ಕ್ವಾರಂಟೈನ್ಗಳಿಗೆ ಹೂಲಗೇರಿ ಭೇಟಿ
Team Udayavani, May 17, 2020, 1:38 PM IST
ಸಾಂದರ್ಭಿಕ ಚಿತ್ರ
ಲಿಂಗಸುಗೂರು: ತಾಲೂಕಿನ ನಾನಾ ಕ್ವಾರಂಟೈನ್ ಕೇಂದ್ರಗಳಿಗೆ ಶಾಸಕ ಡಿ.ಎಸ್ ಹೂಲಗೇರಿ ಶನಿವಾರ ಭೇಟಿ ನೀಡಿ ಕೇಂದ್ರಗಳಲ್ಲಿನ ಅವ್ಯವಸ್ಥೆ ಸರಿಪಡಿಸಿ ಸಮರ್ಪಕ ಸೌಲಭ್ಯ ಒದಗಿಸಲು ತಾಕೀತು ಮಾಡಿದರು.
ಬೆಂಗಳೂರು, ಪುಣೆ, ಬೆಳಗಾವಿ, ಗೋವಾ ಸೇರಿದಂತೆ ಕೂಲಿ ಕೆಲಸಕ್ಕೆ ತೆರಳಿದ ಕಾರ್ಮಿಕರು ವಾಪಸ್ ಬಂದಿದ್ದು ಕೋವಿಡ್ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯರಡೋಣಾ ಪ್ರೌಢಶಾಲೆ, ಈಚನಾಳ, ಕರಡಕಲ್ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ, ಕ್ವಾರಂಟೈನ್ನಲ್ಲಿನ ವ್ಯವಸ್ಥೆಗಳ ಕುರಿತು ಅಲ್ಲಿದ್ದವರಿಂದ ಮಾಹಿತಿ ಪಡೆದರು.
ಈ ವೇಳೆ ಸ್ಥಳದಲ್ಲಿದ್ ತಹಶೀಲ್ದಾರ್ ಚಾಮರಾಜ್ ಪಾಟೀಲ್, ಆರೋಗ್ಯಾಧಿಕಾರಿ ರುದ್ರಗೌಡ ಪಾಟೀಲ್, ಸಿಪಿಐ ಯಶವಂತ ಬಿಸನಳ್ಳಿ ಕ್ವಾರಂಟೈನ್ ಕೇಂದ್ರದಲ್ಲಿ ಇರುವವರಿಗೆ ಜನರಿಗೆ ಅವರು ಇರುವಷ್ಟು ದಿನಗಳ ಕಾಲ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು, ಅಲ್ಲದೇ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಹನುಮಂತಪ್ಪ ಕಂದಗಲ್, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ