥಳೀಯ ಸಂಸ್ಥೆಗಳಿಂದ ಗ್ರಂಥಾಲಯ ಕರ ಸರಿಯಾಗಿ ಪಾವತಿಯಾಗುತ್ತಿಲ್ಲ. ಹೀಗಾಗಿ ಗುತ್ತಿಗೆ ನೌಕರರನ್ನು ನಿಯೋಜಿಸಿಕೊಳ್ಳಲು ಅನುದಾನ ಸಮಸ್ಯೆ
ಎದುರಾಗಿದೆ. 
 ಎಂ.ಎಸ್‌.ರೆಬಿನಾಳ, ಜಿಲ್ಲಾ ಗ್ರಂಥಾಲಯಾಧಿಕಾರಿ

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.