ಕುಡಿವ ನೀರಿನ ಸಮಸ್ಯೆ ನಿವಾರಣೆ: ಹೂಲಗೇರಿ
Team Udayavani, Jul 6, 2020, 3:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಿಂಗಸುಗೂರು: ರಾಂಪುರ ಏತ ನೀರಾವರಿ ಯೋಜನೆಯಿಂದ ಕುಡಿವ ನೀರಿನ ಕೆರೆಗೆ ನೀರು ಹರಿಸಲಾಗುತ್ತಿದೆ. ಇದರಿಂದ ಪಟ್ಟಣದಲ್ಲಿನ ನೀರಿನ ಸಮಸ್ಯೆ ನಿವಾರಣೆ ಆಗಿದೆ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ಸ್ಥಳೀಯ ಪುರಸಭೆ ವ್ಯಾಪ್ತಿ ಪ್ರದೇಶಗಳಿಗೆ ಕುಡಿವ ನೀರು ಪೂರೈಸುವ ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಲದಂಡೆ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿತ್ತು. ಹೀಗಾಗಿ ಕೆರೆಯಲ್ಲಿ ನೀರು ಸಂಗ್ರಹ ಕಡಿಮೆ ಆಗಿದ್ದರಿಂದ ಕುಡಿವ ನೀರಿನ ಸಮಸ್ಯೆ ಎದುರಾಗಿತ್ತು. ಈ ಕುರಿತು ನೀರಾವರಿ ಹಾಗೂ ಪುರಸಭೆ ಅಧಿಕಾರಿಗಳ ಜತೆ ಚರ್ಚಿಸಿ ರಾಂಪುರ ಏತ ನೀರಾವರಿ ಯೋಜನೆಯಿಂದ ಕುಡಿವ ನೀರಿನ ಕೆರೆ ತುಂಬಿಸಲು ತಿರ್ಮಾನಿಸಲಾಗಿದೆ. ನಂತರ ಪ್ರಾದೇಶಿಕ ಆಯುಕ್ತರು ಹಾಗೂ ಕೆಬಿಜೆಎನ್ಎಲ್ ಮುಖ್ಯ ಇಂಜಿನಿಯರ್ಗೆ ಸಮಸ್ಯೆ ಮನವರಿಕೆ ಮಾಡಿ ಜೂ.29ರಿಂದ ಕುಡಿವ ನೀರಿನ ಕೆರೆಗೆ ನೀರು ಹರಿಸಲಾಗುತ್ತಿದೆ. ಇನ್ನೂ ಒಂದೂವರೆ ತಿಂಗಳವರೆಗೆ ಪಟ್ಟಣದ ಜನತೆಗೆ ಎಂದಿನಂತೆ ನೀರು ಸರಬರಾಜು ಮಾಡಲಾಗುವುದು. ಅಗಸ್ಟ್ ತಿಂಗಳಲ್ಲಿ ಐಸಿಸಿ ಸಭೆ ನಂತರ ನಾಲೆಗೆ ನೀರು ಹರಿಸುವುದರಿಂದ ನೀರಿನ ಸಮಸ್ಯೆಯಾಗದು ಎಂದರು.
ಪಟ್ಟಣಕ್ಕೆ 24/7 ಕುಡಿವ ನೀರು ಯೋಜನೆ ಹಾಗೂ ಒಳಚರಂಡಿ ಯೋಜನೆ ಜಾರಿಗೊಳಿಸುವ ಬಗ್ಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅನುಮೋದನೆ ದೊರೆತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆ ರದ್ದು ಮಾಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಆದರೂ ಯಾವುದಕ್ಕೂ ಹಿಂಜರಿಯುವ ಪ್ರಶ್ನೆಯೇ ಇಲ್ಲ, ಹೋರಾಟ ಮಾಡಿಯಾದರೂ ಯೋಜನೆ ತರುವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮುಖಂಡರಾದ ಪಾಮಯ್ಯ ಮುರಾರಿ, ಸೋಮಶೇಖರ ಐದನಾಳ, ಪುರಸಭೆ ಸದಸ್ಯರಾದ ಮಹ್ಮದ್ ರಫಿ, ಪ್ರಮೋದ ಕುಲಕರ್ಣಿ, ಮೌಲಾಸಾಬ್, ಕುಪ್ಪಣ್ಣ ಕೊಡ್ಲಿ, ಪರಶುರಾಮ ನಗನೂರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?