ದಲಿತ ಯುವಕನ ಕೊಲೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
Team Udayavani, May 11, 2020, 3:42 PM IST
ಲಿಂಗಸುಗೂರು: ದಸಂಸ ಮುಖಂಡರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಲಿಂಗಸುಗೂರು: ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನಲ್ಲಿ ದಲಿತ ಯುವಕನ ಕೊಲೆ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶುಕ್ರವಾರ ಸಹಾಯಕ ಆಯುಕ್ತರಿಗೆ ಸಲ್ಲಿಸಿದರು. ಮೇ 6ರಂದು ಗೋಕಾಕ ಪಟ್ಟಣದ ಆದಿಜಾಂಬವ ನಗರದ ನಿವಾಸಿ ದಲಿತ ಯುವಕ ಸಿದ್ದುನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ದಲಿತ ಯುವಕನ ಕೊಲೆಗಾರರ ಪತ್ತೆ ಹಚ್ಚುವಲ್ಲಿ ಅಲ್ಲಿನ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ. ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಲಾಯಿತು. ದಸಂಸ ತಾಲೂಕು ಅಧ್ಯಕ್ಷ ಹನುಮಂತಪ್ಪ ಶೀಲಹಳ್ಳಿ, ಮುಖಂಡರಾದ ಬಸವರಾಜ ಕುಣಿಕೆಲ್ಲೂರು, ಗ್ಯಾನಪ್ಪ ಹಾದಿಮನಿ ಇದ್ದರು.