ಬಿಜೆಪಿ ವಿರೋಧಿ ಅಲೆ ತಗ್ಗಿಸಲು ನಾಯಕರ ಕಸರತು


Team Udayavani, Apr 4, 2021, 7:46 PM IST

ಜಹಗ್ದದಬ

ಮಸ್ಕಿ: ಎರಡು ದಿನಗಳ ಪ್ರವಾಸದ ಅನುಭವದಲ್ಲಿ ರೆಸ್ಪಾನ್ಸ್‌ಗಿಂತ ವಿರೋಧಿ ಅಲೆಯೇ ಹೆಚ್ಚಾಗಿದ್ದರಿಂದ ಹಳ್ಳಿ ಪ್ರಚಾರ ಕೈಬಿಟ್ಟ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರಣಿ ಸಭೆಗಳನ್ನು ನಡೆಸಿದ್ದಾರೆ!. ವಿಜಯೇಂದ್ರ ಮತ್ತು ಸಚಿವ ಬಿ.ಶ್ರೀರಾಮುಲು ಅವರಿಗೆ ಮಸ್ಕಿ ಉಪಚುನಾವಣೆಯ ಉಸ್ತುವಾರಿ ವಹಿಸಲಾಗಿದೆ.

ಈ ಇಬ್ಬರು ನಾಯಕರು ಕಳೆದ ಎರಡು ದಿನಗಳಿಂದ ಮಸ್ಕಿ ಕ್ಷೇತ್ರದ ಹಳ್ಳಿಗಳಲ್ಲಿ ನಿರಂತರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಕೆಲವೆಡೆ ಅದ್ದೂರಿ ಸ್ವಾಗತ ಸಿಕ್ಕರೆ, ಇನ್ನು ಹಲವು ಕಡೆಗಳಲ್ಲಿ ಅಪಸ್ವರದ ಧ್ವನಿಗಳು ಕೇಳಿ ಬರುತ್ತಿವೆ. ಬಿಜೆಪಿಯಲ್ಲಿನ ಆಂತರಿಕ ಸಮಸ್ಯೆ ಹಾಗೂ ಕ್ಷೇತ್ರದ ನೀರಾವರಿ ಬೇಡಿಕೆಗಳು ಪ್ರಚಾರ ಸಮಯದಲ್ಲಿ ಪ್ರಶ್ನೆಗಳಾಗಿ ಮುಖಂಡರನ್ನು ಕಾಡುತ್ತಿವೆ. ಹೀಗಾಗಿ ಇಂತಹ ಅಸಮಾಧಾನ, ವಿರೋಧದ ಧ್ವನಿ ಶಮನ ಮಾಡಲು ವಿಜಯೇಂದ್ರ ಆಂತರಿಕ ಸಭೆಯ ಮೊರೆ ಹೋಗಿದ್ದಾರೆ.

ಮಸ್ಕಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು ಸರ್ಕಸ್‌ ನಡೆಸಿದ್ದಾರೆ. ಮಠ-ಮಾನ್ಯ, ಬಹಿರಂಗ ಪ್ರಚಾರದಿಂದ ಜನರ ಮನ ಗೆಲ್ಲುವುದು ಕಷ್ಟ ಎನ್ನುವ ವಾಸ್ತವ ಅರಿತು ಈಗ ರಾಜಕೀಯವಾಗಿ ಹೊಸ ದಾಳ ಉರುಳಿಸಲು ಸಜ್ಜಾಗಿದ್ದಾರೆ.

 ರಾತ್ರಿ ಇಡೀ ಸಭೆ: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ನಾಮಪತ್ರ ಸಲ್ಲಿಕೆಗೂ ಮುನ್ನ ಮಾ.20ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಸಚಿವ ಶ್ರೀರಾಮುಲು ಹಾಗೂ ವಿಜಯೇಂದ್ರ ಪುನಃ ಏ.1ರಿಂದ ಪ್ರಚಾರ ಆರಂಭಿಸಿದ್ದರು.

ಪ್ರತಾಪಗೌಡ ಪಾಟೀಲ್‌ ಹಿಂಬಾಲಕರ ಮೇಲಿನ ಸಿಟ್ಟು- ಸೆಡವು, 5ಎ ಕಾಲುವೆ ಹೋರಾಟದ ಅಸ್ತ್ರ ಬಿಜೆಪಿ ಅಭ್ಯರ್ಥಿ ಗೆಲುವಿನ ಹಾದಿಗೆ ಮುಳ್ಳಾಗಿವೆ. ಈ ಅಸ್ತ್ರಗಳೇ ಪ್ರಚಾರಕ್ಕೆ ಬಂದ ಮುಖಂಡರಿಗೂ ಸವಾಲಾಗಿವೆ ಎನ್ನುವ ವಾಸ್ತವ ಈಗ ಬಿಜೆಪಿ ವರಿಷ್ಠರಿಗೆ ಅರ್ಥವಾಗಿದೆ. ಇದೇ ಕಾರಣಕ್ಕೆ ಶುಕ್ರವಾರ ಅರ್ಧಕ್ಕೆ ಪ್ರಚಾರ ಕೈಬಿಟ್ಟ ವಿಜಯೇಂದ್ರ ತಾವು ವಾಸ್ತವ್ಯ ಹೂಡಿರುವ ಮುದಗಲ್‌ ನ ನಿವಾಸದಲ್ಲಿ ರಾತ್ರಿ ಇಡೀ ಆಂತರಿಕ ಸಭೆ ನಡೆಸಿದರು. ಬಿಜೆಪಿಯ ಸ್ಥಳೀಯ ಮುಖಂಡರು, ಕೊಪ್ಪಳ, ರಾಯಚೂರು ಜಿಲ್ಲೆಯ ಹಾಲಿ-ಮಾಜಿ ಸಂಸದರು, ಶಾಸಕರನ್ನೊಳಗೊಂಡು ಸಭೆ ನಡೆಸಲಾಯಿತು.

ಎಲ್ಲರೂ ಒಟ್ಟುಗೂಡಿ ಪ್ರಚಾರ ನಡೆಸಿದರೆ ಕಷ್ಟ, ಪ್ರತ್ಯೇಕ ಗುಂಪುಗಳಾಗಿ ಕ್ಷೇತ್ರದಲ್ಲಿನ ಹೋಬಳಿವಾರು ಪ್ರವಾಸ ಮಾಡಿ ಜನರನ್ನು ಹಿಡಿದಿಡಬೇಕು ಎನ್ನುವ ಸಂದೇಶ ಸಭೆಯಲ್ಲಿ ನೀಡಲಾಯಿತು. ದುಡ್ಡಿಗಿಂತ ಜನರನ್ನು ಭಾವನಾತ್ಮಕವಾಗಿ ಗೆಲ್ಲಬೇಕು. ಇದಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನು ಬಿಜೆಪಿ ಮುಖಂಡರು ಮಾಡಿಕೊಳ್ಳಬೇಕು ಎನ್ನುವ ಅಂಶ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಶುಕ್ರವಾರ ಮಧ್ಯರಾತ್ರಿವರೆಗೆ ಮಾತ್ರವಲ್ಲದೇ ಶನಿವಾರವೂ ಬಹಿರಂಗ ಪ್ರಚಾರಕ್ಕೆ ಇಳಿಯದ ವಿಜಯೇಂದ್ರ ಮುದಗಲ್ಲನ ನಿವಾಸದಲ್ಲಿಯೇ ಸರಣಿ ಸಭೆ ನಡೆಸಿದರು. ಲಿಂಗಾಯತ, ಅಲ್ಪಸಂಖ್ಯಾತ, ಎಸ್ಟಿ-ಎಸ್ಸಿ, ಕುರುಬ, ಲಂಬಾಣಿ ಸೇರಿ ದೊಡ್ಡ ಮತ್ತು ಅಲ್ಪ ಜಾತಿಗಳ ಮುಖಂಡರ ಸಭೆ ನಡೆಸಿದರು. ಹೇಗಾದರೂ ಮಾಡಿ ಕ್ಷೇತ್ರದಲ್ಲಿ ಎದ್ದಿರುವ ಬಿಜೆಪಿ ವಿರೋಧಿ  ಅಲೆಯನ್ನು ತಗ್ಗಿಸುವ ಶತಾಯ-ಗತಾಯ ಪ್ರಯತ್ನವನ್ನು ವಿಜಯೇಂದ್ರ ನಡೆಸಿದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.