ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಖಾಸಗಿ ವ್ಯಕ್ತಿ ಬೀಗ

ಕರಡಿಗುಡ್ಡದ ಅಂಗನವಾಡಿ ಹಳೆ ಕಟ್ಟಡದಲ್ಲಿ ಚಿಕಿತ್ಸೆ „ ಆರೋಗ್ಯ ಇಲಾಖೆಗೆ ಹಸ್ತಾಂತರವಿಲ್ಲ 2014ರಲ್ಲೇ ನಿರ್ಮಿಸಿದ ಕಟ್ಟಡ

Team Udayavani, Mar 19, 2020, 12:23 PM IST

19-March-7

ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ 2014ರಲ್ಲಿ ನಿರ್ಮಿಸಿದ ಕಿರಿಯ ಆರೋಗ್ಯ ಸಹಾಯಕಿಯರ ಉಪ ಕೇಂದ್ರದ ಕಟ್ಟಡಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಬೀಗ ಜಡಿದಿದ್ದರಿಂದ ಇಲ್ಲಿನ ವೈದ್ಯರು ಹಳೇ ಅಂಗನವಾಡಿ ಕೇಂದ್ರದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಕೊಕ್ಲೃಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ನಂದಿಹಾಳ, ಹಿರೇಕೊಕ್ಲೃಕಲ್‌, ಸಂಗಾಪುರ, ಕರಡಿಗುಡ್ಡ ಸೇರಿ ನಾಲ್ಕು ಉಪ ಕೇಂದ್ರಗಳಿವೆ. ಕರಡಿಗುಡ್ಡ ಗ್ರಾಮದಲ್ಲಿ 2012-13ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆಯಡಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಂಡಿದ್ದು, 2014ರಲ್ಲೇ ಪೂರ್ಣಗೊಂಡಿದೆ.

ಈಗಾಗಲೇ ಆರು ವರ್ಷಗಳೆ ಕಳೆದಿದ್ದರೂ ಇದುವರೆಗೆ ಗುತ್ತಿಗೆದಾರರು ಕಟ್ಟಡವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿಲ್ಲ. ಹೀಗಾಗಿ ಇಲ್ಲಿನ ವೈದ್ಯರಿಗೆ ಚಿಕಿತ್ಸೆ ನೀಡಲು ಸ್ಥಳಾವಕಾಶವಿಲ್ಲದಂತಾಗಿದೆ. ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷéದಿಂದ ಚಿಕಿತ್ಸಾ ಸೌಲಭ್ಯದಿಂದ ವಂಚಿತರಾಗುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಟ್ಟಡಕ್ಕೆ ಬೀಗ: ಕರಡಿಗುಡ್ಡ ಆರೋಗ್ಯ ಉಪ ಕೇಂದ್ರಕ್ಕೆ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರು ಬೀಗ ಜಡಿದಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆ ಪಡೆದ ಮೆಕೋ ಕನ್‌ ಸ್ಟ್ರಕ್ಷನ್ಸ್‌ ಬೇರೊಬ್ಬ ಗುತ್ತಿಗೆದಾರನಿಗೆ ಉಪ ಗುತ್ತಿಗೆ ನೀಡಿತ್ತು. ಉಪ ಗುತ್ತಿಗೆ ಪಡೆದ ಗುತ್ತೇದಾರರು ತಮ್ಮ ಬಳಿ ಸಾಲ ಪಡೆದುಕೊಂಡಿದ್ದಾರೆ. ಆತ ಸಾಲ ವಾಪಸ್‌ ನೀಡಿಲ್ಲ. ಹಣ ನೀಡಿದರೆ ಕಟ್ಟಡ ಬಿಟ್ಟುಕೊಡುವುದಾಗಿ ಖಾಸಗಿ ವ್ಯಕ್ತಿ ಹೇಳುತ್ತಿದ್ದಾರೆನ್ನಲಾಗಿದೆ. ಅಲ್ಲದೆ ಉಪ ಗುತ್ತೇದಾರ ಈಗಾಗಲೇ ಮೃತಪಟ್ಟಿದ್ದಾರೆ ಎಂಬ ಮಾತಗಳು ಕೇಳಿಬರುತ್ತಿವೆ. ಹೀಗಾಗಿ ಸಾಲ ನೀಡಿದ ಖಾಸಗಿ ವ್ಯಕ್ತಿಗೆ ಆರೋಗ್ಯ ಉಪ ಕೇಂದ್ರದ ಕಟ್ಟಡಕ್ಕೆ ಬೀಗ ಹಾಕಿಕೊಂಡಿದ್ದಾರೆ. ಕೇಳಿದರೆ ಜಗಳಕ್ಕೆ ಬರುತ್ತಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಅಂಗನವಾಡಿ ಕಟ್ಟಡದಲ್ಲಿ ಚಿಕಿತ್ಸೆ: ಕೇಂದ್ರ ಸರ್ಕಾರಿ ಇತ್ತೀಚೆಗೆ ಪ್ರತಿ 5 ಸಾವಿರ ಜನಸಂಖ್ಯೆ ಇರುವ ಆರೋಗ್ಯ ಉಪ ಕೇಂದ್ರಗಳಿಗೆ ಎಂಎಲ್‌ಎಚ್‌ಪಿ (ಮಿಡಲ್‌ ಲೆವಲ್‌ ಹೆಲ್ತ್‌ ಪ್ರೊವೈಡರ್‌) ಎಂಬ ವೈದ್ಯರನ್ನು ನೇಮಕ ಮಾಡಿದೆ. ಅದರಂತೆ ಕರಡಿಗುಡ್ಡ ಆರೋಗ್ಯ ಉಪ ಕೇಂದ್ರಕ್ಕೂ ಎಂಎಲ್‌ಎಚ್‌ಪಿ ನೇಮಕ ಮಾಡಲಾಗಿದೆ.

ಇವರಿಗೆ ಕಾರ್ಯ ನಿರ್ವಹಿಸಲು ಸ್ಥಳ ಇಲ್ಲದ್ದರಿಂದ ಗ್ರಾಮದ ಹಳೇ ಅಂಗನವಾಡಿ ಕಟ್ಟಡದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಲ್ಲದೆ ಆಸ್ಪತ್ರೆಗಾಗಿ ಬಾಡಿಗೆ ಕಟ್ಟಡ ಹುಡುಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನಾದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಆಸ್ಪತ್ರೆ ಕಟ್ಟಡವನ್ನು ವಶಕ್ಕೆ ಪಡೆದು ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಆರೋಗ್ಯ ಇಲಾಖೆಯ ಆರೋಗ್ಯ ಉಪ ಕೇಂದ್ರ ಕಟ್ಟಡಗಳ ನಿರ್ಮಾಣಕ್ಕೆ ಪ್ಯಾಕೇಜ್‌ ಟೆಂಡರ್‌ ಪಡೆದುಕೊಂಡಿದ್ದೇವು. ಸಂಪೂರ್ಣ ಪ್ಯಾಕೇಜ್‌ ಕಾಮಗಾರಿಯನ್ನು ಇಲಾಖೆಗೆ ಹಸ್ತಾಂತರಿಸಿದ್ದೇವೆ. ಪ್ರತ್ಯೇಕವಾಗಿ ಒಂದೊಂದು ಕಟ್ಟಡಗಳನ್ನು ಹಸ್ತಾಂತರಿಸುವ ಅವಶ್ಯಕತೆ ಇಲ್ಲ. ಇಲಾಖೆ ಅಧಿಕಾರಿಗಳು ಮುಂದಾಗಿ ಕಟ್ಟಡ ವಶಕ್ಕೆ ಪಡೆದುಕೊಳ್ಳಬೇಕು. ನಮ್ಮದೇನೂ ಇಲ್ಲ.
ಎಂ.ಈರಣ್ಣ,
ಅಧ್ಯಕ್ಷರು, ಮೆಕೋ ಕನ್‌ಸ್ಟ್ರಕ್ಷನ್ಸ್‌, ಮಾನ್ವಿ

ಇದು ತುಂಬಾ ಹಳೇ ಪ್ರಕರಣವಾಗಿದೆ. ನನಗೆ ಸರಿಯಾದ ಮಾಹಿತಿ ಇಲ್ಲ. ಕರಡಿಗುಡ್ಡ ಆರೋಗ್ಯ ಉಪ ಕೇಂದ್ರದ ಬಗ್ಗೆ ಮಾನ್ವಿ ತಾಲೂಕು ವೈದ್ಯಾಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ. ಕಟ್ಟಡಕ್ಕೆ ಸಂಬಂಧಿ ಸಿದ ದಾಖಲೆಗಳನ್ನು ಪರಿಶೀಲಿಸಲಾಗುವುದು. ನಂತರ ಕಟ್ಟಡ ವಶಕ್ಕೆ ಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು.
ರಾಮಕೃಷ್ಣ,
ಜಿಲ್ಲಾ ವೈದ್ಯಾಧಿಕಾರಿ, ರಾಯಚೂರು

„ರವಿ ಶರ್ಮಾ

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.