ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
Team Udayavani, Jun 28, 2023, 12:14 PM IST
ರಾಯಚೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ರಾಯಚೂರಿನ ಲೋಕೋಪಯೋಗಿ ಇಲಾಖೆಯ ಎಇಇ ಪ್ರಕಾಶ್ ಅವರ ಆಶಾಪುರ ರಸ್ತೆಯಲ್ಲಿನ ಮನೆ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ ಸಿಂಧನೂರಿಲ್ಲೂ ನಗರ ಯೋಜನೆ ಪ್ರಾಧಿಕಾರದ ಕಾರ್ಯದರ್ಶಿ ಶರಣಪ್ಪ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಶರಣಪ್ಪ ಅವರ ಸ್ಥಳೀಯ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆದಿದೆ.
ನಗರದ ಆದರ್ಶ ಕಾಲೋನಿಯ ಧರ್ಮ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯ ನಡೆದಿದೆ. ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲೂ ಶರಣಪ್ಪ ಅವರ ಆಸ್ತಿ ದಾಖಲೆಗೆ ಸಂಬಂಧಿಸಿ ಮತ್ತೊಂದು ತಂಡ ಬೆಳಗ್ಗೆಯಿಂದಲೇ ಶೋಧ ಕಾರ್ಯ ಮುಂದುವರಿಸಿದೆ.