ಗ್ರಂಥಾಲಯಕ್ಕಿಲ ಕರ; ಅಭಿವೃದ್ಧಿಗೆ ಗರ


Team Udayavani, Oct 29, 2019, 1:55 PM IST

rc-tdy-1

ಲಿಂಗಸುಗೂರು: ಪಟ್ಟಣ ಹಾಗೂ ಗ್ರಾಮೀಣಭಾಗದ ಜನರಲ್ಲಿ ಅಕ್ಷರದ ಹಸಿವು ನೀಗಿಸುವ ಗ್ರಂಥಾಲಯಗಳಿಗೆ ಸ್ಥಳೀಯ ಸಂಸ್ಥೆಗಳು ಸೆಸ್‌ ನೀಡದ್ದರಿಂದ ಗ್ರಂಥಾಲಯಗಳು ಮೂಲ ಸೌಕರ್ಯ ಮತ್ತು ಅಭಿವೃದ್ಧಿಯಿಂದ ವಂಚಿತವಾಗಿವೆ.

ತಾಲೂಕಿನ 38 ಗ್ರಾಮ ಪಂಚಾಯಿತಿಗಳು, ಎರಡು ಪುರಸಭೆ, ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿರುವ ಗ್ರಂಥಾಲಯ ಗಳಿಗೆ ಸೆಸ್‌ ರೂಪದಲ್ಲಿ ಅಭಿವೃದ್ಧಿಗೆ ಹಣ ಪಾವತಿಸಬೇಕು. ಆದರೆ ಸ್ಥಳೀಯ ಸಂಸ್ಥೆಗಳು ಹಣ ನೀಡದೇ ತಮ್ಮ ಬೇಜವಾಬ್ದಾರಿ ಪ್ರರ್ದಶನ ಮಾಡುತ್ತಿರುವುದರಿಂದ ಗ್ರಂಥಾಲಯಗಳಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ.

ತಾಲೂಕಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಗ್ರಂಥಾಲಯ, ಲಿಂಗಸುಗೂರು, ಹಟ್ಟಿ ಮತ್ತು ಮುದಗಲ್‌ನಲ್ಲಿ ಗ್ರಂಥಾಲಯ ಗಳಿವೆ. ಇದಲ್ಲದೆ ಅಲೆಮಾರಿ ಗ್ರಂಥಾಲಯ ಗಳಿವೆ. ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರತಿ ಕುಟುಂಬ ಸ್ಥಳೀಯ ಸಂಸ್ಥೆಗೆ ಪಾವತಿಸುವ ತೆರಿಗೆಯಲ್ಲಿ ಶೇ.6ರಷ್ಟು ಗ್ರಂಥಾಲಯ ಕರ ಸಂಗ್ರಹ ಮಾಡಲಾಗುತ್ತಿದೆ. ಸಾರ್ವಜನಿಕರಿಂದ ಕಡ್ಡಾಯವಾಗಿ ಕರ ವಸೂಲಿ ಮಾಡುವ ಸ್ಥಳೀಯ ಸಂಸ್ಥೆಗಳು ಈ ಹಣವನ್ನು ಆಯಾ ಭಾಗದ ಗ್ರಂಥಾಲಯಗಳಿಗೆ ಪಾವತಿಸುವಲ್ಲಿ ನಿರ್ಲಕ್ಷ್ಯ ತಾಳಿವೆ. ಹೀಗಾಗಿ ಗ್ರಂಥಾಲಯಗಳು ನಿರ್ವಹಣೆಗೆ ಹಣವಿಲ್ಲದೇಪರದಾಡುವಂತಾಗಿದೆ.

ಸೆಸ್‌ ಬಾಕಿ: ಲಿಂಗಸುಗೂರು ಪುರಸಭೆ 10 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರೆ, ಮುದಗಲ್ಲ ಪುರಸಭೆ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿ ಲಕ್ಷಾಂತರ ರೂ.ಗಳ ಸೆಸ್‌ನ್ನು ಗ್ರಂಥಾಲಯಗಳಿಗೆ ಪಾವತಿಸಬೇಕಿದೆ. ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿರುವ ಗ್ರಂಥಾಲಯಗಳಿಗೆ ಪ್ರಾರಂಭದಿಂದ ಈವರೆಗೂ ಗ್ರಂಥಾಲಯಗಳಿಗೆ ಒಂದು ರೂ. ಕೂಡಾ ನೀಡಿಲ್ಲ ಇದು ಪಿಡಿಒಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮ ಪಂಚಾಯಿತಿಗಳು ಸುಮಾರು 1 ಕೋಟಿ ರೂ.ವರೆಗೆ ಗ್ರಂಥಾಲಯ ಸೆಸ್‌ ಪಾವತಿಸಬೇಕಿದೆ.ಆದರೆ ಇದನ್ನು ನೀಡಲು ಯಾವ ಗ್ರಾಮ ಪಂಚಾಯಿತಿಯವರೂ ಮನಸ್ಸು ಮಾಡುತ್ತಿಲ್ಲ ಎನ್ನಲಾಗಿದೆ.

ಅನ್ಯ ಕೆಲಸಕ್ಕೆ ಬಳಕೆ: ಸಾರ್ವಜನಿಕರಿಂದ ಶೇ. ಗ್ರಂಥಾಲಯ ಕರ ಸಂಗ್ರಹಿಸುವ ಸ್ಥಳೀಯ ಸಂಸ್ಥೆಗಳು ಇದನ್ನು ಗ್ರಂಥಾಲಯಗಳಿಗೆ ಹಸ್ತಾಂತರಿಸುತ್ತಿಲ್ಲ. ಈ ಕರವನ್ನು ಸ್ಥಳೀಯ ಸಂಸ್ಥೆಗಳು ಬೇರೆ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆ. ಗ್ರಂಥಾಲಯ ಕರವನ್ನು ಅನ್ಯ ಕೆಲಸಕ್ಕೆ ಬಳಸಬಾರದು ಎಂಬ ಸ್ಪಷ್ಟ ನಿಯಮವಿದ್ದರೂ, ಇದನ್ನು ಸ್ಥಳೀಯ ಸಂಸ್ಥೆಗಳು ಪಾಲಿಸುತ್ತಿಲ್ಲ. ಬೇರೆ ಕೆಲಸಗಳಿಗೆ ಬಳಕೆ ಮಾಡುತ್ತಿವೆ. ಹೀಗಾಗಿ ಗ್ರಾಮೀಣ ಗ್ರಂಥಾಲಯಗಳಲ್ಲಿ ಹೊಸ ಪುಸಕ್ತಗಳ ಖರೀದಿ ಇಲ್ಲದೇ ಗ್ರಾಮೀಣ ವಿದ್ಯಾರ್ಥಿಗಳು, ಓದುಗರು ಪರದಾಡುವಂತಾಗಿದೆ.

ಹೆಣಗಾಟ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ನೌಕರರ ವೇತನ ಹೊರತುಪಡಿಸಿ ಇನ್ನಾವುದೇ ಅನುದಾನ ಬರುತ್ತಿಲ್ಲ. ಇತ್ತ ಸ್ಥಳೀಯ ಸಂಸ್ಥೆಗಳು ಸೆಸ್‌ ನೀಡುತ್ತಿಲ್ಲ ಇದರಿಂದ ಸ್ಥಳೀಯ ಸಂಸ್ಥೆಗಳ ಹಣದ ಮೇಲೆ ಅವಲಂಬಿತವಾಗಿರುವ ಗ್ರಂಥಾಲಯಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಪೀಠೊಪಕರಣ, ಹೊಸ ಪುಸ್ತಕಗಳ ಕೊರತೆ,

ವಿದ್ಯುತ್‌ ಬಿಲ್‌, ದಿನಪತ್ರಿಕೆಗಳ ಬಿಲ್‌, ಕುಡಿಯುವ ನೀರು, ಪರಿಚಾರಕರ ವೇತನ ನೀಡುವುದಕ್ಕೆ ಹೆಣಗಾಡುವಂತಾಗಿದೆ. ಸೆಸ್‌ ನೀಡುವಂತೆ ಪುರಸಭೆ ಹಾಗೂ ಗ್ರಾಪಂ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಇನ್ನು ವೇತನ ನೀಡದೇ ಇರುವದರಿಂದ ಕೆಲವು ಗ್ರಂಥಾಲಯಗಳಲ್ಲಿ ದಿನಗೂಲಿ ಆಧಾರದ ಮೇಲೆ ನೇಮಕವಾಗಿದ್ದ ಪರಿಚಾರಕರು ಕೆಲಸ ಬಿಟ್ಟು ಹೋಗಿದ್ದಾರೆ. ಇದರಿಂದ ಗ್ರಂಥಪಾಲಕರೇ ಎಲ್ಲ ಕೆಲಸವನ್ನು ಮಾಡಬೇಕಾಗಿದೆ.

 

-ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.