ಕೈ ಅಭ್ಯರ್ಥಿಗೆ ಲೋಕಲ್‌ ಲೀಡರ್ ಫಂಡಿಂಗ್‌!

ಸೂರ್ಯನಾರಾಯಣ ರೆಡ್ಡಿ ಸೇರಿ ಹಲವು ಜನರು ಕಾಂಗ್ರೆಸ್‌ ಅಭ್ಯರ್ಥಿಗೆ ಆರ್ಥಿಕ ಪುನಶ್ಚೇತ ನೀಡಿದ್ದಾರೆ.

Team Udayavani, Apr 10, 2021, 6:26 PM IST

congress

ಮಸ್ಕಿ: ವಿಧಾನಸಭೆ ಕ್ಷೇತ್ರದ ಉಪಚುನಾವಣೆ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಕೇವಲ ಪ್ರಚಾರದ ಅಬ್ಬರ, ರಾಜಕೀಯ ಪಕ್ಷ, ಅಭ್ಯರ್ಥಿಗಳ ಪ್ರತಿಷ್ಠೆ
ಮಾತ್ರವಲ್ಲದೇ, ಚುನಾವಣೆ ಖರ್ಚು-ವೆಚ್ಚದ ಸಂಗತಿಯೂ ಗಮನ ಸೆಳೆಯುತ್ತಿದೆ. ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರಕ್ಕೆ ಕೈ ಕೊಟ್ಟು ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಮತ್ತು ಬಸನಗೌಡ ತುರುವಿಹಾಳ ಕಣದಲ್ಲಿದ್ದಾರೆ.

ಈ ಹಿಂದೆ 2018ರಲ್ಲಿ ನೇರ ಹಣಾ-ಹಣಿಯಲ್ಲಿದ್ದ ಇಬ್ಬರೇ ಮತ್ತೂಮ್ಮೆ ಎದುರು-ಬದುರಾಗಿದ್ದು, ಚಿಹ್ನೆಗಳು ಮಾತ್ರ ಅದಲು ಬದಲಾಗಿವೆ. ಆದರೆ, ಈ ಇಬ್ಬರು ಅಭ್ಯರ್ಥಿಗಳ ಪರವಾಗಿ ನಡೆದ ಚುನಾವಣೆ ಖರ್ಚು-ವೆಚ್ಚ, ಮತದಾರರ ಮೇಲೆ ಪರಿಣಾಮ ಬೀರಲು ಹರಿಸುತ್ತಿರುವ ಹಣದ ವೇಳೆಯೇ ಭಿನ್ನವಾಗಿದ್ದು, ಇದು ಅಖಾಡದಲ್ಲಿ ಹೆಚ್ಚು ಸದ್ದು ಮಾಡಲಾರಂಭಿಸಿದೆ.

ಏನಿದೆ ಸ್ಥಿತಿ?: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಬೆನ್ನ ಹಿಂದೆ ಇಡೀ ರಾಜ್ಯ ಸರಕಾರವೇ ನಿಂತಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಉಪಚುನಾವಣೆಯಲ್ಲಿ ಬರುವ ಏನೇ ಖರ್ಚು-ವೆಚ್ಚವೆಲ್ಲವೂ ಪಕ್ಷ ಮತ್ತು ಪ್ರತಾಪಗೌಡ ಪಾಟೀಲ್‌ ವೈಯಕ್ತಿಕ ದುಡ್ಡು ಶೇ.60-40ಯಷ್ಟು ಹಂಚಿಕೆ ಮಾಡಿಕೊಂಡು ಪ್ರಚಾರಕ್ಕೆ ನುಗ್ಗಲಾಗಿದೆ. ಈ ಪ್ರಕಾರ ಎಲ್ಲವೂ ಕ್ಷೇತ್ರದಲ್ಲಿನ ಹೋಬಳಿವಾರು, ಹಳ್ಳಿವಾರು ಕೊಡು-ಕೊಳ್ಳುವಿಕೆ ಸದ್ದಿಲ್ಲದೆ ನಡೆದಿದೆ. ಬಹಿರಂಗವಾಗಿಯೂ ಈಗಿನಿಂದಲೇ ಹಣ ಹಂಚಿಕೆ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ವಿಶೇಷವಾಗಿ ಕಳೆದ ಹತ್ತು ದಿನಗಳಿಂದ ಇಲ್ಲಿಯೇ ಬಿಡಾರ ಹೂಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಣದ ಹೊಳೆಯೇ ಹರಿಸುತ್ತಾರೆ ಎನ್ನುವ ಆಪಾದನೆಗಲಿವೆ. ಆದರೆ ಕಾಂಗ್ರೆಸ್‌ನಲ್ಲಿ ಮಾತ್ರ ಈ ಸ್ಥಿತಿ ಭಿನ್ನವಾಗಿದೆ. ಕಾಂಗ್ರೆಸ್‌ ಪಕ್ಷದ ಪಾರ್ಟಿ ಫಂಡ್‌ ಜತೆಗೆ ರಾಯಚೂರು ಜಿಲ್ಲೆ, ನೆರೆ ಜಿಲ್ಲೆಯ ಕಾಂಗ್ರೆಸ್‌ ಮುಖಂಡರೇ ಹೆಚ್ಚು ಆಸಕ್ತಿ ವಹಿಸಿ ಚುನಾವಣೆ ಫಂಡಿಂಗ್‌ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಯಾರ್ಯಾರು?: ಆರ್‌.ಬಸನಗೌಡ ತುರುವಿಹಾಳ ಬಳಿ ದುಡ್ಡಿಲ್ಲ ಕಳೆದ ಚುನಾವಣೆಯಲ್ಲಿ ವಿಪರೀತ ಖರ್ಚು ಮಾಡಿ ಲಾಸ್‌ ಆಗಿದ್ದಾರೆ. ಹೀಗಾಗಿ ಪಕ್ಷದ ಮುಖಂಡರು, ಕಾರ್ಯಕರ್ತರೇ ಹಣ ನೀಡುವ ಒಪ್ಪಿಗೆ ನೀಡಿದ್ದರು. ಈ ಪ್ರಕಾರ ಹಲವು ಕಡೆಗಳಲ್ಲಿ ದೇಣಿಗೆ ಸಂಗ್ರಹಗಳ ಕೂಡ ನಡೆದಿದ್ದವು. ಆದರೆ ಈಗ ಇದರ ಜತೆಗೆ ಹಾಲಿ-ಮಾಜಿ ಶಾಸಕರು ಸಾಥ್ ನೀಡುತ್ತಿದ್ದಾರೆ. 50 ಲಕ್ಷ ರೂ.ನಿಂದ ಹಿಡಿದು 1 ಕೋಟಿ, 2 ಕೋಟಿವರೆಗೂ ಹಣ ಹಾಕಿ ಚುನಾವಣೆ ಎದುರಿಸಲಾಗುತ್ತಿದೆ. ಕುಷ್ಟಗಿ ಶಾಸಕ ಅಮರೇಗೌಡ ಬಯ್ನಾಪೂರ, ಲಿಂಗಸುಗೂರು ಶಾಸಕ ಡಿ.ಎಸ್‌. ಹೂಲಗೇರಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‌, ಮಾಜಿ ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಭೋಸರಾಜು, ಮಾಜಿ ಸಂಸದ ಬಿ.ವಿ. ನಾಯಕ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಶಿವರಾಜ ತಂಗಡಗಿ, ಸೂರ್ಯನಾರಾಯಣ ರೆಡ್ಡಿ ಸೇರಿ ಹಲವು ಜನರು ಕಾಂಗ್ರೆಸ್‌ ಅಭ್ಯರ್ಥಿಗೆ ಆರ್ಥಿಕ ಪುನಶ್ಚೇತ ನೀಡಿದ್ದಾರೆ.

ಒಗ್ಗಟ್ಟಿನ ಅಸ್ತ್ರ: ಕಾಂಗ್ರೆಸ್‌ನ ಅಭ್ಯರ್ಥಿಗೆ ಆರ್ಥಿಕ ಬಲ ಇಲ್ಲದಿರುವುದೇ ಮುಖಂಡರ ಒಗ್ಗಟ್ಟಿನ ಅಸ್ತ್ರವಾಗಿದೆ. ಅಲ್ಲದೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌
ದೋಸ್ತಿ ಸರಕಾರಕ್ಕೆ ಸೆಡ್ಡು ಹೊಡೆದು ಬಿಜೆಪಿ ಸೇರ್ಪಡೆಯಾಗಲು ರೆಡಿಯಾಗಿದ್ದ ಮೊದಲ ವ್ಯಕ್ತಿ. ಹೀಗಾಗಿಯೇ ಇದರ ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್‌ ತುದಿಗಾಲ ಮೇಲೆ ನಿಂತಿದೆ. ಇದಕ್ಕಾಗಿ  ಪಾರ್ಟಿ ಫಂಡ್‌, ಅಭ್ಯರ್ಥಿ ಕೈಯಿಂದ ಹಣ ಹಾಕುವುದಕ್ಕಿಂತ ಹೆಚ್ಚಾಗಿ ರಾಯಚೂರು ಜಿಲ್ಲೆ ಹಿರಿಯ ರಾಜಕಾರಣಿಗಳು, ನೆರೆ-ಹೊರೆ ಜಿಲ್ಲೆಯ ಹಾಲಿ-ಮಾಜಿ ಶಾಸಕರು ಹೆಚ್ಚು ಫಂಡಿಂಗ್‌ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಮೊದಲ ಉಪಚುನಾವಣೆ ಎದುರಿಸುತ್ತಿರುವ ಮಸ್ಕಿ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.