ಎಟಿಎಂ ಕಾರ್ಡ್‌ ಬದಲಿಸಿ ವಂಚಿಸುತ್ತಿದ್ದ ವ್ಯಕ್ತಿ ಬಂಧನ


Team Udayavani, Jan 9, 2022, 5:30 PM IST

19ATM

ಸಿಂಧನೂರು: ಎಟಿಎಂಗಳಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ ಮಾಡುತ್ತಿದ್ದ ಒಬ್ಬನನ್ನು ಪೊಲೀಸರು ಶುಕ್ರವಾರ ಬಲೆಗೆ ಕೆಡವಿದ್ದಾರೆ.

ಕೋಲಾರ ಜಿಲ್ಲೆಯ ಅರಕುಂಟಿ ಗ್ರಾಮದ ನಾರಾಯಣಸ್ವಾಮಿ (41) ಎಂಬಾತ ಬಂಧಿತ. ಈತನ ಬಳಿ 20 ಎಟಿಎಂ ಕಾರ್ಡ್‌ಗಳು ದೊರಕಿವೆ. 40 ಸಾವಿರ ರೂ. ನಗದು ಜಪ್ತಿ ಮಾಡಲಾಗಿದೆ.

ಪೊಲೀಸ್‌ ಸಿಬ್ಬಂದಿ ಸಂಗನಗೌಡ ಎಂಬಾತ ನಿರಂತರ ನಿಗಾ ಇಟ್ಟು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಬೆನ್ನತ್ತಿ ನೀಡಿದ ಸುಳಿವು ಆಧರಿಸಿ ಈ ಪ್ರಕರಣ ಬಯಲಿಗೆಳೆಯಲಾಗಿದೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

ಏನಿದು ವಂಚನೆ ತಂತ್ರ?

ಎಲ್ಲ ಬ್ಯಾಂಕ್‌ನ ಎಟಿಎಂಗಳನ್ನು ಹೋಲುವ ಕಾರ್ಡ್‌ ಜತೆಗೆ ಇಟ್ಟುಕೊಂಡು ಎಟಿಎಂನೊಳಗೆ ಹೋಗುವ ವಂಚಕರು, ಅನಕ್ಷರಸ್ಥರು, ವೃದ್ಧರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಪಿನ್‌ ನಂಬರ್‌ ಒತ್ತಿ, ನಂತರ ಬೇರೆ ಆಪ್ಷನ್‌ ಬಳಸಿ ಹಣ ಬಂದಿಲ್ಲವೆಂದು ಅದೇ ಬಣ್ಣದ ಕಾರ್ಡ್‌ ಬದಲಿಸಿ ಕೊಡುತ್ತಿದ್ದರು. ಬಳಿಕ ಬೇರೆ ಎಟಿಎಂಗಳಿಗೆ ತೆರಳಿ ದಿಢೀರ್‌ ಹಣ ಡ್ರಾ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಹತ್ತಾರು ಜನರು ಇಂತಹ ವಂಚನೆ ಬಲೆಗೆ ಬಿದ್ದರೂ ಕಳ್ಳರನ್ನು ಹಿಡಿಯುವುದು ದುಸ್ತರವಾಗಿತ್ತು.

ತನಿಖಾ ತಂಡ ರಚನೆ

ಇಂತಹ ಪ್ರಕರಣದ ವಿಷಯದಲ್ಲಿ ಯಾರಿಗೆ ದೂರಬೇಕೆಂಬ ಗೊಂದಲಕ್ಕೆ ಬೀಳುತ್ತಿದ್ದ ಜನ ಬೇಸರ ವ್ಯಕ್ತಪಡಿಸುತ್ತಿದ್ದರು. ಇದನ್ನು ಬೇಧಿಸಲು ಡಿವೈಎಸ್ಪಿ ವೆಂಕಟಪ್ಪ ನಾಯಕ ಮಾರ್ಗದರ್ಶನದಲ್ಲಿ ಪ್ರೋಬೆಷನರಿ ಡಿವೈಎಸ್ಪಿ ಆರ್‌.ಲಕ್ಷ್ಮೀಕಾಂತ್‌, ಸಿಪಿಐ ಉಮೇಶ್‌ ಕಾಂಬಳೆ, ಪಿಎಸ್‌ಐ ಸೌಮ್ಯ, ಸಿಬ್ಬಂದಿ ಸಂಗನಗೌಡ, ಆದಯ್ಯ, ಅನಿಲ್‌ ಕುಮಾರ್‌, ಚಾಂದಾಪಾಷಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಇವರು ತನಿಖೆ ನಡೆಸಿ ಎಟಿಎಂ ಕಾರ್ಡ್‌ ಬದಲಿಸುವ ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊನೆಗೂ ಆಸಕ್ತಿ ತೋರಿದ ಪೊಲೀಸರು

ಅಮಾಯಕರ ಎಟಿಎಂ ಕಾರ್ಡ್‌ ಬದಲಿಸಿ ವಂಚನೆ ಮಾಡುತ್ತಿದ್ದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದವು. ಇದೇ ಮೊದಲ ಬಾರಿಗೆ ಅಂತಹ ಒಂದು ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ನೀಡುವುದಕ್ಕೆ ಆಯಾ ಬ್ಯಾಂಕ್‌ ಮ್ಯಾನೇಜರ್‌ಗಳಿಗೆ ಅವಕಾಶ ಇರಲಿಲ್ಲ. ಅವರು ಮೇಲಧಿಕಾರಿಗಳಿಗೆ ಪತ್ರ ಬರೆದು ಅನುಮತಿ ಪಡೆಯುವಷ್ಟರಲ್ಲಿ ವಾರ ಹಿಡಿಯುತ್ತಿತ್ತು. ಬಳಿಕ ತನಿಖೆ ನಡೆಸಬೇಕಿತ್ತು. ಇಂತಹ ವಿಳಂಬ ಕಾರಣಕ್ಕೆ ಬಹುತೇಕರು ದೂರು ನೀಡದೇ ಉಳಿಯುತ್ತಿದ್ದರು. ಈ ಬಾರಿ ಪ್ರಕರಣ ಬೇಧಿಸುವ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ್ದಾರೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.