ಶಿಥಿಲ ಕಟ್ಟಡದಲ್ಲಿ 5 ತರಗತಿಗಳ ಪಾಠ


Team Udayavani, Oct 6, 2018, 1:08 PM IST

ray-2.jpg

ದೇವದುರ್ಗ: ತಾಲೂಕಿನ ಹೂನೂರು ಸರ್ಕಾರಿ ಶಾಲೆಯಲ್ಲಿ ಎರಡು ಕೋಣೆಗಳ ನಿರ್ಮಾಣಕ್ಕೆ 13 ಲಕ್ಷ ಅನುದಾನ ಮಂಜೂರಾಗಿದ್ದರೂ, ಗ್ರಾಮಸ್ಥರು ಜಾಗೆ ನೀಡದ್ದಕ್ಕೆ ಕಟ್ಟಡ ನಿರ್ಮಾಣ ನನೆಗುದಿಗೆ ಬಿದ್ದಿದೆ.

ಎಚ್‌ಕೆಡಿಆರ್‌ಪಿ ಯೋಜನೆಯಡಿ ಹೂನೂರು ಸರ್ಕಾರಿ ಶಾಲೆಯ ಎರಡು ಕೋಣೆ ನಿರ್ಮಾಣಕ್ಕೆ 13 ಲಕ್ಷ ರೂ. ಮಂಜೂರಾಗಿದೆ. ಆದರೆ ಗ್ರಾಮಸ್ಥರು ಶಾಲೆಗೆ ಜಾಗೆ ನೀಡಲು ಮುಂದಾಗುತ್ತಿಲ್ಲ. ಇತ್ತ ಗ್ರಾಮ ಪಂಚಾಯತಿ ಕೂಡ ಸರ್ಕಾರಿ ಜಾಗೆ ಒದಗಿಸುವಲ್ಲಿ ವಿಫಲವಾಗಿದೆ. ಕಟ್ಟಡ ನಿರ್ಮಾಣ ಗುತ್ತಿಗೆ ಪಡೆದ ಗುತ್ತಿಗೆದಾರರು ಶಾಲೆಗೆ ಜಾಗೆ ಒದಗಿಸುವಂತೆ ಗ್ರಾಮಸ್ಥರ ಮನವೊಲಿಸಲು ಮಾಡಿದ ಪ್ರಯತ್ನಿಸಿದ್ದರೂ ಯಾರೊಬ್ಬರು ಶಾಲೆಗೆ ಜಾಗೆ ನೀಡುತ್ತಿಲ್ಲ. ಇನ್ನು ಇತ್ತ ಅಧಿಕಾರಿಗಳು ಕೂಡ ಜಾಗೆ ಒದಗಿಸಲು ಆಸಕ್ತಿ ತೋರುತ್ತಿಲ್ಲ. ಕಚೇರಿಗೆ ಅಲೆದು ಅಲೆದು ಸಾಕಾಗಿದೆ ಎನ್ನುತ್ತಾರೆ ಗುತ್ತಿಗೆದಾರರು. ಹೀಗಾಗಿ ಕಟ್ಟಡ ನಿರ್ಮಾಣ ನನೆಗುದಿಗೆ ಬಿದ್ದಿದ್ದು, ಮಕ್ಕಳು ಶಿಥಿಲಗೊಂಡ ಹಳೆ ಕಟ್ಟಡದಲ್ಲೇ ಪಾಠ ಕೇಳುವಂತಾಗಿದೆ.

ಹೂನೂರು ಶಾಲೆ ಕಟ್ಟಡದ ಜೊತೆಗೆ ಗೋಪಳಾಪುರು ಶಾಲೆ ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದ ಮಹೇಶ ಪಾಟೀಲ ಈಗಾಗಲೇ ಗೋಪಳಾಪುರ ಶಾಲೆ ಕಟ್ಟಡ ಪೂರ್ಣಗೊಳಿಸಿದ್ದು, ಅಲ್ಪಸ್ವಲ್ಪ ಕೆಲಸ ಬಾಕಿ ಇದೆ ಎಂದು ತಿಳಿದು ಬಂದಿದೆ. ಹೂನೂರು ಗ್ರಾಮಸ್ಥರು ಜಾಗೆ ನೀಡಿದ್ದರೆ ಇಷ್ಟೊತ್ತಿಗೆ ಕೆಲಸ ಪೂರ್ಣಗೊಂಡು ಕಟ್ಟಡ ಉದ್ಘಾಟನೆ ಆಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತಿತ್ತು.

ಹಳೆ ಕಟ್ಟಡದಲ್ಲಿ ಪಾಠ: ಹೂನೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆ ಕಟ್ಟಡ ಈಗಾಗಲೇ ಶಿಥಿಲಗೊಂಡಿದ್ದು, ಬೀಳುವ ಹಂತಕ್ಕೆ ತಲುಪಿದೆ. ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 50ಕ್ಕೂ ಹೆಚ್ಚು ಮಕ್ಕಳಿದ್ದು, ಇಬ್ಬರು ಶಿಕ್ಷಕರಿದ್ದಾರೆ. ಒಂದೇ ಕೊಠಡಿ ಇದೆ. ಜಾಗೆ ಸಮಸ್ಯೆಯಿಂದಾಗಿ ಒಬ್ಬ ಶಿಕ್ಷಕರು ಮಕ್ಕಳಿಗೆ ಹೊರಗಡೆ ಪಾಠ
ಮಾಡುತ್ತಾರೆ.

ಇನ್ನಾದರೂ ಕ್ಷೇತ್ರದ ಶಾಸಕರು, ಅಧಿಕಾರಿಗಳು ಇತ್ತ ಗಮನಹರಿಸಿ ಹೂನೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಜಾಗೆ ಒದಗಿಸಲು ಮುಂದಾಗಬೇಕೆಂದು ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ ಜಾಲಹಳ್ಳಿ ಆಗ್ರಹಿಸಿದ್ದಾರೆ.

ಶಾಲಾ ಕಟ್ಟಡ ನಿರ್ಮಿಸಲು ಖಾಲಿ ನಿವೇಶನಕ್ಕಾಗಿ ನಾಲ್ಕು ತಿಂಗಳಿಂದ ಗ್ರಾಮಕ್ಕೆ, ಸಂಬಂಧಪಟ್ಟ ಅಧಿಕಾರಿಗಳ ಕಚೇರಿಗೆ ಅಲೆದು ಬೇಸತ್ತು ಹೋಗಿದ್ದೇನೆ. ತಿಂಗಳ ಒಳಗಾಗಿ ನಿವೇಶನ ಸೌಲಭ್ಯ ಕಲ್ಪಿಸದಿದ್ದಲಿ ಟೆಂಡರ್‌ ರದ್ದುಪಡಿಸಿಕೊಳ್ಳುವೆ.
 ಮಹೇಶ ಪಾಟೀಲ, ಗುತ್ತಿಗೆದಾರ.

ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದೇನೆ. ಗ್ರಾಮಸ್ಥರು ಆಸಕ್ತಿ ವಹಿಸಿ ನಿವೇಶನ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಆದಷ್ಟೂ ಬೇಗ ಕಾಮಗಾರಿ ಆರಂಭಿಸಲು ಒತ್ತು ನೀಡುತ್ತೇನೆ.
 ಶಿವನಗೌಡ ನಾಯಕ, ಶಾಸಕರು

„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.