ಬ್ಯಾಗವಾಟ್‌ ಬಾಲಕರ ಹಾಸ್ಟೇಲ್‌ನಲ್ಲಿ ಅವ್ಯವಸ್ಥೆ

ಮೂಲ ಸೌಲಭ್ಯ ಕೊರತೆ-ವಿದ್ಯಾರ್ಥಿಗಳ ಪರದಾಟಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಿಲ್ಲ ವಿಶೇಷ ತರಗತಿ

Team Udayavani, Mar 14, 2020, 12:16 PM IST

14-March-7

ಮಾನ್ವಿ: ಬ್ಯಾಗವಾಟ್‌ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಾಟರ್‌ ಬಾಟಲ್‌ನಲ್ಲಿ ಕಾಲುವೆ ನೀರು ಹಾಕಿ ವಿದ್ಯಾರ್ಥಿಗಳಿಗೆ ಕುಡಿಯಲು ಇಟ್ಟಿರುವುದು. ವಸತಿ ನಿಲಯದಲ್ಲಿನ ಶೌಚಗೃಹಕ್ಕೆ ಬೀಗ ಹಾಕಿರುವುದು.(ಬಲಚಿತ್ರ)

ಮಾನ್ವಿ: ತಾಲೂಕಿನ ಬ್ಯಾಗವಾಟ್‌ ಗ್ರಾಮದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ.

ಹಾಸ್ಟೆಲ್‌ ಮೇಲ್ವಿಚಾರಕ ವಿದ್ಯಾರ್ಥಿಗಳಿಗೆ ಸಿಗದಂತೆ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ದೂರವಾಣಿಗೂ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ.

ವಸತಿ ನಿಲಯದಲ್ಲಿ 5ರಿಂದ 10ನೇ ತರಗತಿವರೆಗೆ 95ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ 21 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದಾರೆ.

ಅವ್ಯವಸ್ಥೆ: ವಸತಿ ನಿಲಯದ ಮುಂದೆ ಕೆರೆ ಇದ್ದು, ನೀರು ಕಲಿಷಿತಗೊಂಡಿವೆ. ಇದರಿಂದಾಗಿ ಸೊಳ್ಳೆ ಹಾವಳಿ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆ ನೀಡಿಲ್ಲ. ನಿಗ ದಿತ ಆಹಾರ ಪಟ್ಟಿಯಂತೆ ಆಹಾರ ನೀಡುತ್ತಿಲ್ಲ. ಕಾಟಾಚಾರಕ್ಕೆ ಎಂಬಂತೆ ಕಡಿಮೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಪತ್ರಿಕೆಗಳು ಬರಲ್ಲ. ಕ್ರೀಡಾ ಸಾಮಗ್ರಿಗಳಿಲ್ಲ. ಎರಡು ತಿಂಗಳಿಗೊಮ್ಮೆ ಕ್ಷೌರ ಮಾಡಿಸಬೇಕಿದ್ದರೂ, ಈ ವರ್ಷದಲ್ಲಿ ಒಮ್ಮೆ ಮಾತ್ರ ಕ್ಷೌ ರಕ್ಕೆ ವಿದ್ಯಾರ್ಥಿಗಳಿಗೆ ಹಣ ನೀಡಲಾಗಿದೆಯಂತೆ. ಇನ್ನು ಶುದ್ಧ ನೀರು ಸೌಲಭ್ಯ ಇಲ್ಲದ್ದರಿಂದ ಕಾಲುವೆ ನೀರನ್ನೇ ವಿದ್ಯಾರ್ಥಿಗಳಿಗೆ ಕುಡಿಯಲು ಕೊಡಲಾಗುತ್ತಿದೆ.

ಟ್ಯೂಷನ್‌ ಇಲ್ಲ: ವಸತಿ ನಿಲಯದಲ್ಲಿ 21 ಎಸ್‌ ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದು, ನಿಯಮದಂತೆ ಇವರಿಗೆ ಕಡ್ಡಾಯವಾಗಿ ಟ್ಯೂಷನ್‌ ಮಾಡಬೇಕು. ಗಣಿತ, ವಿಜ್ಞಾನ, ಇಂಗ್ಲಿಷ್‌ ಭಾಷಾವಾರುಶಿಕ್ಷಕರನ್ನು ನೇಮಕ ಮಾಡಿಕೊಂಡು ವಿಶೇಷ ತರಗತಿ ನಡೆಸಬೇಕು. ಆದರೆ ಇಲ್ಲಿ ಯಾವುದೇ ತರಗತಿ ನಡೆಸುತ್ತಿಲ್ಲ.

ಶೌಚಾಲಯಕ್ಕೆ ಬೀಗ: ಇನ್ನು ಹಾಸ್ಟೆಲ್‌ನಲ್ಲಿರುವ ಶೌಚಾಲಯದ ಪೈಪ್‌ಲೈನ್‌ ದುರಸ್ತಿಗೀಡಾಗಿದ್ದರಿಂದ ಬೀಗ ಜಡಿಯಲಾಗಿದೆ. ಇದುವರೆಗೆ ಅಧಿಕಾರಿಗಳು ದುರಸ್ತಿಗೆ ಮುಂದಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ ಹಿಂದುಗಡೆಯ ಗುಡ್ಡಕ್ಕೆ ಶೌಚಕ್ಕೆ ಹೋಗತ್ತಿದ್ದಾರೆ. ರಾತ್ರಿ ಸಮಯದಲ್ಲಿ ವಿದ್ಯಾರ್ಥಿಗಳು ಶೌಚಕ್ಕೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ ಕೆಲ ಕೋಣೆಯಲ್ಲಿ ವಿದ್ಯುತ್‌ ದೀಪಗಳಿಲ್ಲ, ಫ್ಯಾನ್‌ಗಳಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಸಿಗದ ವಾರ್ಡನ್‌
ವಸತಿ ನಿಲಯದಲ್ಲಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ವಾರ್ಡನ್‌ ಪ್ರಭುಗೌಡ ಮಾತ್ರ ಹಾಸ್ಟೆಲ್‌ ಕಡೆ ಸುಳಿಯುತ್ತಿಲ್ಲ. ಅಡುಗೆದಾರರೇ ಇಲ್ಲಿ ಮೇಲ್ವಿಚಾರಕರಾಗಿದ್ದಾರೆ. ಸಮಸ್ಯೆ ಹೇಳಿಕೊಳ್ಳಲು ವಾರ್ಡನ್‌ಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ತಿಂಗಳಿಗೊಮ್ಮೆ ಬಂದು ಹಾಜರಿಗೆ ಸಹಿ ಮಾಡಿ ಹೋಗುತ್ತಾರೆ. ಹಾಸ್ಟೆಲ್‌ಗೆ ಬಂದರೂ ಕೈಗೆ ಸಿಗುತ್ತಿಲ್ಲ ಎಂದು ದೂರಿರುವ ವಿದ್ಯಾರ್ಥಿಗಳು, ಮೇಲಾ ಧಿಕಾರಿಗಳು ಹಾಸ್ಟೆಲ್‌ನಲ್ಲಿನ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದ್ದಾರೆ.

ಬ್ಯಾಗವಾಟ್‌ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ ಅವ್ಯವಸ್ಥೆ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಕೂಡಲೇ ಇಲಾಖೆಯ ಮಾನ್ವಿ ವಿಸ್ತರಣಾ ಧಿಕಾರಿ ಜಿ.ಎನ್‌. ಕ್ಯಾಡಿಯವರಿಗೆ ತಿಳಿಸುತ್ತೇನೆ. ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ.
ಎಂ.ಎಸ್‌.ಗೋನಾಳ,
ಜಿಲ್ಲಾ ಅಧಿಕಾರಿಗಳು,
ಡಿ.ದೇವರಾಜ್‌ ಅರಸು ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆ

ಹಾಸ್ಟೆಲ್‌ನಲ್ಲಿ ವ್ಯವಸ್ಥೆ ಸರಿ ಇಲ್ಲ. ಈ ಬಗ್ಗೆ ತಿಳಿಸಲು ವಾರ್ಡನ್‌ ನಮಗೆ ಸಿಗುತ್ತಿಲ್ಲ. ಸೊಳ್ಳೆಗಳು ಹೆಚ್ಚಾಗಿವೆ. ಶೌಚಕ್ಕೆ ಗುಡ್ಡಕ್ಕೆ ಹೋಗುತ್ತಿದ್ದೇವೆ. ಕುಡಿಯಲು ಶುದ್ಧ ನೀರಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ನಮಗೆ ಗಣಿತ, ವಿಜ್ಞಾನ, ಇಂಗ್ಲಿಷ್‌ ಟ್ಯೂಷನ್‌ ನಡೆಸಿಲ್ಲ. ವಾರ್ಡನ್‌ಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾವು ಶಾಲೆಗೆ ಹೊದ ಸಂದರ್ಭದಲ್ಲಿ ಹಾಸ್ಟೆಲ್‌ ಬಂದು ನಮಗೆ ಸಿಗದಂತೆ ಹೋಗುತ್ತಾರೆ. ಸಮಸ್ಯೆ ಕೇಳುವುದಿಲ್ಲ.
ವಿದ್ಯಾರ್ಥಿಗಳು

„ರವಿ ಶರ್ಮಾ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.