ರೈಲಿನಡಿ ಬಿದ್ದು ವ್ಯಕ್ತಿ ಸಾವು
Team Udayavani, Oct 8, 2021, 2:52 PM IST
ರಾಯಚೂರು: ನಗರದ ಗೂಡ್ ಶೆಡ್ ಸಮೀಪದ ರೈಲು ಹಳಿಗೆ ಬಿದ್ದು ಕೆಎಸ್ಆರ್ ಟಿಸಿ ಮೆಕ್ಯಾನಿಕ್ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.
ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಪಟ್ಟಣದ ರಾಘವೇಂದ್ರ (36) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ರೈಲ್ವೇ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಕುಟುಂಬ ಸದಸ್ಯರು ಇನ್ನೂ ಭೇಟಿ ನೀಡಿಲ್ಲ ಎಂದು ಪಿಎಸ್ ಐ ತಿಳಿಸಿದ್ದಾರೆ.