ಲಾಳಗೊಂಡರ ಸಮಾಜಕ್ಕೆ ಮೀಸಲು ಕಲ್ಪಿಸಿ
Team Udayavani, Mar 10, 2022, 1:16 PM IST
ಸಿಂಧನೂರು: ರಾಜ್ಯದ ಜಾತಿ ಪಟ್ಟಿಯಲ್ಲಿ ಸೇರದೇ ಇರುವ ಲಾಳಗೊಂಡರ ಸಮಾಜವನ್ನು ಹಿಂದುಳಿದ ವರ್ಗ 3(ಬಿ)ಗೆ ಸೇರಿಸುವಂತೆ ಒತ್ತಾಯಿಸಿದ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ತಮ್ಮ ಬೇಡಿಕೆ ಕುರಿತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ನಿಯೋಗದ ಮುಖಂಡರು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಲಾಳಗೊಂಡ ಸಮಾಜವು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದೆ. ವೀರಶೈವ ಜನಾಂಗದ ಜೊತೆಗೆ ಗುರುತಿಸಿಕೊಂಡಿದ್ದಾರೆ. ಲಾಳಗೊಂಡರನ್ನು ಜಾತಿ ಪಟ್ಟಿಯಲ್ಲಿ ಸೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿದೆ. ಈವರೆಗೂ ಸ್ಪಂದನೆ ದೊರಕಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿ, ಬೇಡಿಕೆ ಈಡೇರಿಸಬೇಕು ಎಂದಿದ್ದಾರೆ.
ನಿಯೋಗದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಹರವಿ ಬಸನಗೌಡ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಡಾ| ಶಿವರಾಜ್ ಪಾಟೀಲ್, ಬಸವರಾಜ ದಢೇಸುಗೂರು, ಸೋಮಲಿಂಗಪ್ಪ, ರಾಜಾವೆಂಕಟಪ್ಪ ನಾಯಕ, ಪರಣ್ಣ ಮುನವಳ್ಳಿ, ಸಿಂಧನೂರಿನ ಕೆ.ಶರಣಬಸವ ವಕೀಲರು, ಮಲ್ಲಿಕಾರ್ಜುನ ವಕೀಲರು, ಚಂದ್ರೇಗೌಡ ಹರೇಟನೂರು, ರಾಮನಗೌಡ ಮಲ್ಕಾಪುರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ