ಮಾಸ್ಕ್ ಧರಿಸಲು ಜನಜಾಗೃತಿ ಜಾಥಾ
Team Udayavani, Jun 20, 2020, 12:09 PM IST
ಲಿಂಗಸುಗೂರು: ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾಕ್ಕೆ ಎಸಿ ರಾಜಶೇಖರ ಡಂಬಳ ಚಾಲನೆ ನೀಡಿದರು
ಲಿಂಗಸುಗೂರು: ಜನರ ಆರೋಗ್ಯ ಮಾರಕವಾದ ಕೊವೀಡ್-19 ಸೋಂಕು ನಿಯಂತ್ರಣಕ್ಕೆ ಮಾಸ್ಕ್ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ, ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಕಂಡು ಬಂದರೆ ತಕ್ಷಣವೇ ವೈದ್ಯರನ್ನುಸಂಪರ್ಕಿಸಬೇಕು ಮತ್ತು ಕೋವಿಡ್ ಸೋಂಕಿತರ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಪಟ್ಟಣದ ಪುರಸಭೆ ಕಚೇರಿ ಬಳಿಯಿಂದ ಆರಂಭವಾದ ಜಾಥಾ ಗಡಿಯಾರ ಚೌಕ್, ಬಸ್ ನಿಲ್ದಾಣ ವೃತ್ತ ಹಾಗೂ ಮುಖ್ಯರಸ್ತೆಯಲ್ಲಿ ಸಂಚರಿತು. ಪುರಸಭೆ ಮುಖ್ಯಾಧಿಕಾರಿ ಕೆ.ಕೆ. ಮುತ್ತಪ್ಪ, ಸಿಪಿಐ ಯಶವಂತ ಬಿಸನಳ್ಳಿ, ಆರೋಗ್ಯಾಧಿಕಾರಿ ಡಾ| ರುದ್ರಗೌಡ, ಪಿಎಸ್ಐ ಪ್ರಕಾಶ ಡಂಬಳ, ಆರೋಗ್ಯ ಇಲಾಖೆ ರವಿ ಮುಂಡೆವಾಡಿ, ಪ್ರಾಣೇಶ ಕುಲಕರ್ಣಿ, ಪುರಸಭೆಯ ಶಿವಲಿಂಗ ಮೇಗಳಮನಿ, ರಾಜಶೇಖರ ಪಾಟೀಲ, ವೆಂಕಟೇಶ ಆರೋಗ್ಯ, ಪುರಸಭೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ