ಪಡಿತರ ಚೀಟಿಗಾಗಿ ಸಾಲಗಾರರ ಪರದಾಟ


Team Udayavani, Dec 22, 2018, 3:33 PM IST

ray-3.jpg

ರಾಯಚೂರು: ಸರ್ಕಾರ ರೈತರ ಸಾಲಮನ್ನಾಕ್ಕಾಗಿ ಒಡ್ಡಿರುವ ಪಡಿತರ ಚೀಟಿ ಕಡ್ಡಾಯ ಎಂಬ ಷರತ್ತು ಸವಾಲಾಗಿ ಪರಿಣಮಿಸಿದೆ. ಈಗ ಸಾಲ ಪಡೆದ ರೈತರಲ್ಲಿ ಬಹುತೇಕರಲ್ಲಿ ಪಡಿತರ ಚೀಟಿಯೇ ಇಲ್ಲ ಎನ್ನುವುದು ಒಂದೆಡೆಯಾದರೆ, ಕೆಲವೆಡೆ ಹೆಸರು ತಿದ್ದುಪಡಿ ಮಾಡುವುದಕ್ಕೂ ಆಸ್ಪದ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.

ಸಂಬಂಧಿಸಿದ ಬ್ಯಾಂಕ್‌ಗಳು ಸಾಲ ಪಡೆದವರಿಗೆ ಈಗಾಗಲೇ ಟೋಕನ್‌ ನೀಡುತ್ತಿವೆ. ನಾವು ಕೇಳಿದಾಗ ಅಗತ್ಯ ದಾಖಲೆ
ಸಲ್ಲಿಸುವಂತೆ ಅಧಿಕಾರಿಗಳು ಹೇಳುತ್ತಿದ್ದಾರೆ. ಮುಖ್ಯವಾಗಿ ಪಹಣಿ, ರೈತರ ಆಧಾರ್‌ ಕಾರ್ಡ್‌ ಜತೆಗೆ ಪಡಿತರ ಚೀಟಿ ಕಡ್ಡಾಯ ಎನ್ನುವ ನಿಯಮವೇ ಈಗ ಮುಳುವಾಗುತ್ತಿದೆ. ಇದರಿಂದ ರೈತರು ನಿತ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಅಲೆಯುವಂತಾಗಿದೆ.
 
ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕ್‌ಗಳಲ್ಲಿ ಸಾಲ ಪಡೆದವರಲ್ಲಿ ಹೆಚ್ಚಾಗಿ ಐದು ಎಕರೆಗಿಂತ ಮೇಲ್ಪಟ್ಟ ಮಧ್ಯಮ ಹಾಗೂ ದೊಡ್ಡ ರೈತರೇ ಇದ್ದಾರೆ. ಅವರೆಲ್ಲ ಎಪಿಎಲ್‌ ಕಾರ್ಡ್‌ ವ್ಯಾಪ್ತಿಗೆ ಬರುವವರಾಗಿದ್ದಾರೆ. ಎಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ತಿಂಗಳಿಗೆ ಐದು ಕೆಜಿ ಅಕ್ಕಿ ಹೊರತಾಗಿಸಿ ಮತ್ತೇನು ಸಿಗುವುದಿಲ್ಲ. ಹೀಗಾಗಿ ಸಾಕಷ್ಟು ಜನ ಕಾರ್ಡ್‌ ಪಡೆಯುವ ಗೋಜಿಗೆ ಹೋಗಿಲ್ಲ. ಇನ್ನೂ ಪಡೆದರೂ ಕೆಲ
ರೈತರ ಪಹಣಿ ಮತ್ತು ಪಡಿತರ ಚೀಟಿಯಲ್ಲಿ ಹೆಸರು ಬದಲಾಗಿದೆ. ಅದನ್ನು ತಿದ್ದುಪಡಿ ಮಾಡಿಸಲು ಹೋದರೆ ಈಗ ಯಾವ ತಿದ್ದುಪಡಿ ಕೂಡ ಮಾಡುವುದಿಲ್ಲ ಎನ್ನುತ್ತಿದ್ದಾರೆ ಇಲಾಖೆ ಅಧಿಕಾರಿಗಳು.

ಜಿಲ್ಲೆಯಲ್ಲಿ 190 ವಾಣಿಜ್ಯ ಬ್ಯಾಂಕ್‌ಗಳಲ್ಲಿ ಡಿ.31, 2017ರೊಳಗಾಗಿ ಬೆಳೆ ಸಾಲ ಪಡೆದ ಒಟ್ಟು 1,24,051 ರೈತರಿದ್ದಾರೆ. ಸಾಲ ಮನ್ನಾ ಆಗಬೇಕಾದರೆ ಪಹಣಿ, ಆಧಾರ ಕಾರ್ಡ್‌, ಪಡಿತರ ಚೀಟಿ ನಕಲು ಪ್ರತಿ ಸಲ್ಲಿಸಬೇಕು ಎಂಬ ಷರತ್ತು ವಿಧಿಸಲಾಗಿದೆ. ಆದರೆ, ಪಡಿತರ ಚೀಟಿಯನ್ನು ಜು.5ರ 2018ಗಿಂತ ಮುಂಚಿತವಾಗಿ ಪಡೆದಿರಬೇಕು ಎಂಬ ನಿಯಮ ಈಗ ಸಮಸ್ಯೆಗೀಡು ಮಾಡಿದೆ. ದಾಖಲೆ ಸಲ್ಲಿಕೆಗೆ ಕಾಲಾವಕಾಶ ನೀಡಿರುವ ಸರ್ಕಾರ ಪಡಿತರ ಚೀಟಿ ಪಡೆಯಲು ಕಾಲಾವಕಾಶ ನಿಗದಿ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಆಧಾರ್‌ ಕಡ್ಡಾಯ: ಜಿಲ್ಲೆಯಲ್ಲಿ 3,76,498 ಬಿಪಿಎಲ್‌, 45,161 ಅಂತ್ಯೋದಯ ಕಾರ್ಡ್‌ದಾರರಿದ್ದಾರೆ. ಉಳಿದಂತೆ ಎಪಿಎಲ್‌
ಕಾರ್ಡ್‌ದಾರರು ಕೇವಲ ಎರಡು ಸಾವಿರ ಇರಬೇಕಷ್ಟೇ ಎನ್ನುತ್ತಾರೆ ಅಧಿಕಾರಿಗಳು. ಈಗ ಪಡಿತರ ಚೀಟಿ ಪಡೆಯಬೇಕಾದರೆ ಆಧಾರ್‌ ಕಾರ್ಡ್‌ ಕಡ್ಡಾಯವಾಗಿ ಬೇಕು. ಅದರ ಜತೆಗೆ ಆದಾಯ ಪ್ರಮಾಣಪತ್ರವನ್ನೂ ಸಲ್ಲಿಸಬೇಕಿದೆ. ಒಂದು ವೇಳೆ ಆಧಾರ್‌ ಕಾರ್ಡ್‌ ಸಲ್ಲಿಸದಿದ್ದರೆ ಪಡಿತರ ಚೀಟಿಯೇ ವಿತರಣೆ ಆಗುವುದಿಲ್ಲ ಎನ್ನುತ್ತಾರೆ ಆಹಾರ ಇಲಾಖೆ ಅಧಿಕಾರಿಗಳು.

ಎಲ್ಲವೂ ಬಂದ್‌: ಒಂದೆಡೆ ಪಡಿತರ ಚೀಟಿ ಕಡ್ಡಾಯ ಮಾಡಿರುವ ಸರ್ಕಾರ ಮತ್ತೂಂದೆಡೆ ಪಡಿತರ ಚೀಟಿ ತಿದ್ದುಪಡಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ. 2017-18ನೇ ಸಾಲಿನ ಪಡಿತರ ಚೀಟಿ ವಿಲೇವಾರಿ ಬಾಕಿ ಉಳಿದ ಕಾರಣ 2019ರ ಜ.1ರವರೆಗೆ ಪಡಿತರ ಚೀಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಕಾರ್ಯ ಸ್ಥಗಿತಗೊಳಿಸಿದೆ. ಹೀಗಾಗಿ ಪಡಿತರ ಚೀಟಿಯಲ್ಲಿ ಹೆಸರು ಬದಲಾಗಿದ್ದಲ್ಲಿ ತಿದ್ದುಪಡಿಗೂ ಅವಕಾಶ ಇಲ್ಲದಂತಾಗಿದೆ. 

ಸಮಿತಿ ಮೇಲೆ ನಿಂತಿದೆ ನಿರ್ಧಾರ
ಈಗಾಗಲೇ ಬ್ಯಾಂಕ್‌ಗಳಲ್ಲಿ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ರೈತರಿಗೆ ಟೋಕನ್‌ ನೀಡುತ್ತಿದ್ದು, ನಾವು ಹೇಳಿದಾಗ ದಾಖಲೆ ಸಲ್ಲಿಸುವಂತೆ ಹೇಳಲಾಗುತ್ತಿದೆ. ಒಂದು ವೇಳೆ ಬ್ಯಾಂಕ್‌ಗೆ ಸಲ್ಲಿಸುವ ದಾಖಲೆ ಹೋಲಿಕೆ ಆಗದಿದ್ದಲ್ಲಿ ಆಯಾ ತಾಲೂಕಿನ ತಹಶೀಲ್ದಾರ್‌ ನೇತೃತ್ವದ ಸಮಿತಿ ಪರಿಶೀಲಿಸಿ ಸಾಲಮನ್ನಾ ಆಗಬೇಕೆ ಬೇಡವೇ ಎಂದು ನಿರ್ಧರಿಸಲಿದೆ. ಹೀಗಾಗಿ ತಹಶೀಲ್ದಾರ್‌ ಸಮಿತಿಯನ್ನೇ ರೈತರ ಸಾಲ ಮನ್ನಾ ಅವಲಂಬಿಸಿದೆ.

ಪಡಿತರ ಚೀಟಿ ವಿತರಣೆ ಈಗ ಪಾರದರ್ಶಕವಾಗಿದೆ. ಆಧಾರ್‌ ಕಾರ್ಡ್‌, ಆದಾಯ ಪ್ರಮಾಣ ಸಲ್ಲಿಸದ ಹೊರತು ಕಾರ್ಡ್‌ ನೀಡುವುದಿಲ್ಲ. ಅಲ್ಲದೇ, ಎಲ್ಲವೂ ಆನ್‌ಲೈನ್‌ ವ್ಯವಸ್ಥೆಯಲ್ಲಿ ನಡೆಯಲಿದ್ದು, ಕಾರ್ಡ್‌ ಸಲ್ಲಿಸಿದ ಕೆಲ ದಿನಗಳಲ್ಲಿ ಅವರ ಮನೆಗೆ ಬರಲಿದೆ. ಆದರೆ, ಹಳೇ ಕಾರ್ಡಗಳ ಬಾಕಿ ಉಳಿದ ಕಾರಣ ಈಗ ಕಾರ್ಡ್‌ ತಿದ್ದುಪಡಿ ಸ್ಥಗಿತ ಮಾಡಲು ಸೂಚನೆ ಬಂದಿದೆ.
 ಅರುಣಕುಮಾರ, ಉಪನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಾಯಚೂರು

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.