ಲಿಂಗಸೂರು: ಮಲಗಿದ್ದಲ್ಲೇ ಅನುಮಾನಾಸ್ಪದವಾಗಿ ಶವವಾದ ಐವರು ಕಾರ್ಮಿಕರು
Team Udayavani, Mar 17, 2017, 9:12 AM IST
ಲಿಂಗಸೂರು: ಪಟ್ಟಣದಲ್ಲಿ ಮದುವೆ ಸಮಾರಂಭಕ್ಕೆ ಶಾಮಿಯಾನ ಹಾಕಲು ಬಂದಿದ್ದ ಐವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಭೀಕರ ದುರಂತ ಶುಕ್ರವಾರ ನಡೆದಿದೆ.
ರಾತ್ರಿ ಕೊಠಡಿಯೊಂದರಲ್ಲಿ ಮಲಗಿದ್ದ ವೇಳೆ ಕರೆಂಟ್ ಕೈಕೊಟ್ಟಿದ್ದು ಈ ವೇಳೆ ಜನರೇಟರ್ ಆನ್ ಮಾಡಿ ಮಲಗಿದ್ದರು ಎನ್ನಲಾಗಿದೆ. ರಾತ್ರಿಯಿಡೀ ಜನರೇಟರ್ನ ಹೊಗೆ ಸೇವಿಸಿ ಐವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮೃತಪಟ್ಟವರು ಕರಡೆಕಲ್ ಗ್ರಾಮದ ಶಿಕುಮಾರ್(22),ಹಾಜಪ್ಪ(17),ಮೌಲಾಲಿ(18),ಮೌಲಪ್ಪ(20), ಸುರೇಶ್ (21) ಎಂದು ತಿಳಿದು ಬಂದಿದೆ. ನಾಲ್ವರು ಮಲಗಿದ್ದ ಕೋಣೆಯಲ್ಲೇ ಶವವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಸುರೇಶ್ನನ್ನು ಲಿಂಗಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿರುವ ಬಗ್ಗೆ ವರದಿಯಾಗಿದೆ.
ಲಿಂಗಸೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ