ಮಂತ್ರಾಲಯಕ್ಕೂ ಪ್ರವಾಹ ಭೀತಿ


Team Udayavani, Aug 17, 2018, 11:15 AM IST

ray-2.jpg

ರಾಯಚೂರು: ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಎರಡು ಲಕ್ಷ ಕ್ಯುಸೆಕ್‌ ನೀರು ಹರಿಬಿಟ್ಟಿದ್ದು, ನದಿ ಪಾತ್ರದ ಗ್ರಾಮಗಳು ಮಾತ್ರವಲ್ಲದೇ ಮಂತ್ರಾಲಯಕ್ಕೂ ಪ್ರವಾಹ ಭೀತಿ ಎದುರಾಗಿದೆ. ಬುಧವಾರ 1.40 ಲಕ್ಷ ಕ್ಯುಸೆಕ್‌ ನೀರು ಹರಿಬಿಟ್ಟಿದ್ದರೆ, ಗುರುವಾರ ಎರಡು ಲಕ್ಷ ಕ್ಯುಸೆಕ್‌ ನೀರು ಹರಿಸಲಾಗಿದೆ. ಇದರಿಂದ ಸಿಂಧನೂರು, ಮಾನ್ವಿ ಸೇರಿ ರಾಯಚೂರು ತಾಲೂಕಿನ ನದಿ ಪಾತ್ರದ ಕೆಲ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಜತೆಗೆ ಮಂತ್ರಾಲಯದಲ್ಲೂ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದ್ದು, ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿದ್ದು, ಸಂಪೂರ್ಣ ಮುಳುಗಡೆ ಆಗಬಹುದು. 

ರಾಯರ ಆರಾಧನೆ ಸಮೀಪಿಸುತ್ತಿದ್ದು, ಮಠಕ್ಕೆ ಬರುವ ಭಕ್ತರ ಸಂಖ್ಯೆಯೂ ಹೆಚ್ಚುತ್ತಿದೆ. ಕಳೆದೆರಡು ದಿನಗಳಿಂದ ನದಿಯಲ್ಲಿ ನೀರಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿರುವ ಕಾರಣ ಶ್ರೀಮಠ ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟೆಚ್ಚರ ವಹಿಸಿದೆ. ನದಿಯಲ್ಲಿ ಸ್ನಾನ ಮಾಡದಂತೆ ಪ್ರತಿ ಐದು ನಿಮಿಷಕ್ಕೊಮ್ಮೆ ಸೂಚನೆ ನೀಡಲಾಗುತ್ತಿದೆ. ಅದರ ಜತೆಗೆ ಎರಡು ಶಿಫ್ಟ್‌ಗಳಲ್ಲಿ ಕೆಲಸ ನಿರ್ವಹಿಸುವಂತೆ ಆರು ಜನ ಸೆಕ್ಯೂರಿಟಿ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ನದಿ ಪಾತ್ರದಲ್ಲಿಯೇ ಸ್ನಾನ ಮಾಡುವಂತೆ ಸೂಚನೆ ನೀಡುತ್ತಿದ್ದು,
ನದಿಯಲ್ಲಿ ಇಳಿಯಲು ಬಿಡುತ್ತಿಲ್ಲ. ಅಲ್ಲದೇ, ಈಚೆಗೆ ಎರಡು ಮೊಸಳೆಗಳು ಕಂಡುಬಂದಿದ್ದು, ಅರಣ್ಯ ಇಲಾಖೆ ಜತೆಗೂ ಮಾತುಕತೆ ನಡೆಸಿದೆ.

ಕೊಚ್ಚಿ ಹೋದ ಕೋಣೆಗಳು: ನದಿ ಪಾತ್ರದಲ್ಲಿ ಮಹಿಳೆಯರಿಗೆಂದು ನಿರ್ಮಿಸಿದ್ದ ಎರಡು ವಸ್ತ್ರ ಬದಲಾವಣೆ ಕೋಣೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಆರಾಧನೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಸ್ನಾನಕ್ಕೆ ಅನುವು ಮಾಡಿಕೊಡುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ಬಳಿಕ ಸೌಲಭ್ಯ ಕಲ್ಪಿಸುವ ಚಿಂತನೆಯಲ್ಲಿದೆ ಮಂತ್ರಾಲಯ ಆಡಳಿತ ಮಂಡಳಿ.

ಎಲಿಬಿಚ್ಚಾಲಿ ಬೃಂದಾವನ ಜಲಾವೃತ: ತುಂಗಭದ್ರಾ ನದಿಗೆ ಅಪಾರ ನೀರು ಹರಿದು ಬರುತ್ತಿರುವ ಪರಿಣಾಮ ಎಲೆಬಿಚ್ಚಾಲಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತವಾಗಿದೆ. ಮಂತ್ರಾಲಯಕ್ಕೆ ಬರುವ ಭಕ್ತರು ಎಲೆಬಿಚ್ಚಾಲಿಗೂ ಭೇಟಿ ನೀಡಿ ಬೃಂದಾವನ ದರ್ಶನ ಪಡೆಯುತ್ತಾರೆ. 9 ವರ್ಷದ ನಂತರ ಏಕಶಿಲಾ ಬೃಂದಾವನ ಜಲಾವೃತವಾಗಿದ್ದು, ತಮಿಳುನಾಡು ಸೇರಿದಂತೆ ವಿವಿಧೆಡೆಯಿಂದ ಆಗಮಿಸುತ್ತಿರುವ ಭಕ್ತರು ದೂರದಿಂದಲೇ ಬೃಂದಾವನ ದರ್ಶನ ಪಡೆಯುತ್ತಿದ್ದಾರೆ.

ಟಿಬಿ ಡ್ಯಾಂನಲ್ಲಿ 1,630 ಅಡಿ ಸಂಗ್ರಹ: ತುಂಗಭದ್ರಾ ಜಲಾಶಯದಲ್ಲಿ 1,630 ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಹೆಚ್ಚಾಗಿದೆ. ಗುರುವಾರ 1.67 ಲಕ್ಷ ಕ್ಯುಸೆಕ್‌ ನೀರು ಒಳಹರಿವು ಇರುವ ಕಾರಣ 1.99 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗಿದೆ. ಪಶ್ಚಿಮ ವಾಹಿನಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದಲ್ಲಿ ನದಿಗೆ ಹೆಚ್ಚುವರಿ ನೀರು ಹರಿಸಲಾಗುತ್ತದೆ. ಇದರಿಂದ ನದಿಪಾತ್ರಗಳಿಗೆ ಮತ್ತಷ್ಟು ಆತಂಕ ಎದುರಾಗಲಿದೆ. ಆರಾಧನೆಗೆ ಕೆಲವೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ನದಿ ನೀರು ಹೆಚ್ಚಾದರೆ ಸಮಸ್ಯೆ ಎದುರಾಗಲಿ¨

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಭಕ್ತರಿಗೆ ಸ್ನಾನಕ್ಕೆ ಅವಕಾಶ ನೀಡುತ್ತಿಲ್ಲ. ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಅಲ್ಲದೇ, ಆರಾಧನೆಗೆ ಬರುವ ಭಕ್ತರ ಸ್ನಾನಕ್ಕೆ ವ್ಯವಸ್ಥೆ ಮಾಡಬೇಕಿದ್ದು, ನೀರಿನ ಪ್ರಮಾಣ ಇಳಿಕೆಯಾದ ಬಳಿಕ ವ್ಯವಸ್ಥೆ ಮಾಡಲಾಗುವುದು.  
 ಎಸ್‌.ಕೆ. ಶ್ರೀನಿವಾಸ, ಶ್ರೀಮಠದ ವ್ಯವಸ್ಥಾಪಕ

ಟಾಪ್ ನ್ಯೂಸ್

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqe

Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

madhu bangarappa

Cauvery ವಿಚಾರದಲ್ಲಿ ಸಿಎಂ ಕಠಿಣ ನಿಲುವಿಗೆ ಬೆಂಬಲ: ಮಧು ಬಂಗಾರಪ್ಪ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರಿಂದ ಮಂತ್ರಾಲಯ ರಾಯರ ದರ್ಶನ

Mantralayam: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರಿಂದ ಮಂತ್ರಾಲಯ ರಾಯರ ದರ್ಶನ

Hattigani: ಹಟ್ಟಿಗಣಿಯಲ್ಲಿದೆ “ಕಲ್ಲಿನ ಗ್ರಂಥಾಲಯ’

Hattigani: ಹಟ್ಟಿಗಣಿಯಲ್ಲಿದೆ “ಕಲ್ಲಿನ ಗ್ರಂಥಾಲಯ’

basanagouda patil yatnal

Sanatana Remark; ಸನಾತನ ಧರ್ಮ ಟೀಕಿಸುವವರಗೆ ಏಡ್ಸ್, ಕುಷ್ಠ ರೋಗ ಬಂದಿದೆ: ಶಾಸಕ ಯತ್ನಾಳ್

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

police crime

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.