ಅಧ್ಯಾತ್ಮ ಒಂದು ಜಾತಿ-ಧರ್ಮಕ್ಕೆ ಸೀಮಿತವಲ್ಲ : ರಂಭಾಪುರಿ ಸ್ವಾಮೀಜಿ


Team Udayavani, Feb 1, 2020, 4:46 PM IST

Feburary-24

ಲಿಂಗಸುಗೂರು: ಆಧ್ಯಾತ್ಮ ಎಂಬುದು ಒಂದು ಜಾತಿ ಮತ್ತು ಧರ್ಮಕ್ಕೆ ಸೀಮಿತವಲ್ಲ. ಅದು ಇಡೀ ಮಾನವ ಕುಲಕ್ಕೆ ಸೀಮಿತವಾಗಿದೆ ಎಂದು ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ತಾಲೂಕಿನ ಯರಡೋಣಾ ಗ್ರಾಮದ ಸಿದ್ಧರಾಮೇಶ್ವರ ಗುರುಮಠದಲ್ಲಿ ಶುಕ್ರವಾರ ನೂತನ ದೇವಾಲಯ ಲೋಕಾರ್ಪಣೆ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು. ಆಧ್ಯಾತ್ಮ ಎಂಬುದು ಕೆಲವರು ಒಂದೇ ಧರ್ಮಕ್ಕೆ ಸೀಮಿತ ಎಂಬ ಭಾವನೆಯಲ್ಲಿದ್ದಾರೆ. ಪ್ರತಿಯೊಬ್ಬರು ಉತ್ತಮ ಜೀವನ ನಡೆಸಲು ಆಧ್ಯಾತ್ಮ ಅಗತ್ಯವಾಗಿದೆ ಎಂದು ಹೇಳಿದರು. ಆರೋಗ್ಯವಂತ ಸಮಾಜದ ನಿರ್ಮಾಣ ಮಾಡಲು ಪ್ರತಿಯೊಬ್ಬರು ಶಿಕ್ಷಣ, ಆರೋಗ್ಯ, ಆಧ್ಯಾತ್ಮ ಮೂರು ಅಂಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಧರ್ಮ, ಜಾತಿ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿ ಕಲಹಗಳುನಡೆಯುತ್ತಿವೆ. ಇದನ್ನೆಲ್ಲ ಮೀರಿ ಮಾನವೀಯ ಮೌಲ್ಯಗಳ ನೆಲೆಗಟ್ಟಿನಲ್ಲಿ ನಾವೆಲ್ಲರೂ ನಡೆದರೆಉತ್ತಮ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ಗುರುಮಠದಲ್ಲಿ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆಯುವಂತ ಮಹತ್ವದ ಕೆಲಸ ನಡೆದಿದೆ. ಶ್ರೀಮಠದ ಮುರುಘೇಂದ್ರ ಶಿವಯೋಗಿಗಳು ಹೆಲಿಕಾಪ್ಟರ್‌ನಿಂದ ದೇವಾಲಯಗಳಿಗೆ ಪುಷ್ಟವೃಷ್ಠಿ ಮಾಡಿಸಿದ್ದು ದೊಡ್ಡ ಇತಿಹಾಸ ಹಾಗೂ ಈ ಭಾಗದಲ್ಲಿ ಮೊದಲಾಗಿದೆ ಎಂದು ಹೇಳಿದರು.

ಗುರು ಕೃಪೆಯಿದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ ಎನ್ನಲು ಶ್ರೀಮಠವೇ ಸಾಕ್ಷಿಯಾಗಿದೆ. ತಮ್ಮ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿ ಗುರುವಿನ ಮೇಲಿನ ವಿಶ್ವಾಸ ಗೌರವ ಎತ್ತಿ ತೋರಿಸಿದ್ದಾರೆ. ಮುಂದಿ ದಿನಗಳಲ್ಲಿ ಶ್ರೀಮಠ ಉತ್ತುಂಗ ಸ್ಥಿತಿಗೇರುತ್ತಿದೆ ಎಂದು ಹೇಳಿದರು.
ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಅಮರೇಶ್ವರ ಜಾತ್ರಮಹೋತ್ಸವದಲ್ಲಿ ಹೊನ್ನಳ್ಳಿ, ಯರಡೋಣಾ, ದೇವರಭೂಪುರ, ಗುರುಗುಂಟಾ, ಗುಂತಗೋಳ ಗ್ರಾಮಗಳು
ಪ್ರಮುಖ ಪಾತ್ರವಹಿಸುತ್ತಿವೆ. ಯರಡೋಣ ಮುರುಘೇಂದ್ರ ಶಿವಯೋಗಿಗಳು ಹಾಗೂ ಗಜದಂಡ ಶಿವಾಚಾರ್ಯರು ಈ ಭಾಗಕ್ಕೆ ರಡು ಕಣ್ಣು ಇದ್ದಂತೆ. ಧರ್ಮದ
ಕಾರ್ಯಕ್ರಮಗಳನ್ನು ಯಶಸ್ವಿಯಿಂದ ಮುನ್ನಡಿಸುತ್ತಿದ್ದಾರೆ. ದೇವಿ ಆರಾಧನೆ ಎಲ್ಲಿ ಇರುತ್ತಿದೆಯೋ ಅಲ್ಲಿ ಯಾವುದೇ ಸಂಕಷ್ಟ ಇರುವುದಿಲ್ಲ ಎಂದು ಹೇಳಿದರು.

ಈ ಭಾಗ ಮತ್ತುಷ್ಟು ಅಭಿವೃದ್ಧಿಯಾಗಬೇಕಿದೆ. 150ಎ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿದೆ. ಅದರ ಅಭಿವೃದ್ಧಿ ಶೀಘ್ರವೇ ನಡೆಯುವ ವಿಶ್ವಾಸ ಇದೆ. ಅದೇ ಹೈದರಾಬಾದ-ಪಣಜಿ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು
ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಶ್ರೀಮಠದ ಮುರುಘೇಂದ್ರ ಶಿವಯೋಗಿಗಳು, ಅಮರೇಶ್ವರದ ಗಜದಂಡ ಶಿವಾಚಾರ್ಯರು, ಮಸ್ಕಿ ವರರುದ್ರಮುನಿ ಶಿವಾಚಾರ್ಯರು, ನವಲಕಲ್ಲ ಸೋಮನಾಥ ಶಿವಾಚಾರ್ಯರು, ತುರ್ವಿಹಾಳದ ಅಮರಗುಂಡ ಶಿವಾಚಾರ್ಯರು, ಶಾಸಕರಾದ ಡಿ.ಎಸ್‌.ಹೂಲಗೇರಿ,
ಅಮರೇಗೌಡ ಬಯ್ನಾಪುರ, ದೊಡ್ಡನಗೌಡ ಲೆಕ್ಕಿಹಾಳ, ವೆಂಕಟರಾವ್‌ ನಾಡಗೌಡ, ಮಾಜಿ ಶಾಸಕ ಮಾನಪ್ಪ ವಜ್ಜಲ್‌, ಮುಖಂಡ ಅಮರಗುಂಡಪ್ಪ ಮೇಟಿ, ಶ್ರೀರಾಮಸೇನಾ ಅಧ್ಯಕ್ಷ ರಮಾಕಾಂತದಾದಾ, ಅಮರಯ್ಯಸ್ವಾಮಿ ಜಾಲಿಬೆಂಚಿ, ಡಾ| ಗಂಗಾಧರಯ್ಯ ಶಾಸ್ತ್ರೀ ಇದ್ದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.