ವೈಟಿಪಿಎಸ್ಗೆ ಭೂಮಿ ಕೊಟ್ಟು ಕಂಗೆಟ್ಟ ರೈತರು
Team Udayavani, Mar 12, 2021, 9:25 AM IST
ಸರಕಾರಿ ನೌಕರಿ ಸಿಗುವುದೆಂಬ ಆಸೆಗೆ ಫಲವತ್ತಾದ ಭೂಮಿ ನೀಡಿದ ರಾಯಚೂರು ಜಿಲ್ಲೆಯ ರೈತರು ಈಗ ಭೂಮಿಯೂ ಇಲ್ಲದೇ ಅತ್ತ ನೌಕರಿ ಯೂ ಸಿಗದೆ ತ್ರಿಶಂಕು ಸ್ಥಿತಿಗೆ ಸಿಲುಕಿದ್ದಾರೆ.
ಸಮೀಪದ ಯರಮರಸ್ ಸೂಪರ್ ಕ್ರಿಟಿಕಲ್ ಪವರ್ ಸ್ಟೇಶನ್ (ವೈಟಿಪಿಎಸ್) ಎಂಬ ದೈತ್ಯಾಕಾರದ ವಿದ್ಯುತ್ ಉತ್ಪಾದನ ಘಟಕ ಸ್ಥಾಪಿಸಿದ ಸರಕಾರ; ಕೊಟ್ಟ ಮಾತಿ ನಂತೆ ನಡೆದುಕೊಳ್ಳದೆ ರೈತ ಕುಟುಂಬಗ ಳನ್ನು ಸಂಕಷ್ಟಕ್ಕೆ ದೂಡಿದೆ. ಆರಂಭದಲ್ಲಿ ಭೂಮಿಗೆ ಪರಿಹಾರದ ಜತೆಗೆ ಪ್ರತೀ ಕುಟುಂ ಬಕ್ಕೆ ಒಂದು ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಸುತ್ತಲಿನ ಗ್ರಾಮಗಳಲ್ಲಿ 2 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಆಸೆ ಯಿಂದ ಪರಿಸರವಾದಿಗಳ ವಿರೋಧದ ನಡುವೆಯೂ ರೈತರು ಭೂಮಿ ನೀಡಿದ್ದರು. ಏಗನೂರು, ವಡೂÉರು, ಹೆಗ್ಗಸನಹಳ್ಳಿ, ಚಿಕ್ಕಸ ಗೂಗುರು, ಕುಕುನೂರು ಗ್ರಾಮದ ರೈತ ರಿಂದ ಸುಮಾರು 1,100ಕ್ಕೂ ಅಧಿ ಕ ಎಕ್ರೆ ಭೂಮಿ ಸ್ವಾಧಿಧೀನಪಡಿಸಿಕೊಳ್ಳಲಾಯಿತು.
ಭೂಮಿ ಪಡೆದ ಕೆಪಿಸಿಎಲ್ ಪರಿಹಾರದ ಚೆಕ್ ಮತ್ತು ಭೂ ಸಂತ್ರಸ್ತ ಪ್ರಮಾಣ ಪತ್ರ ನೀಡುವಾಗ ಉದ್ಯೋಗ ನೀಡುವುದಾಗಿ ತಿಳಿಸಿತ್ತು. 259ಕ್ಕೂ ಅ ಧಿಕ ಕುಟುಂಬಗಳು ಭೂಮಿ ಕಳೆದುಕೊಂಡಿವೆ. ಅದರ ಜತೆಗೆ ಜಿಲ್ಲಾಡಳಿತ 525 ಸಂತ್ರಸ್ತರನ್ನು ಗುರುತಿಸಿತ್ತು. ಅದರಲ್ಲಿ ಈವರೆಗೆ 110ರ ಆಸುಪಾಸು ಜನ ರಿಗೆ ಉದ್ಯೋಗ ನೀಡಿದ್ದು, ಉಳಿದವರಿಗೆ ಉದ್ಯೋಗ ನೀಡಲು ಕುಂಟು ನೆಪ ಹೇಳಲಾಗುತ್ತಿದೆ. 2013ರಲ್ಲಿ ಭೂ ಸಂತ್ರಸ್ತರ ಪಟ್ಟಿ ಗೆಜೆಟ್ ಅ ಧಿಸೂಚನೆ ಹೊರಡಿಸಲಾ ಗಿತ್ತು. ಸಂತ್ರಸ್ತರಿಗೆ ಉದ್ಯೋಗ ನೀಡುವ ಭರ ವಸೆ ನೀಡಲಾಗಿತ್ತು. ಒಂದು ಪಹಣಿಗೆ ಒಂದೇ ಉದ್ಯೋಗ ನೀಡಲಾಗುವುದು ಎಂಬ ಭರ ವಸೆ ನೀಡಲಾಯಿತು. ಇದು ಕುಟುಂಬದಲ್ಲೇ ಕಲಹ ಸೃಷ್ಟಿಸಿತು. ರೈತರಿಂದ ಭೂಮಿ ಪಡೆಯುವಾಗ ಇಲ್ಲಸಲ್ಲದ ಭರ ವಸೆ ನೀಡಿದ್ದ ಕೆಪಿಸಿಎಲ್ ಈಗ ತನ್ನ ನಿಲುವು ಬದಲಿಸಿದೆ. ಸಂಬಂಧವಿಲ್ಲದ ಷರತ್ತುಗಳನ್ನು ಒಡ್ಡುವ ಮೂಲಕ ಅರ್ಹ ಫಲಾನು ಭವಿಗಳನ್ನು ಉದ್ಯೋಗ ವಂಚಿತರನ್ನಾಗಿ ಮಾಡುತ್ತಿದೆ ಎಂದು ಆರೋಪಿಸಿ ಸಂತ್ರಸ್ತರು ಜಿಲ್ಲಾಡಳಿತಕ್ಕೆ ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಸಾಕಷ್ಟು ಜನ ಆಸ್ತಿ ಹಂಚಿಕೊಂಡರೂ ಪಹಣಿಯಲ್ಲಿ ಒಂದೇ ಹೆಸರಿದೆ. ಒಂದು ಪಹಣಿಗೆ ಒಂದೇ ಉದ್ಯೋಗ ಎಂಬ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ ಸಂತ್ರಸ್ತರು, ಆರ್ಟಿಐ ಅರ್ಜಿ ಸಲ್ಲಿಸಿ ಮಾಹಿತಿ ಪಡೆದು ಕೆಪಿಸಿಎಲ್ ನಿಯಮಾವಳಿ ಪರಿಶೀಲಿಸಿ ದ್ದಾರೆ. ಆ ರೀತಿ ಎಲ್ಲೂ ಉಲ್ಲೇಖವಾಗಿಲ್ಲ. ನಮಗೆ ಕೆಲಸ ನೀಡಬಾರದು ಎನ್ನುವ ಕಾರಣಕ್ಕೆ ನೆಪ ಹೇಳದೆ ಕೆಲಸ ನೀಡಿ ಎಂದು ಮತ್ತೆ ಮನವಿ ಸಲ್ಲಿಸಿದರು. ಅಲ್ಲದೇ ನಮ್ಮ ಲ್ಲಿರುವುದು ಕೇವಲ ಟೆಕ್ನಿಕಲ್ ಹುದ್ದೆಗಳು ಮಾತ್ರ. ಕನಿಷ್ಟ ಡಿಪ್ಲೊಮಾ ಮುಗಿಸಿದರೆ ಕೆಲಸ ನೀಡಲಾಗುವುದು ಎನ್ನುತ್ತಿದೆ. ಆದರೆ ಬಹುತೇಕ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಿದರೂ ನಾನ್ ಟೆಕ್ನಿಕಲ್ ಕೋರ್ಸ್ಗ ಳನ್ನೇ ಓದಿದ್ದಾರೆ. ಹಳೇ ಪಹಣಿಗಳು, ಆಧಾರ್ ಕಾರ್ಡ್, 2009-10ರಲ್ಲಿ ಪಾವತಿ ಸಿದ ವಿದ್ಯುತ್ ಬಿಲ್, ಗ್ಯಾಸ್ ಬಿಲ್ ಸೇರಿ ದಂತೆ ಅನೇಕ ದಾಖಲೆ ಕೇಳುತ್ತಿದ್ದಾರೆ. ಆಗಿನ ದಾಖಲೆ ಎಲ್ಲಿಂದ ತರಬೇಕು?
ಸಿದ್ಧಯ್ಯಸ್ವಾಮಿ ಕುಕುನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ