ಇನ್ನಾದರೂ ಅಚ್ಛೆ ದಿನ್ ಜಾರಿಗೆ ಮುಂದಾಗಲಿ: ಪೇಜಾವರ ಶ್ರೀ
Team Udayavani, Jun 4, 2018, 6:20 AM IST
ರಾಯಚೂರು: “ಇನ್ನಾದರೂ ಪ್ರಧಾನಿ ನರೇಂದ್ರ ಮೋದಿ ಅಚ್ಛೆ ದಿನ್ ಜಾರಿಗೆ ಮುಂದಾಗಲಿ’ ಎಂದು ಪೇಜಾವರ ಮಠದ ಪೀಠಾಧಿಪತಿ ಶ್ರೀವಿಶ್ವೇಶ ತೀರ್ಥರು ಸಲಹೆ ನೀಡಿದ್ದಾರೆ.
ಭಾನುವಾರ ಮಂತ್ರಾಲಯದಲ್ಲಿ ಹಮ್ಮಿಕೊಂಡಿದ್ದ ತಾತ್ಪರ್ಯ ಚಂದ್ರಿಕಾ ಮಂಗಳ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಪ್ರಧಾನಿ ಅವರ ಆಡಳಿತ ವೈಖರಿ ಬಗ್ಗೆ ಅಸಮಾಧಾನವಿಲ್ಲ, ಆದರೆ, ಮೋದಿಯವರು ಚುನಾವಣೆ ಪೂರ್ವದಲ್ಲಿ ಕಪ್ಪು ಹಣ ತರಲಾಗುವುದು ಹಾಗೂ ಗಂಗಾ ನದಿ ಶುದ್ಧೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಎರಡೂ ಕೆಲಸಗಳನ್ನು ಮಾಡಿಲ್ಲ. ಕೇಂದ್ರ ಸರ್ಕಾರಕ್ಕೆ ಇನ್ನೂ ಒಂದು ವರ್ಷ ಅವಧಿಯಿದ್ದು, ಈಗಲಾದರೂ ಭರವಸೆಗಳನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಿ. ಅಚ್ಛೆ ದಿನ್ ಆಯೇಗಾ ಎಂದು ಹೇಳಿದ್ದ ಅವರು ಅದನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಕಾರ್ಯ ಮಾಡಬೇಕು ಎಂದರು.
ಸಂಕೋಚ ಮನೋಭಾವನೆ ಇದೆ: ಜೂ.13ರಂದು ಉಡುಪಿ ಮಠದಲ್ಲಿ ಇಫ್ತಿಯಾರ್ ಕೂಟ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಯಾವುದೇ ಮಠಗಳ ವಿರೋಧವಿಲ್ಲ. ಆದರೆ, ಇಫ್ತಿಯಾರ್ ಕುರಿತು ಮುಸ್ಲಿಂ ಸಮುದಾಯದವರಲ್ಲಿ ಸಂಕೋಚ ಮನೋಭಾವನೆ ಇದೆ. ಈ ಕುರಿತು ಅವರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ