ಎಲ್ಲ ಸಮುದಾಯದ ಕಡು ಬಡವರಿಗೆ ಆಹಾರ ಕಿಟ್
Team Udayavani, May 11, 2020, 2:35 PM IST
ಲಿಂಗಸುಗೂರು: ಕ್ಷೇತ್ರದ ಎಲ್ಲ ಸಮುದಾಯದಲ್ಲಿನ ಕಡು ಬಡವರಿಗೆ ಆಹಾರ ಕಿಟ್ ವಿತರಿಸಲಾಗುವುದು ಎಂದು ಶಾಸಕ ಡಿ.ಎಸ್. ಹೂಲಗೇರಿ ಹೇಳಿದರು.
ಪಟ್ಟಣದ ಪುರಸಭೆ ಉದ್ಯಾನದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ, ಗ್ರಾನೈಟ್ ಉದ್ದಿಮೆದಾರರ, ಸಿವಿಲ್ ಗುತ್ತೆಗೆದಾರರ ಹಾಗೂ ತಮ್ಮ ವೈಯಕ್ತಿಕವಾಗಿ 500 ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ತಾಲೂಕಿನ ಮಡಿವಾಳ, ಸವಿತಾ, ಹಡಪದ, ಸಮಗಾರ, ಭೋವಿ ಸೇರಿದಂತೆ ಇತರ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ಆ ಸಮುದಾಯಗಳಲ್ಲಿನ ಕಡುಬಡವರಿಗೆ ಆಹಾರ ಕಿಟ್ ವಿತರಿಸಲಾಗುವುದು. ಗ್ರಾನೈಟ್ ಅಸೋಸಿಯನ್ ವತಿಯಿಂದ ಮುದಗಲ್ನಲ್ಲಿ ಇನ್ನೂ 300 ಆಹಾರ ಕಿಟ್ ವಿತರಿಸಲಾಗುತ್ತಿದೆ. ಕೋವಿಡ್ ವೈರಸ್ ತಡೆಗಟ್ಟಲು ತಾಲೂಕು ಆಡಳಿತ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮುಖಂಡರಾದ ಅಮರಗುಂಡಪ್ಪ ಮೇಟಿ, ಗುಂಡಪ್ಪ ನಾಯಕ, ಪಾಮಯ್ಯ ಮುರಾರಿ, ಮಲ್ಲಣ್ಣ ವಾರದ್, ಬಸವರಾಜಗೌಡ ಲೆಕ್ಕಿಹಾಳ, ಬಸವರಾಜಗೌಡ ಗಣೇಕಲ್, ವಾಹೀದ್ ಖಾದ್ರಿ ಮಹ್ಮದ್ ರಫಿ, ಪ್ರಮೋದ ಕುಲಕರ್ಣಿ, ಪರುಶುರಾಮ ನಗನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು