ಅಂಗವಿಕಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ
Team Udayavani, May 15, 2020, 4:40 PM IST
ಲಿಂಗಸುಗೂರು: ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಮಿತಿ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಲಿಂಗಸುಗೂರು: ಲಾಕ್ಡೌನ್ ಸಮಯದಲ್ಲಿ ಅಂಗವಿಕಲರು ವಿವಿಧ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ವಿಕಲಚೇತನರ ಆರ್ಪಿಡಿ ಟಾಸ್ಕ್ಫೋರ್ಸ್ ಸಮಿತಿ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಅಂಗವಿಕಲರಿಗೆ ಎರಡು ತಿಂಗಳು ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಆದರೆ ಈವರಿಗೂ ಎರಡು ತಿಂಗಳ ಮಾಸಾಶನ ಬಿಡುಗಡೆ ಮಾಡಿಲ್ಲ. ಇದರಿಂದ ಅಂಗವಿಕಲರಿಗೆ ಔಷಧ ಹಾಗೂ ದಿನ ಬಳಕೆ ಖರೀದಿಗಾಗಿ ತೊಂದರೆಯಾಗಿದೆ. ತಾಲೂಕು ಆಡಳಿತದಿಂದ ಆಹಾರ ಕಿಟ್ ವಿತರಣೆ ಸಂದರ್ಭದಲ್ಲಿ ಅಂಗವಿಕಲರನ್ನು ಪರಿಗಣಿಸಿಲ್ಲ. ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಆದ್ದರಿಂದ ಅಂಗವಿಕಲರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಹಾಗೂ 5 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಸಿಎಂಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.
ಸಮಿತಿ ತಾಲೂಕು ಅಧ್ಯಕ್ಷ ನಿಂಗನಗೌಡ ಮಾಚಕನೂರು, ಸುರೇಶ ಭಂಡಾರಿ, ಬಾಲಪ್ಪ ಕಡದಾಳ, ವೀರಭದ್ರಪ್ಪ ಗೆಜ್ಜಲಗಟ್ಟಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ