ಅರ್ಹರಿಗೆ ಯೋಜನೆಗಳ ಲಾಭ ಸಿಗಲಿ


Team Udayavani, Apr 29, 2022, 5:10 PM IST

19benifits

ರಾಯಚೂರು: ರೈತರಿಗೆ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನ ಮಾಡುವ ಮೂಲಕ ಸರ್ಕಾರವು ರೈತರ ಅಭಿವೃದ್ಧಿಗಾಗಿ ರೂಪಿಸಿದ ಯೋಜನೆಗಳನ್ನು ಯಶಸ್ವಿಗೊಳಿಸಬೇಕು. ಅಧಿಕಾರಿಗಳು ಇನ್ನೂ ಹೆಚ್ಚಿನ ವೇಗದಲ್ಲಿ ಕೆಲಸ ಮಾಡುವ ಅಗತ್ಯವಿದೆ. ರಸಗೊಬ್ಬರ ಹಾಗೂ ಇನ್ನಿತರ ಸೌಲಭ್ಯಗಳನ್ನು ಸಕಾಲಕ್ಕೆ ಸಿಗುವಂತೆ ನೋಡಿಕೊಳ್ಳಿ ಎಂದರು.

ರಾಯಚೂರಿನ ನಗರಸಭೆಯು ಕರ ವಸೂಲಿಯಲ್ಲಿ ಶೇ.90ರಷ್ಟು ಗುರಿ ಸಾಧಿಸಿದ್ದು, ಶೇ.100ರಷ್ಟು ಗುರಿ ತಲುಪಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ನಿರ್ದೇಶನ ನೀಡಿದರು. ಜಿಲ್ಲೆಯ ವಾರ್ಡ್‌ಗಳಿಗೆ ಕಡ್ಡಾಯವಾಗಿ ನಿತ್ಯ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಇಇ ಮೇನಕಾ ಪಟೇಲ್‌ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ಶೇ.78ರಷ್ಟು ನೀರು ತುಂಬಿಸಲಾಗಿದೆ. ರಾಯಚೂರಿನಲ್ಲಿ 20, ಮಾನ್ವಿಯಲ್ಲಿ 76, ದೇವದುರ್ಗದಲ್ಲಿ 11, ಲಿಂಗಸುಗೂರು 3, ಸಿಂಧನೂರಿನಲ್ಲಿ 163 ಸೇರಿದಂತೆ ಒಟ್ಟು 273 ಕೆರೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಶಿವಣ್ಣ ಮಾತನಾಡಿ, ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಈಗಾಗಲೇ ಜಿಲ್ಲೆಯ 6 ಕಡೆ ಮೇವು ಬ್ಯಾಂಕ್‌ಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲ ತಾಲೂಕಿನ ಜಾನುವಾರುಗಳಿಗೆ ಕಾಲಕಾಲಕ್ಕೆ ಕಡ್ಡಾಯವಾಗಿ ಲಸಿಕೆ ನೀಡಬೇಕು. ಜಿಲ್ಲೆಯ ಪಶು ಆಸ್ಪತ್ರೆಗಳಿಗೆ ಸ್ವಂತ ಕಟ್ಟಡ ಹಾಗೂ ವೈದ್ಯರು ಕಡ್ಡಾಯವಾಗಿ ಇರಬೇಕು. ಈ ಕುರಿತು ಹೆಚ್ಚಿನ ಗಮನ ಹರಿಸಬೇಕು. ಆರು ತಿಂಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹಿಸಲು ಕಾರ್ಯದರ್ಶಿ ತಿಳಿಸಿದರು.

ಜಿಪಂ ಸಿಇಒ ನೂರ್‌ ಜಹಾರ್‌ ಖಾನಂ ಮಾತನಾಡಿ, ಸರ್ಕಾರಿ ಶಾಲೆಗಳ ಛಾವಣಿ ದುರಸ್ತಿ ಸೇರಿ ಸಣ್ಣ ಪುಟ್ಟ ಕೆಲಸಗಳಿಗೆ ಅನುದಾನ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಬೇರೆ ಯೋಜನೆಗಳ ಅನುದಾನ ಬಳಸಿ ದುರಸ್ತಿ ಮಾಡಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೊರಗುತ್ತಿಗೆ ಆಧಾರದಡಿ ನೇಮಿಸಿಕೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮನವಿ ಮಾಡಿದರು. ಎಡಿಸಿ ಡಾ| ಕೆ.ಆರ್‌. ದುರುಗೇಶ್‌, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್‌ ಶಿವಪೂರೆ, ಜಿಪಂ ಯೋಜನೆ ನಿರ್ದೇಶಕ ಮಡೋಳಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್‌., ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.