ಇನ್ನು ವರ್ಷವಿಡೀ ಝಗಮಗಿಸಲಿದೆ ಮಂತ್ರಾಲಯ


Team Udayavani, Aug 18, 2018, 6:00 AM IST

as25252.jpg

ರಾಯಚೂರು: ಆರಾಧನೆ ವೇಳೆ ಮಂತ್ರಾಲಯದ ವಿದ್ಯುತ್‌ ದೀಪಗಳ ವೈಭವವನ್ನು ಎಷ್ಟು ನೋಡಿದರೂ ಸಾಲದು. ಆದರೆ, ಅಂತಹ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಆಗದವರು ನಿರಾಸೆ ಪಡುವುದು ಬೇಡ. ಇನ್ನು ಮುಂದೆ ಮಂತ್ರಾಲಯ ವರ್ಷವಿಡೀ ಬಣ್ಣ-ಬಣ್ಣದ ವಿದ್ಯುತ್‌ ದೀಪಗಳಿಂದ ಪ್ರಜ್ವಲಿಸಲಿದೆ.

2009ರಲ್ಲಿ ನೆರೆ ಬಂದು ಹೋದ ಬಳಿಕ ಸಂಪೂರ್ಣ ಕಳೆಗುಂದಿದ್ದ ಮಂತ್ರಾಲಯ, ಕೆಲವೇ ವರ್ಷಗಳಲ್ಲಿ ಊಹೆಗೂ ನಿಲುಕದ ರೀತಿಯಲ್ಲಿ ತಲೆ ಎತ್ತಿ ನಿಂತಿದೆ. ಆದರೆ, ನವ ಮಂತ್ರಾಲಯ ನಿರ್ಮಾಣದ ಕಾರ್ಯ ಮಾತ್ರ ಇಂದಿಗೂ ನಿಂತಿಲ್ಲ. ಭಕ್ತರಿಗೆ ಮಠದ ವೈಭವವನ್ನು ಮತ್ತಷ್ಟು  ಉಣಬಡಿಸಲು ಮುಂದಾಗಿರುವ ಶ್ರೀಮಠ, ಶಾಶ್ವತ ವಿದ್ಯುತ್‌ ದೀಪಾಲಂಕಾರ ಮಾಡಿದೆ. ಇದರಿಂದ ರಾತ್ರಿ ಹೊತ್ತು ಮಂತ್ರಾಲಯದ ಚಿತ್ರಣ ಮತ್ತಷ್ಟು ವಿಜೃಂಭಿಸಲಿದೆ.

ಸಾಮಾನ್ಯವಾಗಿ ಆರಾಧನೆ ಬಿಟ್ಟರೆ ವಿಶೇಷ ದಿನಗಳಲ್ಲಿ ಮಾತ್ರ ಮಠಕ್ಕೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗುತ್ತದೆ. ಆದರೆ, ಈಚೆಗೆ ಮಠಕ್ಕೆ ಬರುವ ಭಕ್ತರ ಸಂಖ್ಯೆ ನೋಡಿದರೆ ಮಂತ್ರಾಲಯದಲ್ಲಿ ನಿತ್ಯ ಆರಾಧನೆ ಎನ್ನುವ ಭಾವನೆ ಮೂಡುತ್ತದೆ. ಈ ಕಾರಣಕ್ಕೆ ಭಕ್ತರೊಬ್ಬರು ರಾಯರ ಮಠಕ್ಕೆ ನಿತ್ಯ ದೀಪವೈಭವ ಜರುಗಲಿ ಎಂಬ ಕಾರಣಕ್ಕೆ ಈ ಸೇವೆ ಸಲ್ಲಿಸಿದ್ದಾರೆ. ಸಂಪೂರ್ಣ ವೆಚ್ಚವನ್ನು ಅವರೇ ಭರಿಸಿದ್ದಾರಂತೆ.

ಲೈಟಿಂಗ್‌ ಹೇಗಿರಲಿದೆ: ವರ್ಷದ 365 ದಿನಗಳಲ್ಲಿ ಎಲ್ಲ ದಿನವೂ ಒಂದೊಂದು ಬಣ್ಣದ ದೀಪಗಳನ್ನು ಹಾಕಬಹುದಾಗಿದೆ. ರಾಯರ ಬೃಂದಾವನದ ಸುತ್ತಲಿನ ಶಿಲಾಮಂಟಪ, ಹೊರಭಾಗದ ಮೇಲ್ಮೈ, ಮುಂಭಾಗದ ಚಿನ್ನದ ಗೋಪುರ, ಮುಖ್ಯದ್ವಾರ, ಕಾಳಿಂಗ ನರ್ತನ, ಮಂಚಾಲಮ್ಮ ದೇವಸ್ಥಾನ, ಸೆಂಟ್ರಲ್‌ ರಿಸೆಪ್ಶನ್‌ ಕಚೇರಿ ಸೇರಿ ವಿವಿಧೆಡೆ ದೀಪಗಳ ಅಳವಡಿಕೆ ಮಾಡಲಾಗಿದೆ. ಹಲವು ಬಣ್ಣಗಳಿಂದ ಕೂಡಿದ ಬಲ್ಬ್ಗಳಿಂದ ದಿನಕ್ಕೊಂದು ಮಾದರಿಯಲ್ಲಿ ಕಂಗೊಳಿಸಲಿದೆ ಶ್ರೀಮಠ. ಬಜಾಜ್‌ ಸಂಸ್ಥೆಗೆ ನಿರ್ವಹಣೆ ಹೊಣೆ ನೀಡಲಾಗಿದೆ. ಎಲ್ಲ ವಿದ್ಯುತ್‌ದೀಪಗಳ ನಿಯಂತ್ರಣಕ್ಕೆ ಪ್ರತ್ಯೇಕ ಕೋಣೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಇದು ಕೂಡ ಶೇ.80ರಷ್ಟು ಕಾಮಗಾರಿ ಮುಗಿದಿದ್ದು, ಆರಾಧನೆಗೆಲ್ಲ ಮುಕ್ತಗೊಳ್ಳಲಿದೆ.

ಭಕ್ತರೊಬ್ಬರು ಮಠಕ್ಕೆ ವಿಶೇಷ ವಿದ್ಯುತ್‌ ದೀಪಾಲಂಕಾರದ ಸೇವೆ ನೀಡಿದ್ದಾರೆ. ವರ್ಷವಿಡೀ ದಿನಕ್ಕೊಂದು ಬಣ್ಣದಲ್ಲಿ ಮಠವನ್ನು ಅಲಂಕರಿಸಬಹುದು. ಎಲ್ಲ ಕಾಲಕ್ಕೂ ಬರುವ ಭಕ್ತರಿಗಾಗಿ ಮಠವನ್ನು ಮತ್ತಷ್ಟು ಸುಂದರಗೊಳಿಸಲಾಗುತ್ತಿದೆ. ಬಜಾಜ್‌ ಸಂಸ್ಥೆಯವರು ಇದನ್ನು ನಿರ್ವಹಿಸುತ್ತಿದ್ದು, ಬಹುತೇಕ ಶೇ.80ರಷ್ಟು ದೀಪಗಳ ಅಳವಡಿಕೆ ಕಾರ್ಯ ಮುಗಿದಿದೆ.
– ಎಸ್‌.ಕೆ. ಶ್ರೀನಿವಾಸ್‌, ಶ್ರೀಮಠದ ವ್ಯವಸ್ಥಾಪಕ.

– ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.